Homeಕರ್ನಾಟಕಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

ಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ ಹೊರಟಿರುವುದು ಖಂಡನೀಯ. ಎಲ್ಲ ಕಡೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಸಚಿವರು ಮುಂದೆ ನಿಂತು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ. ಅವರು ಎಷ್ಟೇ ಕೂಗಾಡಲಿ, ಹಾರಾಡಲಿ, ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

“90 ವರ್ಷಗಳ ಹಿಂದಿನ ಜನಗಣತಿ ಆಧಾರದಲ್ಲಿ ಇಂದಿನ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸುವುದು ಸರಿಯಲ್ಲ. ಹತ್ತು ವರ್ಷಕ್ಕೊಮ್ಮೆ ಜಾತಿ ಗಣತಿ ನಡೆಸುವುದರಿಂದ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ವೈಜ್ಞಾನಿಕವಾಗಿ ರೂಪಿಸಲು ಮತ್ತು ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ನಮ್ಮ ಕಾಂಗ್ರೆಸ್ ಸರ್ಕಾರ ಇದ್ದಾಗ 180 ಕೋಟಿ ಖರ್ಚು ಮಾಡಿ ಜಾತಿಜನಗಣತಿ ಮಾಡಿಸಿದ್ದೇನೆ ಎಂದು ಅವರ ಅವರು ಹೇಳಿದ್ದಾರೆ.

ಪ್ರಸ್ತುತ ಬೇರೆ ರಾಜ್ಯಗಳು ಜಾತಿ ಗಣತಿ ನಡೆಸುವ ಬಗ್ಗೆ ಆಸಕ್ತಿ ತೋರಿಸುತ್ತಿದೆ ಎಂದಿರುವ ಸಿದ್ದರಾಮಯ್ಯ, ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಪ್ರಧಾನಿ ಮೋದಿ ಬಳಿಗೆ ನಿಯೋಗ ಕರೆದೊಯ್ದು ಜಾತಿ ಜನಗಣತಿ ಬೇಡಿಕೆ ಮುಂದಿಟ್ಟಿರುವುದನ್ನು ಸ್ವಾಗತಿಸಿದ್ದಾರೆ.

“ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಜತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ವಿಷಾದನೀಯ ಬೆಳವಣಿಗೆ, ಒಪ್ಪಂದದ ಪ್ರಕಾರ ಜೆಡಿಎಸ್ ನಡೆದುಕೊಳ್ಳಲಿಲ್ಲ. ಹೀಗಾಗಿ ಮೂರು ಪಕ್ಷದವರು ಮೇಯರ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು. ಅತಿ ಹೆಚ್ಚು ಸ್ಥಾನ ಬಿಜೆಪಿ ಗೆದ್ದಿದ್ದರಿಂದ ಅವರಿಗೆ ಮೇಯರ್ ಸ್ಥಾನ ಸಿಕ್ಕಿದೆ” ಎಂದು ಅವರು ತಿಳಿಸಿದ್ದಾರೆ.

ಮೆಟ್ರೋ ಉದ್ಘಾಟನಾ ಸಭೆಯಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿದ ಅಧಿಕಾರಿಗಳ ನಡೆಯನ್ನು ಖಂಡಿಸಿದ ಸಿದ್ದರಾಮಯ್ಯ, “ಈ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಕ್ಕೆ ಅಗ್ರಸ್ಥಾನ. ಬೇರೆ ರಾಜ್ಯದಿಂದ ಬಂದ ನಾಯಕರು ಹಿಂದಿ/ಇಂಗ್ಲಿಷ್ನಲ್ಲಿ ಭಾಷಣ ಮಾಡಲಿ, ಆದರೆ ಕನ್ನಡ ನೆಲದಲ್ಲಿ ಮೆಟ್ರೋ ಅಧಿಕಾರಿಗಳು ಕನ್ನಡಕ್ಕೆ ಅವಮಾನ ಮಾಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಕಿಡಿ ಕಾರಿದ್ದಾರೆ.

“ಕೊರೋನಾ ನಿಯಂತ್ರಣದಲ್ಲಿ ಇದ್ದಾಗ ಸೂಕ್ತ ಮುನ್ನೆಚ್ಚರಿಕೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ತೆರೆಯುವುದು ಒಳ್ಳೆಯದು. ವಿದ್ಯಾರ್ಥಿಗಳು,ಹೆತ್ತವರು ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಣೇಶ ಹಬ್ಬ ಆಚರಿಸಬಹುದು. ಸಾರ್ವಜನಿಕರೂ ಗುಂಪು ಸೇರುವಾಗ ಎಚ್ಚರಿಕೆಯಿಂದ ಇರಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದು, ಅತಿ ಹೆಚ್ಚು ಜನ ಗುಂಪು ಸೇರದಂತೆ, ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಣೆ ಮಾಡದಂತೆ ಸರ್ಕಾರ ಎಚ್ಚರ ವಹಿಸುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪ.ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...