Homeಮುಖಪುಟನಿಮ್ಮ ಮನೆ 20 ವರ್ಷ ಹಳೆಯದೇ? ಹಾಗಾದರೆ ಕೂಡಲೇ ಕೆಡವಿ ಮತ್ತೆ ಕಟ್ಟಿಸಿ!

ನಿಮ್ಮ ಮನೆ 20 ವರ್ಷ ಹಳೆಯದೇ? ಹಾಗಾದರೆ ಕೂಡಲೇ ಕೆಡವಿ ಮತ್ತೆ ಕಟ್ಟಿಸಿ!

- Advertisement -
- Advertisement -

ನಿಮ್ಮ ಬಟ್ಟೆಗಳು ಒಂದು ವರ್ಷ ಹಳೆಯದೇ? ಹಾಗಿದ್ದಲ್ಲಿ ಅವನ್ನು ಕೂಡಲೇ ಹರಿದು ಹಾಕಿ ಹೊಸ ಬಟ್ಟೆ ಕೊಂಡುಕೊಳ್ಳಿರಿ. ಮೊಬೈಲ್ ಮೂರು ವರ್ಷ ಹಳೆಯದೇ, ಅದನ್ನು ಕೂಡಲೇ ಎಸೆದು ಹೊಸದೊಂದು ಕೊಳ್ಳಿರಿ.

ಲೇಖಕನಿಗೆ ತಲೆ ಕೆಟ್ಟಿದೆಯೇ ಎಂದು ಕೇಳಬೇಡಿ, ಬರುತ್ತೇನೆ ವಿಷಯಕ್ಕೆ.

ನಿಮ್ಮ ಕಾರು 20 ವರ್ಷ ಹಳೆಯದೇ? ಹಾಗಾದರೆ ಅದನ್ನು ಗುಜರಿಗೆ ಹಾಕಿ ಹೊಸ ಕಾರು ಖರೀದಿಸಿ ಎಂದು ಸರಕಾರ ಹೇಳಿದಾಗ ಯಾರನ್ನಾದರೂ ಪ್ರಶ್ನಿಸಿದಿರಾ, ಇಲ್ಲಾ ತಾನೆ? ಹಾಗಾದರೆ ನಾನು ಮೇಲೆ ಹೇಳಿದ ಮಾತುಗಳು ಶೀಘ್ರದಲ್ಲೇ ಸರಕಾರದ ಆದೇಶವಾಗಿ ಬರುವುದರಲ್ಲಿ ಸಂದೇಹವಿಲ್ಲ.

ಈ ಬಾರಿಯ ಬಜೆಟ್ ಮಂಡನೆಯಾದ ನಂತರ ಹಲವಾರು ಆರ್ಥಿಕ ತಜ್ಞರು ಮುಂಗಡಪತ್ರದಲ್ಲಿ ಕೇವಲ ಸಪ್ಪ್ಲೈ ಸೈಡನ್ನು ಗಮನಿಸಲಾಗಿದೆ, ಇದಕ್ಕೆ ಬೇಕಾದ ಡಿಮ್ಯಾಂಡ್ ಹೇಗೆ ಸರಕಾರ ಸೃಷ್ಟಿಸುತ್ತದೆ ಎನ್ನುವ ಬಗ್ಗೆ ವಿವರ ಇಲ್ಲ ಎಂದು ಗೊಣಗಿದ್ದರು. ಇದೋ ಇಲ್ಲಿದೆ ಡಿಮ್ಯಾಂಡ್ ಸೃಷ್ಟಿಯ ವಿವರ.

