Homeಮುಖಪುಟನಿಮ್ಮ ಮನೆ 20 ವರ್ಷ ಹಳೆಯದೇ? ಹಾಗಾದರೆ ಕೂಡಲೇ ಕೆಡವಿ ಮತ್ತೆ ಕಟ್ಟಿಸಿ!

ನಿಮ್ಮ ಮನೆ 20 ವರ್ಷ ಹಳೆಯದೇ? ಹಾಗಾದರೆ ಕೂಡಲೇ ಕೆಡವಿ ಮತ್ತೆ ಕಟ್ಟಿಸಿ!

- Advertisement -
- Advertisement -

ನಿಮ್ಮ ಬಟ್ಟೆಗಳು ಒಂದು ವರ್ಷ ಹಳೆಯದೇ? ಹಾಗಿದ್ದಲ್ಲಿ ಅವನ್ನು ಕೂಡಲೇ ಹರಿದು ಹಾಕಿ ಹೊಸ ಬಟ್ಟೆ ಕೊಂಡುಕೊಳ್ಳಿರಿ. ಮೊಬೈಲ್ ಮೂರು ವರ್ಷ ಹಳೆಯದೇ, ಅದನ್ನು ಕೂಡಲೇ ಎಸೆದು ಹೊಸದೊಂದು ಕೊಳ್ಳಿರಿ.

ಲೇಖಕನಿಗೆ ತಲೆ ಕೆಟ್ಟಿದೆಯೇ ಎಂದು ಕೇಳಬೇಡಿ, ಬರುತ್ತೇನೆ ವಿಷಯಕ್ಕೆ.

ನಿಮ್ಮ ಕಾರು 20 ವರ್ಷ ಹಳೆಯದೇ? ಹಾಗಾದರೆ ಅದನ್ನು ಗುಜರಿಗೆ ಹಾಕಿ ಹೊಸ ಕಾರು ಖರೀದಿಸಿ ಎಂದು ಸರಕಾರ ಹೇಳಿದಾಗ ಯಾರನ್ನಾದರೂ ಪ್ರಶ್ನಿಸಿದಿರಾ, ಇಲ್ಲಾ ತಾನೆ? ಹಾಗಾದರೆ ನಾನು ಮೇಲೆ ಹೇಳಿದ ಮಾತುಗಳು ಶೀಘ್ರದಲ್ಲೇ ಸರಕಾರದ ಆದೇಶವಾಗಿ ಬರುವುದರಲ್ಲಿ ಸಂದೇಹವಿಲ್ಲ.

ಈ ಬಾರಿಯ ಬಜೆಟ್ ಮಂಡನೆಯಾದ ನಂತರ ಹಲವಾರು ಆರ್ಥಿಕ ತಜ್ಞರು ಮುಂಗಡಪತ್ರದಲ್ಲಿ ಕೇವಲ ಸಪ್ಪ್ಲೈ ಸೈಡನ್ನು ಗಮನಿಸಲಾಗಿದೆ, ಇದಕ್ಕೆ ಬೇಕಾದ ಡಿಮ್ಯಾಂಡ್ ಹೇಗೆ ಸರಕಾರ ಸೃಷ್ಟಿಸುತ್ತದೆ ಎನ್ನುವ ಬಗ್ಗೆ ವಿವರ ಇಲ್ಲ ಎಂದು ಗೊಣಗಿದ್ದರು. ಇದೋ ಇಲ್ಲಿದೆ ಡಿಮ್ಯಾಂಡ್ ಸೃಷ್ಟಿಯ ವಿವರ.

