Homeಮುಖಪುಟಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

- Advertisement -
- Advertisement -

ಎಲ್ಲಾ ಧಾರ್ಮಿಕ ಕಾರ್ಯಗಳು ಮತ್ತು ಸಂಸ್ಥೆಗಳ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಜಗ್ಗಿ ವಾಸುದೇವ್ ಸ್ಥಾಪಿಸಿದ ಲಾಭೋದ್ದೇಶವಿಲ್ಲದ ಆಧ್ಯಾತ್ಮಿಕ ಸಂಸ್ಥೆ ಇಶಾ ಫೌಂಡೇಶನ್ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಕೀಲ ವರುಣ್ ಠಾಕೂರ್ ಮೂಲಕ ಒಬಿಸಿ ಮಹಾಸಭಾ ಮತ್ತು ಇತರರು ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.

ಕೊಯಮತ್ತೂರಿನ ನಿವೃತ್ತ ಪ್ರೊಫೆಸರ್ ಎಸ್ ಕಾಮರಾಜ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ ಜಗ್ಗಿ ವಾಸುದೇವ್‌ ಮತ್ತು ಅವರ ಫೌಂಡೇಶನ್ ತನ್ನ ಇಬ್ಬರು ಸುಶಿಕ್ಷಿತ ಹೆಣ್ಣುಮಕ್ಕಳ ಬ್ರೈನ್ ವಾಶ್ ಮಾಡುತ್ತಿದೆ ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಸ್ತುತ ಅರ್ಜಿಯಲ್ಲಿ ಅರ್ಜಿದಾರರು ಇಶಾ ಫೌಂಡೇಶನ್ ಅನ್ನು “ಪ್ರಸಿದ್ಧ ಸಂಸ್ಥೆ” ಎಂದು ಕರೆದಿದ್ದು, ಈ ಸಂಸ್ಥೆಯು ನಿಯಮಿತವಾಗಿ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ ಆದರೆ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯಿದೆ, 2013 ಅನ್ನು ಅನುಸರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಇಶಾ ಫೌಂಡೇಶನ್‌ ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯಿದೆ, 2013 ಅನ್ನು ಜಾರಿಗೊಳಿಸುವಂತೆ ನಿರ್ದೇಶಿಸಲು ಕೋರಿ ನಾವು  ಕೋರುತ್ತೇವೆ ಎಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ. ಅಷ್ಟೆ ಅಲ್ಲದೆ, “ಎಲ್ಲಾ ಧಾರ್ಮಿಕ (ಜೈನ/ಹಿಂದೂ/ಮುಸ್ಲಿಂ/ಸಿಖ್/ಕ್ರಿಶ್ಚಿಯನ್/ಬೌದ್ಧ ಇತ್ಯಾದಿ) ಮತ್ತು ಸಂಸ್ಥೆಗಳು/ಕಾರ್ಯಗಳಲ್ಲಿ” ಈ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೂಡಾ ಅರ್ಜಿಯು ನ್ಯಾಯಾಲಯಕ್ಕೆ ಮನವಿ ಮಾಡಿದೆ.

2013 ರ ಕಾಯಿದೆಯ ಕೆಲವು ಅಧ್ಯಾಯಗಳ ಪ್ರಕಾರ, ಕಾನೂನಿನ ಪ್ರಚಾರವನ್ನು ಒಳಗೊಂಡಂತೆ ಕಾನೂನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ರಾಜ್ಯದ ಕರ್ತವ್ಯವಾಗಿದೆ ಎಂದು ಒಬಿಸಿ ಮಹಾಸಭಾ ಹೇಳಿದೆ.

“ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಇಶಾ ಫೌಂಡೇಶನ್, ‘ಇಶಾ ಫೌಂಡೇಶನ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ವಿರುದ್ಧ ಇತ್ತೀಚೆಗೆ ಪೋಕ್ಸೊ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ’ ಎಂದು ಹೇಳಿತ್ತು. ಈ ಪ್ರಕರಣದಲ್ಲಿ ಆದಿವಾಸಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 12 ಬಾಲಕಿಯರಿಗೆ ಆತ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಇಶಾ ಫೌಂಡೇಶನ್ 2013 ರ ಕಾಯಿದೆಯನ್ನು ಕೆಲಸದ ಸ್ಥಳಗಳಲ್ಲಿ ಕಡ್ಡಾಯವಾಗಿ ಜಾರಿಗೆ ತಂದಿಲ್ಲ ಮತ್ತು ಇದರಿಂದ ಕಿರುಕುಳದ ಪರಿಸ್ಥಿತಿ ಉದ್ಭವಿಸಿದೆ” ಎಂದು ಸುಪ್ರಿಂಕೋರ್ಟ್‌ಗೆ ಸಲ್ಲಿಕೆಯಾದ ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇಶಾ ಫೌಂಡೇಶನ್ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಿರುವುದರಿಂದ, ಸಾವಿರಾರು ಪುರುಷ ಮತ್ತು ಮಹಿಳಾ ಕಾರ್ಮಿಕರು ನಿಯಮಿತವಾಗಿ ಕೆಲಸ ಮಾಡುತ್ತಿದ್ದಾರೆ. ಇಲ್ಲಿ ಭಕ್ತರು ಕೆಲವು ತಿಂಗಳುಗಳು, ವರ್ಷಗಳು ಅಥವಾ ಶಾಶ್ವತವಾಗಿ ಉಳಿಯುವ ದೊಡ್ಡ ಮೂಲಸೌಕರ್ಯಗಳು ಕೂಡಾ ಇವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇದನ್ನೂಓದಿ: ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ

ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...