Homeಮುಖಪುಟನಿಮ್ಮ ಮನೆ 20 ವರ್ಷ ಹಳೆಯದೇ? ಹಾಗಾದರೆ ಕೂಡಲೇ ಕೆಡವಿ ಮತ್ತೆ ಕಟ್ಟಿಸಿ!

ನಿಮ್ಮ ಮನೆ 20 ವರ್ಷ ಹಳೆಯದೇ? ಹಾಗಾದರೆ ಕೂಡಲೇ ಕೆಡವಿ ಮತ್ತೆ ಕಟ್ಟಿಸಿ!

- Advertisement -
- Advertisement -

ನಿಮ್ಮ ಬಟ್ಟೆಗಳು ಒಂದು ವರ್ಷ ಹಳೆಯದೇ? ಹಾಗಿದ್ದಲ್ಲಿ ಅವನ್ನು ಕೂಡಲೇ ಹರಿದು ಹಾಕಿ ಹೊಸ ಬಟ್ಟೆ ಕೊಂಡುಕೊಳ್ಳಿರಿ. ಮೊಬೈಲ್ ಮೂರು ವರ್ಷ ಹಳೆಯದೇ, ಅದನ್ನು ಕೂಡಲೇ ಎಸೆದು ಹೊಸದೊಂದು ಕೊಳ್ಳಿರಿ.

ಲೇಖಕನಿಗೆ ತಲೆ ಕೆಟ್ಟಿದೆಯೇ ಎಂದು ಕೇಳಬೇಡಿ, ಬರುತ್ತೇನೆ ವಿಷಯಕ್ಕೆ.

ನಿಮ್ಮ ಕಾರು 20 ವರ್ಷ ಹಳೆಯದೇ? ಹಾಗಾದರೆ ಅದನ್ನು ಗುಜರಿಗೆ ಹಾಕಿ ಹೊಸ ಕಾರು ಖರೀದಿಸಿ ಎಂದು ಸರಕಾರ ಹೇಳಿದಾಗ ಯಾರನ್ನಾದರೂ ಪ್ರಶ್ನಿಸಿದಿರಾ, ಇಲ್ಲಾ ತಾನೆ? ಹಾಗಾದರೆ ನಾನು ಮೇಲೆ ಹೇಳಿದ ಮಾತುಗಳು ಶೀಘ್ರದಲ್ಲೇ ಸರಕಾರದ ಆದೇಶವಾಗಿ ಬರುವುದರಲ್ಲಿ ಸಂದೇಹವಿಲ್ಲ.

ಈ ಬಾರಿಯ ಬಜೆಟ್ ಮಂಡನೆಯಾದ ನಂತರ ಹಲವಾರು ಆರ್ಥಿಕ ತಜ್ಞರು ಮುಂಗಡಪತ್ರದಲ್ಲಿ ಕೇವಲ ಸಪ್ಪ್ಲೈ ಸೈಡನ್ನು ಗಮನಿಸಲಾಗಿದೆ, ಇದಕ್ಕೆ ಬೇಕಾದ ಡಿಮ್ಯಾಂಡ್ ಹೇಗೆ ಸರಕಾರ ಸೃಷ್ಟಿಸುತ್ತದೆ ಎನ್ನುವ ಬಗ್ಗೆ ವಿವರ ಇಲ್ಲ ಎಂದು ಗೊಣಗಿದ್ದರು. ಇದೋ ಇಲ್ಲಿದೆ ಡಿಮ್ಯಾಂಡ್ ಸೃಷ್ಟಿಯ ವಿವರ.

