Homeಮುಖಪುಟನಿಮ್ಮ ಮನೆ 20 ವರ್ಷ ಹಳೆಯದೇ? ಹಾಗಾದರೆ ಕೂಡಲೇ ಕೆಡವಿ ಮತ್ತೆ ಕಟ್ಟಿಸಿ!

ನಿಮ್ಮ ಮನೆ 20 ವರ್ಷ ಹಳೆಯದೇ? ಹಾಗಾದರೆ ಕೂಡಲೇ ಕೆಡವಿ ಮತ್ತೆ ಕಟ್ಟಿಸಿ!

- Advertisement -
- Advertisement -

ನಿಮ್ಮ ಬಟ್ಟೆಗಳು ಒಂದು ವರ್ಷ ಹಳೆಯದೇ? ಹಾಗಿದ್ದಲ್ಲಿ ಅವನ್ನು ಕೂಡಲೇ ಹರಿದು ಹಾಕಿ ಹೊಸ ಬಟ್ಟೆ ಕೊಂಡುಕೊಳ್ಳಿರಿ. ಮೊಬೈಲ್ ಮೂರು ವರ್ಷ ಹಳೆಯದೇ, ಅದನ್ನು ಕೂಡಲೇ ಎಸೆದು ಹೊಸದೊಂದು ಕೊಳ್ಳಿರಿ.

ಲೇಖಕನಿಗೆ ತಲೆ ಕೆಟ್ಟಿದೆಯೇ ಎಂದು ಕೇಳಬೇಡಿ, ಬರುತ್ತೇನೆ ವಿಷಯಕ್ಕೆ.

ನಿಮ್ಮ ಕಾರು 20 ವರ್ಷ ಹಳೆಯದೇ? ಹಾಗಾದರೆ ಅದನ್ನು ಗುಜರಿಗೆ ಹಾಕಿ ಹೊಸ ಕಾರು ಖರೀದಿಸಿ ಎಂದು ಸರಕಾರ ಹೇಳಿದಾಗ ಯಾರನ್ನಾದರೂ ಪ್ರಶ್ನಿಸಿದಿರಾ, ಇಲ್ಲಾ ತಾನೆ? ಹಾಗಾದರೆ ನಾನು ಮೇಲೆ ಹೇಳಿದ ಮಾತುಗಳು ಶೀಘ್ರದಲ್ಲೇ ಸರಕಾರದ ಆದೇಶವಾಗಿ ಬರುವುದರಲ್ಲಿ ಸಂದೇಹವಿಲ್ಲ.

ಈ ಬಾರಿಯ ಬಜೆಟ್ ಮಂಡನೆಯಾದ ನಂತರ ಹಲವಾರು ಆರ್ಥಿಕ ತಜ್ಞರು ಮುಂಗಡಪತ್ರದಲ್ಲಿ ಕೇವಲ ಸಪ್ಪ್ಲೈ ಸೈಡನ್ನು ಗಮನಿಸಲಾಗಿದೆ, ಇದಕ್ಕೆ ಬೇಕಾದ ಡಿಮ್ಯಾಂಡ್ ಹೇಗೆ ಸರಕಾರ ಸೃಷ್ಟಿಸುತ್ತದೆ ಎನ್ನುವ ಬಗ್ಗೆ ವಿವರ ಇಲ್ಲ ಎಂದು ಗೊಣಗಿದ್ದರು. ಇದೋ ಇಲ್ಲಿದೆ ಡಿಮ್ಯಾಂಡ್ ಸೃಷ್ಟಿಯ ವಿವರ.

