Homeಮುಖಪುಟವೇಗದ ದ್ವಿಶತಕ ಸಿಡಿಸಿ ವಿಶ್ವದಾಖಲೆ ಬರೆದ ಇಶಾನ್ ಕಿಶನ್

ವೇಗದ ದ್ವಿಶತಕ ಸಿಡಿಸಿ ವಿಶ್ವದಾಖಲೆ ಬರೆದ ಇಶಾನ್ ಕಿಶನ್

- Advertisement -
- Advertisement -

ಇಂದು ಚಿತ್ತಗಾಂಗ್‌ನಲ್ಲಿ ನಡೆಯುತ್ತಿರುವ ಬಾಂಗ್ಲಾ ಎದುರಿನ ಮೂರನೇ ಏಕದಿನ ಪಂದ್ಯದಲ್ಲಿ ಕೇವಲ 126 ಎಸೆತಗಳಲ್ಲಿ 200 ರನ್ ಗಳಿಸಿದ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ವೇಗದ ದ್ವಿಶತಕ ಸಿಡಿಸಿದ ಆಟಗಾರ ಎಂಬ ವಿಶ್ವ ದಾಖಲೆಗೆ ಪಾತ್ರರಾದರು. ಈ ಮೊದಲು ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ 138 ಎಸೆತಗಳಲ್ಲಿ ಜಿಂಬಾಬ್ವೆ ವಿರುದ್ಧ ದ್ವಿಶತಕ ಗಳಿಸಿದ್ದರು.

ಇಂದಿನ ಪಂದ್ಯದಲ್ಲಿ ಮೊದಲ 85 ಎಸೆತಗಳಲ್ಲಿ ಶತಕ ಸಿಡಿಸಿದ ಕಿಶನ್ ಆನಂತರ ಕೇವಲ 41 ಎಸೆತಗಳಲ್ಲಿ ಮತ್ತೆ ನೂರು ರನ್ ಸಿಡಿಸಿ ಭಾರತ ತಂಡವು ಬಾಂಗ್ಲಾ ವಿರುದ್ಧ ಬೃಹತ್ ಮೊತ್ತ ಪೇರಿಸಲು ನೆರವಾದರು.

ಚೆಂಡನ್ನು ಮೂಲೆ ಮೂಲೆಗೂ ಅಟ್ಟಿದ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಇಶಾನ್ ಕಿಶನ್ 24 ಬೌಂಡರಿ ಮತ್ತು 10 ಸಿಕ್ಸರ್ ಸಿಡಿಸಿದರು. ತಮ್ಮ ಏಕದಿನ ಕ್ರಿಕೆಟ್‌ನ ಚೊಚ್ಚಲ ಶತಕವನ್ನು ಸ್ಮರಣೀಯವಾಗಿಸಿಕೊಂಡರು.

ಭಾರತ ತಂಡವು ಮೊದಲ ಎರಡು ಪಂದ್ಯಗಳಲ್ಲಿ ಬಾಂಗ್ಲಾ ವಿರುದ್ಧ ಸೋತಿತ್ತು. ಮೂರನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಗಾಯದ ಕಾರಣದಿಂದ ಹೊರಗುಳಿದರು. ಅದಕ್ಕಾಗಿ ಇಶಾನ್ ಕಿಶನ್‌ಗೆ ಅವಕಾಶ ಕಲ್ಪಿಸಲಾಗಿತ್ತು. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಅವರು ಭರ್ಜರಿ ದ್ವಿಶತಕ ಗಳಿಸಿ ಮಿಂಚಿದರು.

ಅವರು ಈ ಸೊಗಸಾದ ಆಟದ ನೆರವಿನಿಂದ ಭಾರತವು 41 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 344 ರನ್ ಗಳಿಸಿದೆ.

131 ಎಸೆತ ಎದುರಿಸಿದ ಇಶಾನ್ ಕಿಶನ್ 210 ರನ್ ಗಳಿಸಿ ಟಸ್ಕಿನ್ ಅಹ್ಮದ್ ಬೌಲಿಂಗ್‌ನಲ್ಲಿ ಲಿಟನ್ ದಾಸ್‌ಗೆ ಕ್ಯಾಚಿತ್ತು ಔಟಾದರು. ಅವರ ಇನ್ನಿಂಗ್ಸ್‌ನಲ್ಲಿ ಗಳು ಸೇರಿವೆ.

ಇದುವರೆಗೆ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್ ಮತ್ತು ರೋಹಿತ್ ಶರ್ಮಾ ಏಕದಿನ ಪಂದ್ಯದಲ್ಲಿ ಭಾರತದ ಪರವಾಗಿ ದ್ವಿಶತಕ ಗಳಿಸಿದ ಆಟಗಾರರಾಗಿದ್ದಾರೆ. 4ನೇ ಆಟಗಾರನಾಗಿ ಇಶಾನ್ ಕಿಶನ್ ಸೇರ್ಪಡೆಗೊಂಡಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭದಲ್ಲಿಯೇ ನಾಯಕ ಶಿಖರ್ ಧವನ್ ವಿಕೆಟ್ ಕಳೆದುಕೊಂಡಿತು. ಆದರೆ ಇಶಾನ್ ಕಿಶನ್ ಮತ್ತು ವಿರಾಟ್ ಕೊಹ್ಲಿ ಎರಡನೇ ವಿಕೆಟ್‌ಗೆ 290 ರನ್‌ಗಳ ಬೃಹತ್ ಜೊತೆಯಾಟವಾಡಿ ಇತಿಹಾಸ ನಿರ್ಮಿಸಿದರು.

ಇನ್ನೊಂದೆಡೆ ವಿರಾಟ್ ಕೊಹ್ಲಿ 91 ಎಸೆತಗಳಲ್ಲಿ 113 ರನ್ ಸಿಡಿಸುವ ಮೂಲಕ ಮೊತ್ತೊಂದು ಶತಕ ಗಳಿಸಿದರು. ತಮ್ಮ ಅಂತರಾಷ್ಟ್ರೀಯ 72ನೇ ಶತಕ ಗಳಿಸಿದ ಅವರು ಸಚಿನ್ ನಂತರ ಎರಡನೇ ಸ್ಥಾನಕ್ಕೇರಿದರು. ಸಚಿನ್ 100 ಅಂತರಾಷ್ಟ್ರೀಯ ಶತಕಗಳನ್ನು ಗಳಿಸಿದ್ದಾರೆ.

ಇದನ್ನೂ ಓದಿ: 34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದ ಎಸ್‌ಐಟಿ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಇದೀಗ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗುತ್ತಿದ್ದಂತೆ...