Homeಮುಖಪುಟದೇಶದ ಕಾನೂನಿಗಿಂತ ವಿಎಚ್‌ಪಿ ದೊಡ್ಡದೆ?: ಅಮಿತ್‌ ಶಾಗೆ ಕೆಟಿಆರ್ ಪ್ರಶ್ನೆ

ದೇಶದ ಕಾನೂನಿಗಿಂತ ವಿಎಚ್‌ಪಿ ದೊಡ್ಡದೆ?: ಅಮಿತ್‌ ಶಾಗೆ ಕೆಟಿಆರ್ ಪ್ರಶ್ನೆ

- Advertisement -
- Advertisement -

‘ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ದೇಶದ ಕಾನೂನಿಗಿಂತ ದೊಡ್ಡದೆ?’ ಎಂದು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಾಧ್ಯಕ್ಷ, ತೆಲಂಗಾಣ ರಾಜ್ಯ ಸಚಿವ ಕೆ.ಟಿ.ರಾಮರಾವ್ ಪ್ರಶ್ನಿಸಿದ್ದಾರೆ.

ಜಹಾಂಗೀರ್‌ಪುರಿಯಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನ್ನ ಕಾರ್ಯಕರ್ತರ ವಿರುದ್ಧ ಯಾವುದೇ ಕ್ರಮ ಕೈಗೊಂಡರೆ ದೆಹಲಿ ಪೊಲೀಸರ ವಿರುದ್ಧ ಹೋರಾಟ ನಡೆಸುವುದಾಗಿ ವಿಎಚ್‌ಪಿ ಬೆದರಿಕೆ ಹಾಕಿರುವ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೆಹಲಿ ಪೊಲೀಸರ ವಿರುದ್ಧದ ಇಂತಹ ಅತಿರೇಕದ ಅಸಂಬದ್ಧತೆಯನ್ನು ಸಹಿಸುತ್ತೀರಾ” ಎಂದು ಕೆಟಿಆರ್‌‌, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೇಳಿದ್ದಾರೆ.

“ಗೃಹ ಸಚಿವ ಅಮಿತ್ ಶಾಜೀ, ಈ ವ್ಯಕ್ತಿಗಳು ದೇಶದ ಕಾನೂನು ಮತ್ತು ಐಪಿಸಿ (ಭಾರತೀಯ ದಂಡ ಸಂಹಿತೆ)ಗಿಂತ ಮೇಲಿದ್ದಾರೆಯೇ?” ಎಂದು ಕೆಟಿಆರ್ ಟ್ವೀಟ್ ಮಾಡಿದ್ದು, “ನಿಮಗೆ ನೇರವಾಗಿ ವರದಿ ಮಾಡುವ ದೆಹಲಿ ಪೊಲೀಸರ ವಿರುದ್ಧ  ಇಂತಹ ಅತಿರೇಕದ ಅಸಂಬದ್ಧತೆಯನ್ನು ನೀವು ಸಹಿಸಿಕೊಳ್ಳುತ್ತೀರಾ?” ಎಂದು ಕೇಳಿದ್ದಾರೆ.

ಎರಡು ದಿನಗಳ ಹಿಂದೆ ಕೋಮುಗಲಭೆ ಭುಗಿಲೆದ್ದ ಜಹಾಂಗೀರ್‌ಪುರಿಯಲ್ಲಿ ಹನುಮ ಜಯಂತಿ ಮೆರವಣಿಗೆಯನ್ನು ಅನುಮತಿಯಿಲ್ಲದೆ ರ್‍ಯಾಲಿ ನಡೆಸಿದ್ದಕ್ಕಾಗಿ ಆಯೋಜಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ವಿಎಚ್‌ಪಿ ಬೆದರಿಕೆ ಹಾಕಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಶನಿವಾರ ಸಂಜೆ ರ್‍ಯಾಲಿಯ ಸಂಘಟಕರ ವಿರುದ್ಧ ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರು ಘೋಷಿಸಿದ ಆದೇಶಕ್ಕೆ ಅವಿಧೇಯತೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವಾಯುವ್ಯ ದೆಹಲಿಯ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಉಷಾ ರಂಗನಾನಿ ಹೇಳಿದ್ದಾರೆ.

