Homeಮುಖಪುಟಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

ಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

- Advertisement -
- Advertisement -

ಗುರುವಾರ ಬೆಳಿಗ್ಗೆ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯ ಪ್ರಾರಂಭವಾಗುವ ಮೊದಲು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಸುತ್ತಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಪ್ರದಕ್ಷಿಣೆ ಹಾಕಿದರು.

‘ಕ್ರಿಕೆಟ್ ಮೂಲಕ ಸ್ನೇಹ’ ಎಂಬ ಸಂದೇಶವನ್ನು ಒಳಗೊಂಡಿರುವ ರಥದಂತಹ ವಾಹನವನ್ನು ಈ ಇಬ್ಬರು ನಾಯಕರು ಏರಿದ್ದರು.

ಮೋದಿ ಅವರು ತಮ್ಮ ಹೆಸರಿನಲ್ಲೇ ಇರುವ ಕ್ರೀಡಾಂಗಣದ ಸುತ್ತಲೂ ಪ್ರದಕ್ಷಿಣೆ ಹೋದರು. ಬಿಸಿಸಿಐ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಮೋದಿಯವರ ಚಿತ್ರವನ್ನು ಮೋದಿಯವರಿಗೆಯೇ ಉಡುಗೊರೆಯಾಗಿ ನೀಡಿದರು. ಈ ಕ್ರೀಡಾಂಗಣವನ್ನು ನವೀಕರಿಸಿ ಮರುನಾಮಕರಣ ಮಾಡಿದ ನಂತರ ಮೋದಿಯವರು ಇಲ್ಲಿಗೆ ನೀಡಿರುವ ಮೊದಲ ಭೇಟಿ ಇದಾಗಿತ್ತು.

ಕೆಲವು ವಿಶ್ಲೇಷಕರ ಪ್ರಕಾರ, “ಈ ಘಟನೆಯು ಕ್ರಿಕೆಟ್ ಪಂದ್ಯಕ್ಕಿಂತ ಹೆಚ್ಚಾಗಿ ರಾಜಕೀಯ ರ್‍ಯಾಲಿಯಂತೆ ತೋರುತ್ತಿದೆ. ಈ ಟೆಸ್ಟ್ ಪಂದ್ಯದ ಮೊದಲ ದಿನದಂದು 80,000 ಟಿಕೆಟ್‌ಗಳನ್ನು ಬಿಜೆಪಿ ಖರೀದಿಸಿದೆ ಎಂದು ಗುಜರಾತಿ ಪತ್ರಿಕೆ ದಿವ್ಯಾ ಭಾಸ್ಕರ್ ವರದಿ ಮಾಡಿದೆ. ಈ ಕ್ರೀಡಾಂಗಣದಲ್ಲಿ ಸುಮಾರು 1,30,000 ಜನರು ಕುಳಿತುಕೊಳ್ಳಬಹುದು.”

ಪಂದ್ಯಕ್ಕೆ ಟಿಕೆಟ್ ಖರೀದಿಸಲು ಸೂಚನೆ ನೀಡಲಾಗಿದೆ ಎಂದು ಗುಜರಾತ್‌ನ ನಾಲ್ವರು ಬಿಜೆಪಿ ಶಾಸಕರು ‘ದಿ ವೈರ್‌’ ಜಾಲತಾಣಕ್ಕೆ ತಿಳಿಸಿದ್ದಾರೆ. ತಾನೊಬ್ಬನೇ 12,000 ಟಿಕೆಟ್ ಖರೀದಿಸಿದ್ದೇನೆ ಎಂದು ಶಾಸಕರೊಬ್ಬರು ಹೇಳಿದ್ದಾರೆ. ಟಿಕೆಟ್‌ಗಳನ್ನು ಮಾರಾಟ ಮಾಡುವ ‘ಬುಕ್‌ಮೈಷೋ’ಅನ್ನು ‘ದಿ ವೈರ್’ ಸಂಪರ್ಕಿಸಿದ್ದು, ಪ್ರತಿಕ್ರಿಯೆ ನೀಡಲು ಬುಕ್‌ಮೈಷೋ ನಿರಾಕರಿಸಿದೆ.

ಗುಜರಾತ್‌ನ ಕಾಂಗ್ರೆಸ್ ಶಾಸಕ ಅರ್ಜುನ್ ಮೊದ್ವಾಡಿಯಾ ಪ್ರತಿಕ್ರಿಯಿಸಿದ್ದು, “ಕ್ರಿಕೆಟ್ ಪಂದ್ಯವನ್ನು ಈ ರೀತಿಯಲ್ಲಿ ರಾಜಕೀಯಗೊಳಿಸಲು ಬಿಸಿಸಿಐ ಅನುಮತಿ ನೀಡಿದೆ” ಎಂದು ಟೀಕಿಸಿದ್ದಾರೆ.

