Homeಮುಖಪುಟವೇಗದ ದ್ವಿಶತಕ ಸಿಡಿಸಿ ವಿಶ್ವದಾಖಲೆ ಬರೆದ ಇಶಾನ್ ಕಿಶನ್

ವೇಗದ ದ್ವಿಶತಕ ಸಿಡಿಸಿ ವಿಶ್ವದಾಖಲೆ ಬರೆದ ಇಶಾನ್ ಕಿಶನ್

- Advertisement -
- Advertisement -

ಇಂದು ಚಿತ್ತಗಾಂಗ್‌ನಲ್ಲಿ ನಡೆಯುತ್ತಿರುವ ಬಾಂಗ್ಲಾ ಎದುರಿನ ಮೂರನೇ ಏಕದಿನ ಪಂದ್ಯದಲ್ಲಿ ಕೇವಲ 126 ಎಸೆತಗಳಲ್ಲಿ 200 ರನ್ ಗಳಿಸಿದ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ವೇಗದ ದ್ವಿಶತಕ ಸಿಡಿಸಿದ ಆಟಗಾರ ಎಂಬ ವಿಶ್ವ ದಾಖಲೆಗೆ ಪಾತ್ರರಾದರು. ಈ ಮೊದಲು ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ 138 ಎಸೆತಗಳಲ್ಲಿ ಜಿಂಬಾಬ್ವೆ ವಿರುದ್ಧ ದ್ವಿಶತಕ ಗಳಿಸಿದ್ದರು.

ಇಂದಿನ ಪಂದ್ಯದಲ್ಲಿ ಮೊದಲ 85 ಎಸೆತಗಳಲ್ಲಿ ಶತಕ ಸಿಡಿಸಿದ ಕಿಶನ್ ಆನಂತರ ಕೇವಲ 41 ಎಸೆತಗಳಲ್ಲಿ ಮತ್ತೆ ನೂರು ರನ್ ಸಿಡಿಸಿ ಭಾರತ ತಂಡವು ಬಾಂಗ್ಲಾ ವಿರುದ್ಧ ಬೃಹತ್ ಮೊತ್ತ ಪೇರಿಸಲು ನೆರವಾದರು.

ಚೆಂಡನ್ನು ಮೂಲೆ ಮೂಲೆಗೂ ಅಟ್ಟಿದ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಇಶಾನ್ ಕಿಶನ್ 24 ಬೌಂಡರಿ ಮತ್ತು 10 ಸಿಕ್ಸರ್ ಸಿಡಿಸಿದರು. ತಮ್ಮ ಏಕದಿನ ಕ್ರಿಕೆಟ್‌ನ ಚೊಚ್ಚಲ ಶತಕವನ್ನು ಸ್ಮರಣೀಯವಾಗಿಸಿಕೊಂಡರು.

ಭಾರತ ತಂಡವು ಮೊದಲ ಎರಡು ಪಂದ್ಯಗಳಲ್ಲಿ ಬಾಂಗ್ಲಾ ವಿರುದ್ಧ ಸೋತಿತ್ತು. ಮೂರನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಗಾಯದ ಕಾರಣದಿಂದ ಹೊರಗುಳಿದರು. ಅದಕ್ಕಾಗಿ ಇಶಾನ್ ಕಿಶನ್‌ಗೆ ಅವಕಾಶ ಕಲ್ಪಿಸಲಾಗಿತ್ತು. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಅವರು ಭರ್ಜರಿ ದ್ವಿಶತಕ ಗಳಿಸಿ ಮಿಂಚಿದರು.

ಅವರು ಈ ಸೊಗಸಾದ ಆಟದ ನೆರವಿನಿಂದ ಭಾರತವು 41 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 344 ರನ್ ಗಳಿಸಿದೆ.

131 ಎಸೆತ ಎದುರಿಸಿದ ಇಶಾನ್ ಕಿಶನ್ 210 ರನ್ ಗಳಿಸಿ ಟಸ್ಕಿನ್ ಅಹ್ಮದ್ ಬೌಲಿಂಗ್‌ನಲ್ಲಿ ಲಿಟನ್ ದಾಸ್‌ಗೆ ಕ್ಯಾಚಿತ್ತು ಔಟಾದರು. ಅವರ ಇನ್ನಿಂಗ್ಸ್‌ನಲ್ಲಿ ಗಳು ಸೇರಿವೆ.

ಇದುವರೆಗೆ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್ ಮತ್ತು ರೋಹಿತ್ ಶರ್ಮಾ ಏಕದಿನ ಪಂದ್ಯದಲ್ಲಿ ಭಾರತದ ಪರವಾಗಿ ದ್ವಿಶತಕ ಗಳಿಸಿದ ಆಟಗಾರರಾಗಿದ್ದಾರೆ. 4ನೇ ಆಟಗಾರನಾಗಿ ಇಶಾನ್ ಕಿಶನ್ ಸೇರ್ಪಡೆಗೊಂಡಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭದಲ್ಲಿಯೇ ನಾಯಕ ಶಿಖರ್ ಧವನ್ ವಿಕೆಟ್ ಕಳೆದುಕೊಂಡಿತು. ಆದರೆ ಇಶಾನ್ ಕಿಶನ್ ಮತ್ತು ವಿರಾಟ್ ಕೊಹ್ಲಿ ಎರಡನೇ ವಿಕೆಟ್‌ಗೆ 290 ರನ್‌ಗಳ ಬೃಹತ್ ಜೊತೆಯಾಟವಾಡಿ ಇತಿಹಾಸ ನಿರ್ಮಿಸಿದರು.

ಇನ್ನೊಂದೆಡೆ ವಿರಾಟ್ ಕೊಹ್ಲಿ 91 ಎಸೆತಗಳಲ್ಲಿ 113 ರನ್ ಸಿಡಿಸುವ ಮೂಲಕ ಮೊತ್ತೊಂದು ಶತಕ ಗಳಿಸಿದರು. ತಮ್ಮ ಅಂತರಾಷ್ಟ್ರೀಯ 72ನೇ ಶತಕ ಗಳಿಸಿದ ಅವರು ಸಚಿನ್ ನಂತರ ಎರಡನೇ ಸ್ಥಾನಕ್ಕೇರಿದರು. ಸಚಿನ್ 100 ಅಂತರಾಷ್ಟ್ರೀಯ ಶತಕಗಳನ್ನು ಗಳಿಸಿದ್ದಾರೆ.

ಇದನ್ನೂ ಓದಿ: 34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...