ಇದನ್ನೂ ಓದಿ: ಭಾರತದ ಪ್ರಗತಿಯನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವ ಕೃಷಿ ಕಾಯ್ದೆಗಳು

ಇತ್ತೀಚೆಗೆ ಬಂದ ಭಾರತ ಸರಕಾರದ “ಅದ್ವಿತೀಯ” ಮುಂಗಡಪತ್ರದಲ್ಲಿ ಹಳೆಯ ಕಾರಿನ ಪ್ರಸ್ತಾವನೆ ಇದೆ. ಕೇವಲ ಕಾರಿನ ಬಗ್ಗೆ ಮಾತನಾಡುವುದಾದರೆ ನನ್ನ ಕಾರು ನನ್ನ ವೈಯುಕ್ತಿಕ ವಿಚಾರ, ಇದರಲ್ಲಿ ಇನ್ನೊಬ್ಬರಿಗೆ ಮೂಗು ತೂರಿಸುವ ಅವಕಾಶವಿಲ್ಲ. ಭಾರತದಲ್ಲಿ ಹಿಂದಿನಿಂದಲೂ ಮಧ್ಯಮ ವರ್ಗದ ಜನರು ಜೀವನದಲ್ಲಿ ಒಂದೇ ಹೆಂಡತಿ, ಒಂದೇ ಮಗು, ಒಂದೇ ಮನೆ, ಒಂದೇ ಕಾರು ಎಂದು ಜೀವನ ಮಾಡಿದವರು. ಕಾರನ್ನು ಹೆಂಡತಿ ಅಥವಾ ಮಗುವಿನಷ್ಟೇ ಪ್ರೀತಿಯಿಂದ ಸಾಕಿದವರು. ಅದನ್ನು ಗುಜರಿಗೆ ಹಾಕುವುದು ಅವರಿಗೆ ಜೀರ್ಣವಾಗದ ಮಾತು. ವೈಯುಕ್ತಿಕ ವಿಚಾರಗಳು ಹಾಗಿರಲಿ.

PC: Google Sites

ನಮ್ಮ ಗ್ರಾಮೀಣ ಸಾರಿಗೆ ನಿಂತಿರುವುದೇ ಹಳೆಯ ವಾಹನಗಳ ಕೃಪೆಯಿಂದ. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲದೆ ಗ್ರಾಮೀಣ ಭಾಗದ ಜನರು ಹಳೆಯ ಮತ್ತು ಮಾರ್ಪಡಿಸಲ್ಪಟ್ಟ ವಾಹನಗಳನ್ನೇ ನಂಬಿಕೊಂಡು ಇದೇ ಗ್ರಾಮೀಣ ಸಾರಿಗೆ ಎಂದು ಜೀವನ ನಡೆಸುತ್ತಿದ್ದಾರೆ. ಹಾಗಾದರೆ ಅವರೆಲ್ಲಾ ಏನು ಮಾಡಬೇಕು. ಹಳೆಯ ವಾಹನಗಳ ರಿಪೇರಿ ಮಾಡಿ ಜೀವನ ನಡೆಸುತ್ತಿರುವ ಲಕ್ಷಾಂತರ ಮೆಕ್ಯಾನಿಕ್‌‌‌ಗಳು ಏನು ಮಾಡಬೇಕು.

ಇದನ್ನೂ ಓದಿ: ಓಡಿಒಪಿ: ಎಲ್ಲದರೊಳಗು ಸ್ವತಂತ್ರ ಬೇಕು ಅಂದ್ರ ಹೆಂಗ? 1947ರೊಳಗ ಸಿಕ್ಕದಲ್ಲಾ ಸಾಕು

ಒಂದು ಅಂದಾಜಿನ ಪ್ರಕಾರ 2000-2001 ರಲ್ಲಿ ದೇಶದಲ್ಲಿ ಸುಮಾರು ನಲವತ್ತು ಲಕ್ಷ ವಾಹನಗಳ ಉತ್ಪಾದನೆಯಾಗಿತ್ತು. ಅವೆಲ್ಲವೂ ಏಕಕಾಲಕ್ಕೆ ಗುಜರಿಗೆ ಹೋದರೆ ಅವನ್ನು ಕೊಂಡುಕೊಳ್ಳುವವರು ಯಾರು? ಬಹುಶ: ಮಹೀಂದ್ರ ಮತ್ತು ಟಾಟಾ ಈಗಾಗಲೇ ಅದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಂಡಿರಬಹು (ಅದಾನಿ ಪಂಜಾಬಿನಲ್ಲಿ ಧಾನ್ಯಸಂಗ್ರಹಣೆ ಗೋಡೌನ್ ಕಟ್ಟಿಸಿದಂತೆ). ಆಟೋಮೊಬೀಲ್ ಲಾಬಿ ಸರಕಾರಕ್ಕೆ ಕಪ್ಪಕಾಣಿಕೆ ಸಲ್ಲಿಸಿರಬಹುದೇನೋ, ಅದಕ್ಕಾಗಿ ಈ ಆದೇಶ ಎಂದು ಸಂದೇಹ ಮೂಡುವುದು ಸ್ವಾಭಾವಿಕ.