ಇದನ್ನೂ ಓದಿ: ಭಾರತದ ಪ್ರಗತಿಯನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವ ಕೃಷಿ ಕಾಯ್ದೆಗಳು

ಇತ್ತೀಚೆಗೆ ಬಂದ ಭಾರತ ಸರಕಾರದ “ಅದ್ವಿತೀಯ” ಮುಂಗಡಪತ್ರದಲ್ಲಿ ಹಳೆಯ ಕಾರಿನ ಪ್ರಸ್ತಾವನೆ ಇದೆ. ಕೇವಲ ಕಾರಿನ ಬಗ್ಗೆ ಮಾತನಾಡುವುದಾದರೆ ನನ್ನ ಕಾರು ನನ್ನ ವೈಯುಕ್ತಿಕ ವಿಚಾರ, ಇದರಲ್ಲಿ ಇನ್ನೊಬ್ಬರಿಗೆ ಮೂಗು ತೂರಿಸುವ ಅವಕಾಶವಿಲ್ಲ. ಭಾರತದಲ್ಲಿ ಹಿಂದಿನಿಂದಲೂ ಮಧ್ಯಮ ವರ್ಗದ ಜನರು ಜೀವನದಲ್ಲಿ ಒಂದೇ ಹೆಂಡತಿ, ಒಂದೇ ಮಗು, ಒಂದೇ ಮನೆ, ಒಂದೇ ಕಾರು ಎಂದು ಜೀವನ ಮಾಡಿದವರು. ಕಾರನ್ನು ಹೆಂಡತಿ ಅಥವಾ ಮಗುವಿನಷ್ಟೇ ಪ್ರೀತಿಯಿಂದ ಸಾಕಿದವರು. ಅದನ್ನು ಗುಜರಿಗೆ ಹಾಕುವುದು ಅವರಿಗೆ ಜೀರ್ಣವಾಗದ ಮಾತು. ವೈಯುಕ್ತಿಕ ವಿಚಾರಗಳು ಹಾಗಿರಲಿ.

PC: Google Sites

ನಮ್ಮ ಗ್ರಾಮೀಣ ಸಾರಿಗೆ ನಿಂತಿರುವುದೇ ಹಳೆಯ ವಾಹನಗಳ ಕೃಪೆಯಿಂದ. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲದೆ ಗ್ರಾಮೀಣ ಭಾಗದ ಜನರು ಹಳೆಯ ಮತ್ತು ಮಾರ್ಪಡಿಸಲ್ಪಟ್ಟ ವಾಹನಗಳನ್ನೇ ನಂಬಿಕೊಂಡು ಇದೇ ಗ್ರಾಮೀಣ ಸಾರಿಗೆ ಎಂದು ಜೀವನ ನಡೆಸುತ್ತಿದ್ದಾರೆ. ಹಾಗಾದರೆ ಅವರೆಲ್ಲಾ ಏನು ಮಾಡಬೇಕು. ಹಳೆಯ ವಾಹನಗಳ ರಿಪೇರಿ ಮಾಡಿ ಜೀವನ ನಡೆಸುತ್ತಿರುವ ಲಕ್ಷಾಂತರ ಮೆಕ್ಯಾನಿಕ್‌‌‌ಗಳು ಏನು ಮಾಡಬೇಕು.

ಇದನ್ನೂ ಓದಿ: ಓಡಿಒಪಿ: ಎಲ್ಲದರೊಳಗು ಸ್ವತಂತ್ರ ಬೇಕು ಅಂದ್ರ ಹೆಂಗ? 1947ರೊಳಗ ಸಿಕ್ಕದಲ್ಲಾ ಸಾಕು

ಒಂದು ಅಂದಾಜಿನ ಪ್ರಕಾರ 2000-2001 ರಲ್ಲಿ ದೇಶದಲ್ಲಿ ಸುಮಾರು ನಲವತ್ತು ಲಕ್ಷ ವಾಹನಗಳ ಉತ್ಪಾದನೆಯಾಗಿತ್ತು. ಅವೆಲ್ಲವೂ ಏಕಕಾಲಕ್ಕೆ ಗುಜರಿಗೆ ಹೋದರೆ ಅವನ್ನು ಕೊಂಡುಕೊಳ್ಳುವವರು ಯಾರು? ಬಹುಶ: ಮಹೀಂದ್ರ ಮತ್ತು ಟಾಟಾ ಈಗಾಗಲೇ ಅದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಂಡಿರಬಹು (ಅದಾನಿ ಪಂಜಾಬಿನಲ್ಲಿ ಧಾನ್ಯಸಂಗ್ರಹಣೆ ಗೋಡೌನ್ ಕಟ್ಟಿಸಿದಂತೆ). ಆಟೋಮೊಬೀಲ್ ಲಾಬಿ ಸರಕಾರಕ್ಕೆ ಕಪ್ಪಕಾಣಿಕೆ ಸಲ್ಲಿಸಿರಬಹುದೇನೋ, ಅದಕ್ಕಾಗಿ ಈ ಆದೇಶ ಎಂದು ಸಂದೇಹ ಮೂಡುವುದು ಸ್ವಾಭಾವಿಕ.