“ಕ್ರಿಕೆಟ್‌ನಂತಹ ಶ್ರೇಷ್ಠ ಕ್ರೀಡೆಯನ್ನು ರಾಜಕೀಯ ರಂಗಕ್ಕೆ ಇಳಿಸುವುದು ಹಾಸ್ಯಾಸ್ಪದವಾಗಿದೆ” ಎಂದು ಅವರು ‘ದಿ ವೈರ್‌’ಗೆ ತಿಳಿಸಿದ್ದಾರೆ. ಈ ರೀತಿಯಾಗಿ ಟಿಕೆಟ್ ಅನ್ನು ಖರೀದಿಸುವ ಮೂಲಕ ಭಾರತೀಯ ಜನತಾ ಪಕ್ಷವು ಕ್ರಿಕೆಟ್‌ ಪಂದ್ಯವನ್ನು ರಾಜಕೀಯಗೊಳಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿದೇಶದಿಂದ ಬಂದಿದ್ದ ಕ್ರಿಕೆಟ್‌ ಅಭಿಮಾನಿಗಳು ಈ ನಿರ್ದಿಷ್ಟ ಪಂದ್ಯಕ್ಕಾಗಿ ಟಿಕೆಟ್ ಪಡೆಯಲು ಪರದಾಡಬೇಕಾಯಿತು ಎಂದು ವರದಿಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಟಿಕೆಟ್ ಪಡೆಯಲು ಸಾಧ್ಯವಾಯಿತು ಎಂದು ‘ಎಬಿಸಿ ನ್ಯೂಸ್’ ವರದಿ ಮಾಡಿದೆ.

ಇದನ್ನೂ ಓದಿರಿ: ಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

ಒತ್ತಡ ಸೃಷ್ಟಿಯಾದ ನಂತರವೇ ಆಸ್ಟ್ರೇಲಿಯನ್ನರಿಗೆ ಇನ್ನೂ ಕೆಲವು ಟಿಕೆಟ್‌ಗಳು ಲಭ್ಯವಾದವು. “ಆಸೀಸ್ ಅಭಿಮಾನಿಗಳಿಗೆ ಟಿಕೆಟ್ ಖರೀದಿಸಲು ಕ್ರೀಡಾಂಗಣದಲ್ಲಿ ಬಾಕ್ಸ್ ಆಫೀಸ್ ಅನ್ನು ತೆರೆಯಲಾಗುತ್ತಿದೆ” ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಟ್ವೀಟ್ ಮಾಡಿತು.

ವಿಐಪಿಗಳ ಭೇಟಿಗೆ ಮುಂಚಿತವಾಗಿ, ಅಹಮದಾಬಾದ್‌ನ ಬೀದಿಗಳನ್ನು ಸ್ವಚ್ಛಗೊಳಿಸಲಾಯಿತು ಮತ್ತು ಪೋಸ್ಟರ್‌ಗಳನ್ನು ಹಾಕಲಾಗಿತ್ತು.

ಈ ಕುರಿತು ಆಸ್ಟ್ರೇಲಿಯಾದಲ್ಲಿ ಪ್ರಶ್ನೆಗಳು ಎದ್ದಿದ್ದು, ನಮ್ಮ ದೇಶವು ಭಾರತದ ಆಡಳಿತ ಪಕ್ಷವನ್ನು ಈ ರೀತಿ ಏಕೆ ಅನುಮೋದಿಸುತ್ತಿದೆ ಎಂಬ ಕೇಳುತ್ತಿರುವುದಾಗಿ ವರದಿಗಳಾಗಿವೆ.

“ಅಸಹಿಷ್ಣುತೆಯನ್ನು ನಾವ್ಯಾಕೆ ಸಹಿಸಿಕೊಳ್ಳುತ್ತಿದ್ದೇವೆ?” ಎಂದು ಕ್ರಿಕೆಟ್ ಬರಹಗಾರ ಗಿಡಿಯಾರ್‌ ಹೈ ಅವರು ‘ಆಸ್ಪ್ರೇಲಿಯನ್‌’ ವೆಬ್‌ಸೈಟ್‌ನಲ್ಲಿ ಬರೆದಿರುವ ಲೇಖನ ಹಲವಾರು ಮಹತ್ವದ ಸಂಗತಿಗಳನ್ನು ಉಲ್ಲೇಖಿಸಿದೆ. ವಿಶೇಷವಾಗಿ 2002ರ ಗುಜರಾತ್ ಗಲಭೆಗಳ ಸಮಯದಲ್ಲಿ ಮೋದಿಯವರ ಆಡಳಿತ ವೈಖರಿಯ ಬಗ್ಗೆ ಗಿರಿಯಾರ್‌‌ ಪ್ರಸ್ತಾಪಿಸಿದ್ದಾರೆ.

ಮೋದಿಯವರು ಭೇಟಿ ನೀಡುವ ಇತರ ಕಾರ್ಯಕ್ರಮಗಳಂತೆ ಈ ಪಂದ್ಯವು ಹೇಗೆ ಪಿಆರ್‌ ಕಸರತ್ತಾಗಿ ಕಂಡು ಬಂದಿತು ಎಂಬುದನ್ನು ‘ಎಬಿಸಿ ನ್ಯೂಸ್‌’ ವರದಿ ಪ್ರಸ್ತಾಪಿಸಿದೆ.

ಆಸ್ಟ್ರೇಲಿಯಾದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪ್ರಧಾನ ಮಂತ್ರಿಯ ಮುಖವನ್ನು ಇಷ್ಟೊಂದು ಪ್ರಮುಖವಾಗಿ ಪ್ರದರ್ಶಿಸುವುದನ್ನು ನೋಡುವುದು ಕೇಳರಿಯದ ಸಂಗತಿಯಾಗಿದೆ. ವಾಸ್ತವವಾಗಿ ಅನೇಕ ಕ್ರೀಡಾಭಿಮಾನಿಗಳು (ಈ ಘಟನೆಯಿಂದ) ಅಸಮಾಧಾನಗೊಂಡಿರಬಹುದು ಎನ್ನಲಾಗುತ್ತಿದೆ.

(ವರದಿ ಕೃಪೆ: ದಿ ವೈರ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...