ಇದನ್ನೂ ಓದಿ: ಭಾರತದ ಪ್ರಗತಿಯನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವ ಕೃಷಿ ಕಾಯ್ದೆಗಳು

ಇತ್ತೀಚೆಗೆ ಬಂದ ಭಾರತ ಸರಕಾರದ “ಅದ್ವಿತೀಯ” ಮುಂಗಡಪತ್ರದಲ್ಲಿ ಹಳೆಯ ಕಾರಿನ ಪ್ರಸ್ತಾವನೆ ಇದೆ. ಕೇವಲ ಕಾರಿನ ಬಗ್ಗೆ ಮಾತನಾಡುವುದಾದರೆ ನನ್ನ ಕಾರು ನನ್ನ ವೈಯುಕ್ತಿಕ ವಿಚಾರ, ಇದರಲ್ಲಿ ಇನ್ನೊಬ್ಬರಿಗೆ ಮೂಗು ತೂರಿಸುವ ಅವಕಾಶವಿಲ್ಲ. ಭಾರತದಲ್ಲಿ ಹಿಂದಿನಿಂದಲೂ ಮಧ್ಯಮ ವರ್ಗದ ಜನರು ಜೀವನದಲ್ಲಿ ಒಂದೇ ಹೆಂಡತಿ, ಒಂದೇ ಮಗು, ಒಂದೇ ಮನೆ, ಒಂದೇ ಕಾರು ಎಂದು ಜೀವನ ಮಾಡಿದವರು. ಕಾರನ್ನು ಹೆಂಡತಿ ಅಥವಾ ಮಗುವಿನಷ್ಟೇ ಪ್ರೀತಿಯಿಂದ ಸಾಕಿದವರು. ಅದನ್ನು ಗುಜರಿಗೆ ಹಾಕುವುದು ಅವರಿಗೆ ಜೀರ್ಣವಾಗದ ಮಾತು. ವೈಯುಕ್ತಿಕ ವಿಚಾರಗಳು ಹಾಗಿರಲಿ.

PC: Google Sites

ನಮ್ಮ ಗ್ರಾಮೀಣ ಸಾರಿಗೆ ನಿಂತಿರುವುದೇ ಹಳೆಯ ವಾಹನಗಳ ಕೃಪೆಯಿಂದ. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲದೆ ಗ್ರಾಮೀಣ ಭಾಗದ ಜನರು ಹಳೆಯ ಮತ್ತು ಮಾರ್ಪಡಿಸಲ್ಪಟ್ಟ ವಾಹನಗಳನ್ನೇ ನಂಬಿಕೊಂಡು ಇದೇ ಗ್ರಾಮೀಣ ಸಾರಿಗೆ ಎಂದು ಜೀವನ ನಡೆಸುತ್ತಿದ್ದಾರೆ. ಹಾಗಾದರೆ ಅವರೆಲ್ಲಾ ಏನು ಮಾಡಬೇಕು. ಹಳೆಯ ವಾಹನಗಳ ರಿಪೇರಿ ಮಾಡಿ ಜೀವನ ನಡೆಸುತ್ತಿರುವ ಲಕ್ಷಾಂತರ ಮೆಕ್ಯಾನಿಕ್‌‌‌ಗಳು ಏನು ಮಾಡಬೇಕು.

ಇದನ್ನೂ ಓದಿ: ಓಡಿಒಪಿ: ಎಲ್ಲದರೊಳಗು ಸ್ವತಂತ್ರ ಬೇಕು ಅಂದ್ರ ಹೆಂಗ? 1947ರೊಳಗ ಸಿಕ್ಕದಲ್ಲಾ ಸಾಕು

ಒಂದು ಅಂದಾಜಿನ ಪ್ರಕಾರ 2000-2001 ರಲ್ಲಿ ದೇಶದಲ್ಲಿ ಸುಮಾರು ನಲವತ್ತು ಲಕ್ಷ ವಾಹನಗಳ ಉತ್ಪಾದನೆಯಾಗಿತ್ತು. ಅವೆಲ್ಲವೂ ಏಕಕಾಲಕ್ಕೆ ಗುಜರಿಗೆ ಹೋದರೆ ಅವನ್ನು ಕೊಂಡುಕೊಳ್ಳುವವರು ಯಾರು? ಬಹುಶ: ಮಹೀಂದ್ರ ಮತ್ತು ಟಾಟಾ ಈಗಾಗಲೇ ಅದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಂಡಿರಬಹು (ಅದಾನಿ ಪಂಜಾಬಿನಲ್ಲಿ ಧಾನ್ಯಸಂಗ್ರಹಣೆ ಗೋಡೌನ್ ಕಟ್ಟಿಸಿದಂತೆ). ಆಟೋಮೊಬೀಲ್ ಲಾಬಿ ಸರಕಾರಕ್ಕೆ ಕಪ್ಪಕಾಣಿಕೆ ಸಲ್ಲಿಸಿರಬಹುದೇನೋ, ಅದಕ್ಕಾಗಿ ಈ ಆದೇಶ ಎಂದು ಸಂದೇಹ ಮೂಡುವುದು ಸ್ವಾಭಾವಿಕ.