ಇದಕ್ಕೂ ಮುನ್ನ ಡಿಸಿಪಿ ಅಧಿಕೃತ ಸಂದೇಶ ರವಾನಿಸಿದ್ದು, ಅನುಮತಿ ಇಲ್ಲದೆ ಧಾರ್ಮಿಕ ಮೆರವಣಿಗೆ ನಡೆಸಿದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಸ್ಥಳೀಯ ವಿಎಚ್‌ಪಿ ನಾಯಕ ಪ್ರೇಮ್ ಶರ್ಮಾ ಅವರನ್ನು ಬಂಧಿಸಲಾಗಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ.

ಇಷ್ಟೆಲ್ಲ ಆದ ಮೇಲೆ ಹೇಳಿಕೆಯನ್ನು ಪೊಲೀಸರು ಹಿಂಪಡೆದ್ದಾರೆ. ಐಪಿಸಿ ಸೆಕ್ಷನ್ 188ರ ಅಡಿಯಲ್ಲಿನ ಅಪರಾಧವು ಜಾಮೀನಿಗೆ ಅರ್ಹವಾಗಿದೆ. ತನಿಖೆಗೆ ಸಂಬಂಧಿಸಿದ ವ್ಯಕ್ತಿಯನ್ನು ವಿಚಾರಣೆಯ ನಂತರ ಬಿಡುಗಡೆ ಮಾಡಲಾಗಿದೆ. ಪೊಲೀಸರು ನೀಡಿರುವ ಪರಿಷ್ಕೃತ ಹೇಳಿಕೆಯಲ್ಲಿ ವಿಎಚ್‌ಪಿ ಮತ್ತು ಬಜರಂಗದಳದ ಹೆಸರೂ ಕೂಡ ಇಲ್ಲ.

ಇದನ್ನೂ ಓದಿರಿ: ದಲಿತ್‌ ಫೈಲ್ಸ್‌‌: ಕೂಲಿ ಕೇಳಿದ ದಲಿತ ಬಾಲಕನಿಗೆ ಹಲ್ಲೆ ನಡೆಸಿ ಪಾದ ನೆಕ್ಕಿಸಿದ ದುಷ್ಕರ್ಮಿಗಳು

ಇದೇ ವೇಳೆ ಕೆಟಿಆರ್ ಮತ್ತೊಂದು ಟ್ವೀಟ್ ನಲ್ಲಿ ಎನ್‌ಡಿಎ ಸರ್ಕಾರವನ್ನು ಎನ್‌ಪಿಎ ಎಂದು ಬಣ್ಣಿಸಿದ್ದಾರೆ. “ಭಾರತದಲ್ಲಿ ನಿರುದ್ಯೋಗ 45 ವರ್ಷಗಳ ಗರಿಷ್ಠದ್ದಾಗಿದೆ, 30 ವರ್ಷಗಳ ಗರಿಷ್ಠ ಹಣದುಬ್ಬರ, ಇಂಧನ ಬೆಲೆಗಳ ಸಾರ್ವಕಾಲಿಕ ಹೆಚ್ಚಳ, ಎಲ್ಪಿಜಿ ಸಿಲಿಂಡರ್ ಬೆಲೆ ವಿಶ್ವದಲ್ಲೇ ಅತಿ ಹೆಚ್ಚು, ಆರ್‌ಬಿಐ ಗ್ರಾಹಕರ ವಿಶ್ವಾಸ ಕುಸಿತ” ಎಂದು ಅವರು ಕುಟುಕಿದ್ದಾರೆ.

“ನಾವು ಇದನ್ನು ಎನ್‌ಡಿಎ ಸರ್ಕಾರ ಎನ್ನಬೇಕೋ? ಎನ್‌ಪಿಎ ಸರ್ಕಾರ ಎಂದು ಕರೆಯಬೇಕೋ? ಭಕ್ತರಿಗೆ ಎನ್‌ಪಿಎ= ನಿರುಪಯುಕ್ತ ಆಸ್ತಿ (ನಾನ್‌ ಫರ್‍ಫಾರ್ಮಿಂಗ್‌ ಅಸೆಟ್‌)” ಎಂದು ಕೆಟಿಆರ್‌ ತಿವಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...