Homeಕರ್ನಾಟಕಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

ಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ ಹೊರಟಿರುವುದು ಖಂಡನೀಯ. ಎಲ್ಲ ಕಡೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಸಚಿವರು ಮುಂದೆ ನಿಂತು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ. ಅವರು ಎಷ್ಟೇ ಕೂಗಾಡಲಿ, ಹಾರಾಡಲಿ, ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

“90 ವರ್ಷಗಳ ಹಿಂದಿನ ಜನಗಣತಿ ಆಧಾರದಲ್ಲಿ ಇಂದಿನ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸುವುದು ಸರಿಯಲ್ಲ. ಹತ್ತು ವರ್ಷಕ್ಕೊಮ್ಮೆ ಜಾತಿ ಗಣತಿ ನಡೆಸುವುದರಿಂದ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ವೈಜ್ಞಾನಿಕವಾಗಿ ರೂಪಿಸಲು ಮತ್ತು ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ನಮ್ಮ ಕಾಂಗ್ರೆಸ್ ಸರ್ಕಾರ ಇದ್ದಾಗ 180 ಕೋಟಿ ಖರ್ಚು ಮಾಡಿ ಜಾತಿಜನಗಣತಿ ಮಾಡಿಸಿದ್ದೇನೆ ಎಂದು ಅವರ ಅವರು ಹೇಳಿದ್ದಾರೆ.

ಪ್ರಸ್ತುತ ಬೇರೆ ರಾಜ್ಯಗಳು ಜಾತಿ ಗಣತಿ ನಡೆಸುವ ಬಗ್ಗೆ ಆಸಕ್ತಿ ತೋರಿಸುತ್ತಿದೆ ಎಂದಿರುವ ಸಿದ್ದರಾಮಯ್ಯ, ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಪ್ರಧಾನಿ ಮೋದಿ ಬಳಿಗೆ ನಿಯೋಗ ಕರೆದೊಯ್ದು ಜಾತಿ ಜನಗಣತಿ ಬೇಡಿಕೆ ಮುಂದಿಟ್ಟಿರುವುದನ್ನು ಸ್ವಾಗತಿಸಿದ್ದಾರೆ.

“ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಜತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ವಿಷಾದನೀಯ ಬೆಳವಣಿಗೆ, ಒಪ್ಪಂದದ ಪ್ರಕಾರ ಜೆಡಿಎಸ್ ನಡೆದುಕೊಳ್ಳಲಿಲ್ಲ. ಹೀಗಾಗಿ ಮೂರು ಪಕ್ಷದವರು ಮೇಯರ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು. ಅತಿ ಹೆಚ್ಚು ಸ್ಥಾನ ಬಿಜೆಪಿ ಗೆದ್ದಿದ್ದರಿಂದ ಅವರಿಗೆ ಮೇಯರ್ ಸ್ಥಾನ ಸಿಕ್ಕಿದೆ” ಎಂದು ಅವರು ತಿಳಿಸಿದ್ದಾರೆ.

ಮೆಟ್ರೋ ಉದ್ಘಾಟನಾ ಸಭೆಯಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿದ ಅಧಿಕಾರಿಗಳ ನಡೆಯನ್ನು ಖಂಡಿಸಿದ ಸಿದ್ದರಾಮಯ್ಯ, “ಈ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಕ್ಕೆ ಅಗ್ರಸ್ಥಾನ. ಬೇರೆ ರಾಜ್ಯದಿಂದ ಬಂದ ನಾಯಕರು ಹಿಂದಿ/ಇಂಗ್ಲಿಷ್ನಲ್ಲಿ ಭಾಷಣ ಮಾಡಲಿ, ಆದರೆ ಕನ್ನಡ ನೆಲದಲ್ಲಿ ಮೆಟ್ರೋ ಅಧಿಕಾರಿಗಳು ಕನ್ನಡಕ್ಕೆ ಅವಮಾನ ಮಾಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಕಿಡಿ ಕಾರಿದ್ದಾರೆ.

“ಕೊರೋನಾ ನಿಯಂತ್ರಣದಲ್ಲಿ ಇದ್ದಾಗ ಸೂಕ್ತ ಮುನ್ನೆಚ್ಚರಿಕೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ತೆರೆಯುವುದು ಒಳ್ಳೆಯದು. ವಿದ್ಯಾರ್ಥಿಗಳು,ಹೆತ್ತವರು ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಣೇಶ ಹಬ್ಬ ಆಚರಿಸಬಹುದು. ಸಾರ್ವಜನಿಕರೂ ಗುಂಪು ಸೇರುವಾಗ ಎಚ್ಚರಿಕೆಯಿಂದ ಇರಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದು, ಅತಿ ಹೆಚ್ಚು ಜನ ಗುಂಪು ಸೇರದಂತೆ, ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಣೆ ಮಾಡದಂತೆ ಸರ್ಕಾರ ಎಚ್ಚರ ವಹಿಸುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪ.ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...