Homeಕರ್ನಾಟಕಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

ಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ ಹೊರಟಿರುವುದು ಖಂಡನೀಯ. ಎಲ್ಲ ಕಡೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಸಚಿವರು ಮುಂದೆ ನಿಂತು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ. ಅವರು ಎಷ್ಟೇ ಕೂಗಾಡಲಿ, ಹಾರಾಡಲಿ, ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

“90 ವರ್ಷಗಳ ಹಿಂದಿನ ಜನಗಣತಿ ಆಧಾರದಲ್ಲಿ ಇಂದಿನ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸುವುದು ಸರಿಯಲ್ಲ. ಹತ್ತು ವರ್ಷಕ್ಕೊಮ್ಮೆ ಜಾತಿ ಗಣತಿ ನಡೆಸುವುದರಿಂದ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ವೈಜ್ಞಾನಿಕವಾಗಿ ರೂಪಿಸಲು ಮತ್ತು ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ನಮ್ಮ ಕಾಂಗ್ರೆಸ್ ಸರ್ಕಾರ ಇದ್ದಾಗ 180 ಕೋಟಿ ಖರ್ಚು ಮಾಡಿ ಜಾತಿಜನಗಣತಿ ಮಾಡಿಸಿದ್ದೇನೆ ಎಂದು ಅವರ ಅವರು ಹೇಳಿದ್ದಾರೆ.

ಪ್ರಸ್ತುತ ಬೇರೆ ರಾಜ್ಯಗಳು ಜಾತಿ ಗಣತಿ ನಡೆಸುವ ಬಗ್ಗೆ ಆಸಕ್ತಿ ತೋರಿಸುತ್ತಿದೆ ಎಂದಿರುವ ಸಿದ್ದರಾಮಯ್ಯ, ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಪ್ರಧಾನಿ ಮೋದಿ ಬಳಿಗೆ ನಿಯೋಗ ಕರೆದೊಯ್ದು ಜಾತಿ ಜನಗಣತಿ ಬೇಡಿಕೆ ಮುಂದಿಟ್ಟಿರುವುದನ್ನು ಸ್ವಾಗತಿಸಿದ್ದಾರೆ.

“ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಜತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ವಿಷಾದನೀಯ ಬೆಳವಣಿಗೆ, ಒಪ್ಪಂದದ ಪ್ರಕಾರ ಜೆಡಿಎಸ್ ನಡೆದುಕೊಳ್ಳಲಿಲ್ಲ. ಹೀಗಾಗಿ ಮೂರು ಪಕ್ಷದವರು ಮೇಯರ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು. ಅತಿ ಹೆಚ್ಚು ಸ್ಥಾನ ಬಿಜೆಪಿ ಗೆದ್ದಿದ್ದರಿಂದ ಅವರಿಗೆ ಮೇಯರ್ ಸ್ಥಾನ ಸಿಕ್ಕಿದೆ” ಎಂದು ಅವರು ತಿಳಿಸಿದ್ದಾರೆ.

ಮೆಟ್ರೋ ಉದ್ಘಾಟನಾ ಸಭೆಯಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿದ ಅಧಿಕಾರಿಗಳ ನಡೆಯನ್ನು ಖಂಡಿಸಿದ ಸಿದ್ದರಾಮಯ್ಯ, “ಈ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಕ್ಕೆ ಅಗ್ರಸ್ಥಾನ. ಬೇರೆ ರಾಜ್ಯದಿಂದ ಬಂದ ನಾಯಕರು ಹಿಂದಿ/ಇಂಗ್ಲಿಷ್ನಲ್ಲಿ ಭಾಷಣ ಮಾಡಲಿ, ಆದರೆ ಕನ್ನಡ ನೆಲದಲ್ಲಿ ಮೆಟ್ರೋ ಅಧಿಕಾರಿಗಳು ಕನ್ನಡಕ್ಕೆ ಅವಮಾನ ಮಾಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಕಿಡಿ ಕಾರಿದ್ದಾರೆ.

“ಕೊರೋನಾ ನಿಯಂತ್ರಣದಲ್ಲಿ ಇದ್ದಾಗ ಸೂಕ್ತ ಮುನ್ನೆಚ್ಚರಿಕೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ತೆರೆಯುವುದು ಒಳ್ಳೆಯದು. ವಿದ್ಯಾರ್ಥಿಗಳು,ಹೆತ್ತವರು ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಣೇಶ ಹಬ್ಬ ಆಚರಿಸಬಹುದು. ಸಾರ್ವಜನಿಕರೂ ಗುಂಪು ಸೇರುವಾಗ ಎಚ್ಚರಿಕೆಯಿಂದ ಇರಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದು, ಅತಿ ಹೆಚ್ಚು ಜನ ಗುಂಪು ಸೇರದಂತೆ, ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಣೆ ಮಾಡದಂತೆ ಸರ್ಕಾರ ಎಚ್ಚರ ವಹಿಸುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪ.ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...