ಇದನ್ನೂ ಓದಿ: ಭಾರತದ ಪ್ರಗತಿಯನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವ ಕೃಷಿ ಕಾಯ್ದೆಗಳು

ಇತ್ತೀಚೆಗೆ ಬಂದ ಭಾರತ ಸರಕಾರದ “ಅದ್ವಿತೀಯ” ಮುಂಗಡಪತ್ರದಲ್ಲಿ ಹಳೆಯ ಕಾರಿನ ಪ್ರಸ್ತಾವನೆ ಇದೆ. ಕೇವಲ ಕಾರಿನ ಬಗ್ಗೆ ಮಾತನಾಡುವುದಾದರೆ ನನ್ನ ಕಾರು ನನ್ನ ವೈಯುಕ್ತಿಕ ವಿಚಾರ, ಇದರಲ್ಲಿ ಇನ್ನೊಬ್ಬರಿಗೆ ಮೂಗು ತೂರಿಸುವ ಅವಕಾಶವಿಲ್ಲ. ಭಾರತದಲ್ಲಿ ಹಿಂದಿನಿಂದಲೂ ಮಧ್ಯಮ ವರ್ಗದ ಜನರು ಜೀವನದಲ್ಲಿ ಒಂದೇ ಹೆಂಡತಿ, ಒಂದೇ ಮಗು, ಒಂದೇ ಮನೆ, ಒಂದೇ ಕಾರು ಎಂದು ಜೀವನ ಮಾಡಿದವರು. ಕಾರನ್ನು ಹೆಂಡತಿ ಅಥವಾ ಮಗುವಿನಷ್ಟೇ ಪ್ರೀತಿಯಿಂದ ಸಾಕಿದವರು. ಅದನ್ನು ಗುಜರಿಗೆ ಹಾಕುವುದು ಅವರಿಗೆ ಜೀರ್ಣವಾಗದ ಮಾತು. ವೈಯುಕ್ತಿಕ ವಿಚಾರಗಳು ಹಾಗಿರಲಿ.

PC: Google Sites

ನಮ್ಮ ಗ್ರಾಮೀಣ ಸಾರಿಗೆ ನಿಂತಿರುವುದೇ ಹಳೆಯ ವಾಹನಗಳ ಕೃಪೆಯಿಂದ. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲದೆ ಗ್ರಾಮೀಣ ಭಾಗದ ಜನರು ಹಳೆಯ ಮತ್ತು ಮಾರ್ಪಡಿಸಲ್ಪಟ್ಟ ವಾಹನಗಳನ್ನೇ ನಂಬಿಕೊಂಡು ಇದೇ ಗ್ರಾಮೀಣ ಸಾರಿಗೆ ಎಂದು ಜೀವನ ನಡೆಸುತ್ತಿದ್ದಾರೆ. ಹಾಗಾದರೆ ಅವರೆಲ್ಲಾ ಏನು ಮಾಡಬೇಕು. ಹಳೆಯ ವಾಹನಗಳ ರಿಪೇರಿ ಮಾಡಿ ಜೀವನ ನಡೆಸುತ್ತಿರುವ ಲಕ್ಷಾಂತರ ಮೆಕ್ಯಾನಿಕ್‌‌‌ಗಳು ಏನು ಮಾಡಬೇಕು.

ಇದನ್ನೂ ಓದಿ: ಓಡಿಒಪಿ: ಎಲ್ಲದರೊಳಗು ಸ್ವತಂತ್ರ ಬೇಕು ಅಂದ್ರ ಹೆಂಗ? 1947ರೊಳಗ ಸಿಕ್ಕದಲ್ಲಾ ಸಾಕು

ಒಂದು ಅಂದಾಜಿನ ಪ್ರಕಾರ 2000-2001 ರಲ್ಲಿ ದೇಶದಲ್ಲಿ ಸುಮಾರು ನಲವತ್ತು ಲಕ್ಷ ವಾಹನಗಳ ಉತ್ಪಾದನೆಯಾಗಿತ್ತು. ಅವೆಲ್ಲವೂ ಏಕಕಾಲಕ್ಕೆ ಗುಜರಿಗೆ ಹೋದರೆ ಅವನ್ನು ಕೊಂಡುಕೊಳ್ಳುವವರು ಯಾರು? ಬಹುಶ: ಮಹೀಂದ್ರ ಮತ್ತು ಟಾಟಾ ಈಗಾಗಲೇ ಅದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಂಡಿರಬಹು (ಅದಾನಿ ಪಂಜಾಬಿನಲ್ಲಿ ಧಾನ್ಯಸಂಗ್ರಹಣೆ ಗೋಡೌನ್ ಕಟ್ಟಿಸಿದಂತೆ). ಆಟೋಮೊಬೀಲ್ ಲಾಬಿ ಸರಕಾರಕ್ಕೆ ಕಪ್ಪಕಾಣಿಕೆ ಸಲ್ಲಿಸಿರಬಹುದೇನೋ, ಅದಕ್ಕಾಗಿ ಈ ಆದೇಶ ಎಂದು ಸಂದೇಹ ಮೂಡುವುದು ಸ್ವಾಭಾವಿಕ.