ಹಾಗಾದರೆ ನಾಳೆ ರಿಯಲ್ ಎಸ್ಟೇಟ್ ಲಾಬಿ ಭೇಟಿಯಾದಲ್ಲಿ ಎಲ್ಲಾ 20 ವರ್ಷ ಹಳೆಯ ಮನೆ ಕೆಡವಿ ಹೊಸ ಮನೆ ಕಟ್ಟಬೇಕೆಂಬ ಕಾನೂನು ಬಂದರೆ ಅಥವಾ ಬಟ್ಟೆ ಲಾಬಿ ಒತ್ತಡದ ಮೇರೆಗೆ ಎಲ್ಲರೂ ಪ್ರತಿ ವರ್ಷ ಹೊಸ ಬಟ್ಟೆಯನ್ನೇ ಕೊಳ್ಳಬೇಕೆಂಬ ಕಾನೂನು ಜಾರಿಯಾದರೆ ಏನೂ ಆಶ್ಚರ್ಯವಿಲ್ಲ.

ಗೌರಿ ಲಂಕೇಶ್ ಇಂಗ್ಲಿಷ್‌ ಯುಟ್ಯೂಬ್ ಚಾನೆಲ್ Gauri Lankesh News Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಇಷ್ಟೇ ಅಲ್ಲ, ಮನೆಯ ಪಾತ್ರೆ, ವಾಷಿಂಗ್ ಮಷಿನ್, ಮಿಕ್ಸರ್-ಗ್ರೈಂಡರ್, ಫ್ರಿಜ್, ಟಿವಿ, ಮೊಬೈಲ್, ಆಭರಣಗಳು, ಎಲ್ಲದಕ್ಕೂ ಎಕ್ಸ್ಪೈರಿ ಡೇಟ್ ಫಿಕ್ಸ್ ಆಗುತ್ತದೆ. ಇದೆಲ್ಲಾ ಕೊಂಡುಕೊಳ್ಳಲು ಹಣ ಎಲ್ಲಿಂದ ಬರುತ್ತದೆ ಎಂದು ನನ್ನನ್ನು ಕೇಳಬೇಡಿ, ವಿತ್ತಮಂತ್ರಿಗಳನ್ನು ಕೇಳಿ ನೋಡಿ. ಬಹುಶ: ಹೆಲಿಕಾಪ್ಟರ್ ಮನಿ. ಸರ್ಕಾರ ಗರಿಗರಿ ನೋಟು ಮುದ್ರಿಸಿ ಮೇಲಿನಿಂದ ಎಸೆಯಬಹುದು.

ಹೆಂಡತಿ/ಗಂಡ ಅದೇ ಇರಬೇಕೋ ಅಥವಾ ಅದೂ ಬದಲಾಯಿಸುತ್ತಿರಬೇಕೋ ಏನೋ ಗೊತ್ತಿಲ್ಲ. ವಿಚಾರಿಸಿ ನೋಡಿ.

 -ಜಿ.ಆರ್. ವಿದ್ಯಾರಣ್ಯ (ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ: ಪುಟಕ್ಕಿಟ್ಟ ಪುಟಗಳು: ಪುರುಷಾಧಿಪತ್ಯವನ್ನು ಪ್ರಶ್ನಿಸಿ ಆರೋಗ್ಯಕರ ಶೃಂಗಾರ ಪಾಠ ಹೇಳುವ ’ಪ್ರಾಚೀನ ಭಾರತದಲ್ಲಿ ಕಾಮಶಾಸ್ತ್ರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The Indian and state governments are implementing new new bills on public (scraping the old cars and two wheelers ) but it will be affecting only to the middle class families not to politicians nor rich families and it’s like a indirect death penalty to citizens of India.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...