ಹಾಗಾದರೆ ನಾಳೆ ರಿಯಲ್ ಎಸ್ಟೇಟ್ ಲಾಬಿ ಭೇಟಿಯಾದಲ್ಲಿ ಎಲ್ಲಾ 20 ವರ್ಷ ಹಳೆಯ ಮನೆ ಕೆಡವಿ ಹೊಸ ಮನೆ ಕಟ್ಟಬೇಕೆಂಬ ಕಾನೂನು ಬಂದರೆ ಅಥವಾ ಬಟ್ಟೆ ಲಾಬಿ ಒತ್ತಡದ ಮೇರೆಗೆ ಎಲ್ಲರೂ ಪ್ರತಿ ವರ್ಷ ಹೊಸ ಬಟ್ಟೆಯನ್ನೇ ಕೊಳ್ಳಬೇಕೆಂಬ ಕಾನೂನು ಜಾರಿಯಾದರೆ ಏನೂ ಆಶ್ಚರ್ಯವಿಲ್ಲ.

ಗೌರಿ ಲಂಕೇಶ್ ಇಂಗ್ಲಿಷ್‌ ಯುಟ್ಯೂಬ್ ಚಾನೆಲ್ Gauri Lankesh News Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಇಷ್ಟೇ ಅಲ್ಲ, ಮನೆಯ ಪಾತ್ರೆ, ವಾಷಿಂಗ್ ಮಷಿನ್, ಮಿಕ್ಸರ್-ಗ್ರೈಂಡರ್, ಫ್ರಿಜ್, ಟಿವಿ, ಮೊಬೈಲ್, ಆಭರಣಗಳು, ಎಲ್ಲದಕ್ಕೂ ಎಕ್ಸ್ಪೈರಿ ಡೇಟ್ ಫಿಕ್ಸ್ ಆಗುತ್ತದೆ. ಇದೆಲ್ಲಾ ಕೊಂಡುಕೊಳ್ಳಲು ಹಣ ಎಲ್ಲಿಂದ ಬರುತ್ತದೆ ಎಂದು ನನ್ನನ್ನು ಕೇಳಬೇಡಿ, ವಿತ್ತಮಂತ್ರಿಗಳನ್ನು ಕೇಳಿ ನೋಡಿ. ಬಹುಶ: ಹೆಲಿಕಾಪ್ಟರ್ ಮನಿ. ಸರ್ಕಾರ ಗರಿಗರಿ ನೋಟು ಮುದ್ರಿಸಿ ಮೇಲಿನಿಂದ ಎಸೆಯಬಹುದು.

ಹೆಂಡತಿ/ಗಂಡ ಅದೇ ಇರಬೇಕೋ ಅಥವಾ ಅದೂ ಬದಲಾಯಿಸುತ್ತಿರಬೇಕೋ ಏನೋ ಗೊತ್ತಿಲ್ಲ. ವಿಚಾರಿಸಿ ನೋಡಿ.

 -ಜಿ.ಆರ್. ವಿದ್ಯಾರಣ್ಯ (ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ: ಪುಟಕ್ಕಿಟ್ಟ ಪುಟಗಳು: ಪುರುಷಾಧಿಪತ್ಯವನ್ನು ಪ್ರಶ್ನಿಸಿ ಆರೋಗ್ಯಕರ ಶೃಂಗಾರ ಪಾಠ ಹೇಳುವ ’ಪ್ರಾಚೀನ ಭಾರತದಲ್ಲಿ ಕಾಮಶಾಸ್ತ್ರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The Indian and state governments are implementing new new bills on public (scraping the old cars and two wheelers ) but it will be affecting only to the middle class families not to politicians nor rich families and it’s like a indirect death penalty to citizens of India.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...