Homeಕರ್ನಾಟಕಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

ಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ ಹೊರಟಿರುವುದು ಖಂಡನೀಯ. ಎಲ್ಲ ಕಡೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಸಚಿವರು ಮುಂದೆ ನಿಂತು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ. ಅವರು ಎಷ್ಟೇ ಕೂಗಾಡಲಿ, ಹಾರಾಡಲಿ, ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

“90 ವರ್ಷಗಳ ಹಿಂದಿನ ಜನಗಣತಿ ಆಧಾರದಲ್ಲಿ ಇಂದಿನ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸುವುದು ಸರಿಯಲ್ಲ. ಹತ್ತು ವರ್ಷಕ್ಕೊಮ್ಮೆ ಜಾತಿ ಗಣತಿ ನಡೆಸುವುದರಿಂದ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ವೈಜ್ಞಾನಿಕವಾಗಿ ರೂಪಿಸಲು ಮತ್ತು ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ನಮ್ಮ ಕಾಂಗ್ರೆಸ್ ಸರ್ಕಾರ ಇದ್ದಾಗ 180 ಕೋಟಿ ಖರ್ಚು ಮಾಡಿ ಜಾತಿಜನಗಣತಿ ಮಾಡಿಸಿದ್ದೇನೆ ಎಂದು ಅವರ ಅವರು ಹೇಳಿದ್ದಾರೆ.

ಪ್ರಸ್ತುತ ಬೇರೆ ರಾಜ್ಯಗಳು ಜಾತಿ ಗಣತಿ ನಡೆಸುವ ಬಗ್ಗೆ ಆಸಕ್ತಿ ತೋರಿಸುತ್ತಿದೆ ಎಂದಿರುವ ಸಿದ್ದರಾಮಯ್ಯ, ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಪ್ರಧಾನಿ ಮೋದಿ ಬಳಿಗೆ ನಿಯೋಗ ಕರೆದೊಯ್ದು ಜಾತಿ ಜನಗಣತಿ ಬೇಡಿಕೆ ಮುಂದಿಟ್ಟಿರುವುದನ್ನು ಸ್ವಾಗತಿಸಿದ್ದಾರೆ.

“ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಜತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ವಿಷಾದನೀಯ ಬೆಳವಣಿಗೆ, ಒಪ್ಪಂದದ ಪ್ರಕಾರ ಜೆಡಿಎಸ್ ನಡೆದುಕೊಳ್ಳಲಿಲ್ಲ. ಹೀಗಾಗಿ ಮೂರು ಪಕ್ಷದವರು ಮೇಯರ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು. ಅತಿ ಹೆಚ್ಚು ಸ್ಥಾನ ಬಿಜೆಪಿ ಗೆದ್ದಿದ್ದರಿಂದ ಅವರಿಗೆ ಮೇಯರ್ ಸ್ಥಾನ ಸಿಕ್ಕಿದೆ” ಎಂದು ಅವರು ತಿಳಿಸಿದ್ದಾರೆ.

ಮೆಟ್ರೋ ಉದ್ಘಾಟನಾ ಸಭೆಯಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿದ ಅಧಿಕಾರಿಗಳ ನಡೆಯನ್ನು ಖಂಡಿಸಿದ ಸಿದ್ದರಾಮಯ್ಯ, “ಈ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಕ್ಕೆ ಅಗ್ರಸ್ಥಾನ. ಬೇರೆ ರಾಜ್ಯದಿಂದ ಬಂದ ನಾಯಕರು ಹಿಂದಿ/ಇಂಗ್ಲಿಷ್ನಲ್ಲಿ ಭಾಷಣ ಮಾಡಲಿ, ಆದರೆ ಕನ್ನಡ ನೆಲದಲ್ಲಿ ಮೆಟ್ರೋ ಅಧಿಕಾರಿಗಳು ಕನ್ನಡಕ್ಕೆ ಅವಮಾನ ಮಾಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಕಿಡಿ ಕಾರಿದ್ದಾರೆ.

“ಕೊರೋನಾ ನಿಯಂತ್ರಣದಲ್ಲಿ ಇದ್ದಾಗ ಸೂಕ್ತ ಮುನ್ನೆಚ್ಚರಿಕೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ತೆರೆಯುವುದು ಒಳ್ಳೆಯದು. ವಿದ್ಯಾರ್ಥಿಗಳು,ಹೆತ್ತವರು ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಣೇಶ ಹಬ್ಬ ಆಚರಿಸಬಹುದು. ಸಾರ್ವಜನಿಕರೂ ಗುಂಪು ಸೇರುವಾಗ ಎಚ್ಚರಿಕೆಯಿಂದ ಇರಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದು, ಅತಿ ಹೆಚ್ಚು ಜನ ಗುಂಪು ಸೇರದಂತೆ, ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಣೆ ಮಾಡದಂತೆ ಸರ್ಕಾರ ಎಚ್ಚರ ವಹಿಸುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪ.ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...