ಹಾಗಾದರೆ ನಾಳೆ ರಿಯಲ್ ಎಸ್ಟೇಟ್ ಲಾಬಿ ಭೇಟಿಯಾದಲ್ಲಿ ಎಲ್ಲಾ 20 ವರ್ಷ ಹಳೆಯ ಮನೆ ಕೆಡವಿ ಹೊಸ ಮನೆ ಕಟ್ಟಬೇಕೆಂಬ ಕಾನೂನು ಬಂದರೆ ಅಥವಾ ಬಟ್ಟೆ ಲಾಬಿ ಒತ್ತಡದ ಮೇರೆಗೆ ಎಲ್ಲರೂ ಪ್ರತಿ ವರ್ಷ ಹೊಸ ಬಟ್ಟೆಯನ್ನೇ ಕೊಳ್ಳಬೇಕೆಂಬ ಕಾನೂನು ಜಾರಿಯಾದರೆ ಏನೂ ಆಶ್ಚರ್ಯವಿಲ್ಲ.

ಗೌರಿ ಲಂಕೇಶ್ ಇಂಗ್ಲಿಷ್‌ ಯುಟ್ಯೂಬ್ ಚಾನೆಲ್ Gauri Lankesh News Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಇಷ್ಟೇ ಅಲ್ಲ, ಮನೆಯ ಪಾತ್ರೆ, ವಾಷಿಂಗ್ ಮಷಿನ್, ಮಿಕ್ಸರ್-ಗ್ರೈಂಡರ್, ಫ್ರಿಜ್, ಟಿವಿ, ಮೊಬೈಲ್, ಆಭರಣಗಳು, ಎಲ್ಲದಕ್ಕೂ ಎಕ್ಸ್ಪೈರಿ ಡೇಟ್ ಫಿಕ್ಸ್ ಆಗುತ್ತದೆ. ಇದೆಲ್ಲಾ ಕೊಂಡುಕೊಳ್ಳಲು ಹಣ ಎಲ್ಲಿಂದ ಬರುತ್ತದೆ ಎಂದು ನನ್ನನ್ನು ಕೇಳಬೇಡಿ, ವಿತ್ತಮಂತ್ರಿಗಳನ್ನು ಕೇಳಿ ನೋಡಿ. ಬಹುಶ: ಹೆಲಿಕಾಪ್ಟರ್ ಮನಿ. ಸರ್ಕಾರ ಗರಿಗರಿ ನೋಟು ಮುದ್ರಿಸಿ ಮೇಲಿನಿಂದ ಎಸೆಯಬಹುದು.

ಹೆಂಡತಿ/ಗಂಡ ಅದೇ ಇರಬೇಕೋ ಅಥವಾ ಅದೂ ಬದಲಾಯಿಸುತ್ತಿರಬೇಕೋ ಏನೋ ಗೊತ್ತಿಲ್ಲ. ವಿಚಾರಿಸಿ ನೋಡಿ.

 -ಜಿ.ಆರ್. ವಿದ್ಯಾರಣ್ಯ (ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ: ಪುಟಕ್ಕಿಟ್ಟ ಪುಟಗಳು: ಪುರುಷಾಧಿಪತ್ಯವನ್ನು ಪ್ರಶ್ನಿಸಿ ಆರೋಗ್ಯಕರ ಶೃಂಗಾರ ಪಾಠ ಹೇಳುವ ’ಪ್ರಾಚೀನ ಭಾರತದಲ್ಲಿ ಕಾಮಶಾಸ್ತ್ರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The Indian and state governments are implementing new new bills on public (scraping the old cars and two wheelers ) but it will be affecting only to the middle class families not to politicians nor rich families and it’s like a indirect death penalty to citizens of India.

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...