Homeಕರ್ನಾಟಕಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

ಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ ಹೊರಟಿರುವುದು ಖಂಡನೀಯ. ಎಲ್ಲ ಕಡೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಸಚಿವರು ಮುಂದೆ ನಿಂತು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ. ಅವರು ಎಷ್ಟೇ ಕೂಗಾಡಲಿ, ಹಾರಾಡಲಿ, ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

“90 ವರ್ಷಗಳ ಹಿಂದಿನ ಜನಗಣತಿ ಆಧಾರದಲ್ಲಿ ಇಂದಿನ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸುವುದು ಸರಿಯಲ್ಲ. ಹತ್ತು ವರ್ಷಕ್ಕೊಮ್ಮೆ ಜಾತಿ ಗಣತಿ ನಡೆಸುವುದರಿಂದ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ವೈಜ್ಞಾನಿಕವಾಗಿ ರೂಪಿಸಲು ಮತ್ತು ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ನಮ್ಮ ಕಾಂಗ್ರೆಸ್ ಸರ್ಕಾರ ಇದ್ದಾಗ 180 ಕೋಟಿ ಖರ್ಚು ಮಾಡಿ ಜಾತಿಜನಗಣತಿ ಮಾಡಿಸಿದ್ದೇನೆ ಎಂದು ಅವರ ಅವರು ಹೇಳಿದ್ದಾರೆ.

ಪ್ರಸ್ತುತ ಬೇರೆ ರಾಜ್ಯಗಳು ಜಾತಿ ಗಣತಿ ನಡೆಸುವ ಬಗ್ಗೆ ಆಸಕ್ತಿ ತೋರಿಸುತ್ತಿದೆ ಎಂದಿರುವ ಸಿದ್ದರಾಮಯ್ಯ, ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಪ್ರಧಾನಿ ಮೋದಿ ಬಳಿಗೆ ನಿಯೋಗ ಕರೆದೊಯ್ದು ಜಾತಿ ಜನಗಣತಿ ಬೇಡಿಕೆ ಮುಂದಿಟ್ಟಿರುವುದನ್ನು ಸ್ವಾಗತಿಸಿದ್ದಾರೆ.

“ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಜತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ವಿಷಾದನೀಯ ಬೆಳವಣಿಗೆ, ಒಪ್ಪಂದದ ಪ್ರಕಾರ ಜೆಡಿಎಸ್ ನಡೆದುಕೊಳ್ಳಲಿಲ್ಲ. ಹೀಗಾಗಿ ಮೂರು ಪಕ್ಷದವರು ಮೇಯರ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು. ಅತಿ ಹೆಚ್ಚು ಸ್ಥಾನ ಬಿಜೆಪಿ ಗೆದ್ದಿದ್ದರಿಂದ ಅವರಿಗೆ ಮೇಯರ್ ಸ್ಥಾನ ಸಿಕ್ಕಿದೆ” ಎಂದು ಅವರು ತಿಳಿಸಿದ್ದಾರೆ.

ಮೆಟ್ರೋ ಉದ್ಘಾಟನಾ ಸಭೆಯಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿದ ಅಧಿಕಾರಿಗಳ ನಡೆಯನ್ನು ಖಂಡಿಸಿದ ಸಿದ್ದರಾಮಯ್ಯ, “ಈ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಕ್ಕೆ ಅಗ್ರಸ್ಥಾನ. ಬೇರೆ ರಾಜ್ಯದಿಂದ ಬಂದ ನಾಯಕರು ಹಿಂದಿ/ಇಂಗ್ಲಿಷ್ನಲ್ಲಿ ಭಾಷಣ ಮಾಡಲಿ, ಆದರೆ ಕನ್ನಡ ನೆಲದಲ್ಲಿ ಮೆಟ್ರೋ ಅಧಿಕಾರಿಗಳು ಕನ್ನಡಕ್ಕೆ ಅವಮಾನ ಮಾಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಕಿಡಿ ಕಾರಿದ್ದಾರೆ.

“ಕೊರೋನಾ ನಿಯಂತ್ರಣದಲ್ಲಿ ಇದ್ದಾಗ ಸೂಕ್ತ ಮುನ್ನೆಚ್ಚರಿಕೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ತೆರೆಯುವುದು ಒಳ್ಳೆಯದು. ವಿದ್ಯಾರ್ಥಿಗಳು,ಹೆತ್ತವರು ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಣೇಶ ಹಬ್ಬ ಆಚರಿಸಬಹುದು. ಸಾರ್ವಜನಿಕರೂ ಗುಂಪು ಸೇರುವಾಗ ಎಚ್ಚರಿಕೆಯಿಂದ ಇರಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದು, ಅತಿ ಹೆಚ್ಚು ಜನ ಗುಂಪು ಸೇರದಂತೆ, ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಣೆ ಮಾಡದಂತೆ ಸರ್ಕಾರ ಎಚ್ಚರ ವಹಿಸುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪ.ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...