Homeಮುಖಪುಟಇದು ಪ್ರಜಾಪ್ರಭುತ್ವವೇ?: ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ

ಇದು ಪ್ರಜಾಪ್ರಭುತ್ವವೇ?: ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಅಧಿಕಾರವನ್ನು ಗೊಂದಲಗೊಳಿಸುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದೆ ಎಂದು ಮಧ್ಯಪ್ರದೇಶ ಸರ್ಕಾರದ ಬಿಕ್ಕಟ್ಟಿನ ಬಗ್ಗೆ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದೆ. ಆಡಳಿತ ಪಕ್ಷ ಕಾಂಗ್ರೆಸ್ ಪರವಾಗಿ ಹಾಜರಾದ ಹಿರಿಯ ವಕೀಲ ದುಶ್ಯಂತ್ ದವೆ, ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಅಪಹರಿಸಿ ಸರ್ಕಾರವನ್ನು ಅಸ್ಥಿರಗೊಳಿಸುವ “ಪಿತೂರಿ” ನಡೆಸುತ್ತಿದೆ ಎಂದು ಆರೋಪಿಸಿದರು.

ವಿಚಾರಣೆಯಲ್ಲಿ ಕಾಂಗ್ರೆಸ್ ಮಧ್ಯಪ್ರದೇಶ ಆರು ಶಾಸಕರ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಉಪಚುನಾವಣೆ ಪೂರ್ಣಗೊಳ್ಳುವವರೆಗೆ ಬಿಜೆಪಿ ಕರೆದಿರುವ ವಿಶ್ವಾಸ ಮತ ಯಾಚನೆಯನ್ನು ಮುಂದೂಡಲು ಕೋರಿತು. ರಾಜ್ಯಪಾಲ ಲಾಲ್ ಜಿ ಟಂಡನ್ ಅವರ ಅಸಂವಿಧಾನಿಕ ವಿಶ್ವಾಸ ಮತ ಯಾಚನೆ ಮತ್ತು ಮಧ್ಯರಾತ್ರಿಯ ಸಂದೇಶಗಳ ಬಗ್ಗೆ ಟೀಕಿಸುತ್ತಾ “ಇದು ಪ್ರಜಾಪ್ರಭುತ್ವವೇ? ಶಾಸಕರನ್ನು ಅಪಹರಿಸಿ ಎಲ್ಲಿ ಇಡಲಾಗಿದೆ?” ಎಂದು ದುಶ್ಯಂತ್ ದವೆ ಕೇಳಿದರು.

ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಪರ ಹಿರಿಯ ವಕೀಲ ಮುಕುಲ್ ರೋಹಟ್ಗಿ “ಕಾಂಗ್ರೆಸಿಗೆ ಗೆಲ್ಲುವ ಭರವಸೆ ಇಲ್ಲ”. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಸಾಮೂಹಿಕ ಹತ್ಯೆಗೆ ಕಾರಣವಾದ ಕಾಂಗ್ರೆಸಿಗೆ ಅಧಿಕಾರದಲ್ಲಿ ಉಳಿಯಲು ಯಾವುದೇ ಕಾನೂನುಬದ್ಧ ಹಕ್ಕಿಲ್ಲ” ಎಂದಿದ್ದಾರೆ.

ಬಿಜೆಪಿ ತನ್ನ ಶಾಸಕರನ್ನು ಅಪಹರಿಸಿ ರಾಜೀನಾಮೆ ನೀಡುವಂತೆ ಒತ್ತಾಯಿಸಿ, ಆ ಮೂಲಕ ಪಕ್ಷವನ್ನು ವಿಧಾನಸಭೆಯಲ್ಲಿ ಅಸ್ಥಿರಗೊಳಿಸಿ ಅಧಿಕಾರದ ಪಡೆಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು.

ಪಕ್ಷವು ತನ್ನ ಅರ್ಜಿಯಲ್ಲಿ ಬೆಂಗಳೂರಿನಲ್ಲಿ ಸೆರೆಯಾಳಾಗಿರುವ ಶಾಸಕರಿಗೆ ಸಹಾಯ ಮಾಡುವಂತೆ ನ್ಯಾಯಾಲಯವನ್ನು ಕೇಳಿದೆ. ಇಡೀ ಅಸೆಂಬ್ಲಿ ಇಲ್ಲದೆ ಅಧಿವೇಶನದಲ್ಲಿ ವಿಶ್ವಾಸ ಮತ ಯಾಚನೆಯನ್ನು ನಡೆಸಲು ಸಾಧ್ಯವಿಲ್ಲ ಎಂದು ಸೂಚಿಸಿದರು. “ಕಾಂಗ್ರೆಸ್-ಮುಕ್ತ ಭಾರತ” ಎಂದು ಪ್ರಧಾನಿ ನರೇಂದ್ರ ಮೋದಿಯವರು ಪದೇ ಪದೇ ಹೇಳುವ ಮಾತನ್ನು ದುಶ್ಯಂತ್ ದವೆ ಉಲ್ಲೇಖಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ಇಪ್ಪತ್ತೆರಡು ಶಾಸಕರು ರಾಜೀನಾಮೆ ಪತ್ರಗಳನ್ನು ಸಲ್ಲಿಸಿದ್ದರು. ರಾಜೀನಾಮೆಗಳಲ್ಲಿ ಆರನ್ನು ಮಾತ್ರ ಸ್ಪೀಕರ್ ಅಂಗೀಕರಿಸಿದ್ದು ಉಳಿದವನ್ನು ಅಂಗೀಕರಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...