ಹಾಗಾದರೆ ನಾಳೆ ರಿಯಲ್ ಎಸ್ಟೇಟ್ ಲಾಬಿ ಭೇಟಿಯಾದಲ್ಲಿ ಎಲ್ಲಾ 20 ವರ್ಷ ಹಳೆಯ ಮನೆ ಕೆಡವಿ ಹೊಸ ಮನೆ ಕಟ್ಟಬೇಕೆಂಬ ಕಾನೂನು ಬಂದರೆ ಅಥವಾ ಬಟ್ಟೆ ಲಾಬಿ ಒತ್ತಡದ ಮೇರೆಗೆ ಎಲ್ಲರೂ ಪ್ರತಿ ವರ್ಷ ಹೊಸ ಬಟ್ಟೆಯನ್ನೇ ಕೊಳ್ಳಬೇಕೆಂಬ ಕಾನೂನು ಜಾರಿಯಾದರೆ ಏನೂ ಆಶ್ಚರ್ಯವಿಲ್ಲ.

ಗೌರಿ ಲಂಕೇಶ್ ಇಂಗ್ಲಿಷ್‌ ಯುಟ್ಯೂಬ್ ಚಾನೆಲ್ Gauri Lankesh News Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಇಷ್ಟೇ ಅಲ್ಲ, ಮನೆಯ ಪಾತ್ರೆ, ವಾಷಿಂಗ್ ಮಷಿನ್, ಮಿಕ್ಸರ್-ಗ್ರೈಂಡರ್, ಫ್ರಿಜ್, ಟಿವಿ, ಮೊಬೈಲ್, ಆಭರಣಗಳು, ಎಲ್ಲದಕ್ಕೂ ಎಕ್ಸ್ಪೈರಿ ಡೇಟ್ ಫಿಕ್ಸ್ ಆಗುತ್ತದೆ. ಇದೆಲ್ಲಾ ಕೊಂಡುಕೊಳ್ಳಲು ಹಣ ಎಲ್ಲಿಂದ ಬರುತ್ತದೆ ಎಂದು ನನ್ನನ್ನು ಕೇಳಬೇಡಿ, ವಿತ್ತಮಂತ್ರಿಗಳನ್ನು ಕೇಳಿ ನೋಡಿ. ಬಹುಶ: ಹೆಲಿಕಾಪ್ಟರ್ ಮನಿ. ಸರ್ಕಾರ ಗರಿಗರಿ ನೋಟು ಮುದ್ರಿಸಿ ಮೇಲಿನಿಂದ ಎಸೆಯಬಹುದು.

ಹೆಂಡತಿ/ಗಂಡ ಅದೇ ಇರಬೇಕೋ ಅಥವಾ ಅದೂ ಬದಲಾಯಿಸುತ್ತಿರಬೇಕೋ ಏನೋ ಗೊತ್ತಿಲ್ಲ. ವಿಚಾರಿಸಿ ನೋಡಿ.

 -ಜಿ.ಆರ್. ವಿದ್ಯಾರಣ್ಯ (ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ: ಪುಟಕ್ಕಿಟ್ಟ ಪುಟಗಳು: ಪುರುಷಾಧಿಪತ್ಯವನ್ನು ಪ್ರಶ್ನಿಸಿ ಆರೋಗ್ಯಕರ ಶೃಂಗಾರ ಪಾಠ ಹೇಳುವ ’ಪ್ರಾಚೀನ ಭಾರತದಲ್ಲಿ ಕಾಮಶಾಸ್ತ್ರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The Indian and state governments are implementing new new bills on public (scraping the old cars and two wheelers ) but it will be affecting only to the middle class families not to politicians nor rich families and it’s like a indirect death penalty to citizens of India.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...