Homeಕರ್ನಾಟಕಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

ಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ ಹೊರಟಿರುವುದು ಖಂಡನೀಯ. ಎಲ್ಲ ಕಡೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಸಚಿವರು ಮುಂದೆ ನಿಂತು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ. ಅವರು ಎಷ್ಟೇ ಕೂಗಾಡಲಿ, ಹಾರಾಡಲಿ, ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

“90 ವರ್ಷಗಳ ಹಿಂದಿನ ಜನಗಣತಿ ಆಧಾರದಲ್ಲಿ ಇಂದಿನ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸುವುದು ಸರಿಯಲ್ಲ. ಹತ್ತು ವರ್ಷಕ್ಕೊಮ್ಮೆ ಜಾತಿ ಗಣತಿ ನಡೆಸುವುದರಿಂದ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ವೈಜ್ಞಾನಿಕವಾಗಿ ರೂಪಿಸಲು ಮತ್ತು ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ನಮ್ಮ ಕಾಂಗ್ರೆಸ್ ಸರ್ಕಾರ ಇದ್ದಾಗ 180 ಕೋಟಿ ಖರ್ಚು ಮಾಡಿ ಜಾತಿಜನಗಣತಿ ಮಾಡಿಸಿದ್ದೇನೆ ಎಂದು ಅವರ ಅವರು ಹೇಳಿದ್ದಾರೆ.

ಪ್ರಸ್ತುತ ಬೇರೆ ರಾಜ್ಯಗಳು ಜಾತಿ ಗಣತಿ ನಡೆಸುವ ಬಗ್ಗೆ ಆಸಕ್ತಿ ತೋರಿಸುತ್ತಿದೆ ಎಂದಿರುವ ಸಿದ್ದರಾಮಯ್ಯ, ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಪ್ರಧಾನಿ ಮೋದಿ ಬಳಿಗೆ ನಿಯೋಗ ಕರೆದೊಯ್ದು ಜಾತಿ ಜನಗಣತಿ ಬೇಡಿಕೆ ಮುಂದಿಟ್ಟಿರುವುದನ್ನು ಸ್ವಾಗತಿಸಿದ್ದಾರೆ.

“ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಜತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ವಿಷಾದನೀಯ ಬೆಳವಣಿಗೆ, ಒಪ್ಪಂದದ ಪ್ರಕಾರ ಜೆಡಿಎಸ್ ನಡೆದುಕೊಳ್ಳಲಿಲ್ಲ. ಹೀಗಾಗಿ ಮೂರು ಪಕ್ಷದವರು ಮೇಯರ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು. ಅತಿ ಹೆಚ್ಚು ಸ್ಥಾನ ಬಿಜೆಪಿ ಗೆದ್ದಿದ್ದರಿಂದ ಅವರಿಗೆ ಮೇಯರ್ ಸ್ಥಾನ ಸಿಕ್ಕಿದೆ” ಎಂದು ಅವರು ತಿಳಿಸಿದ್ದಾರೆ.

ಮೆಟ್ರೋ ಉದ್ಘಾಟನಾ ಸಭೆಯಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿದ ಅಧಿಕಾರಿಗಳ ನಡೆಯನ್ನು ಖಂಡಿಸಿದ ಸಿದ್ದರಾಮಯ್ಯ, “ಈ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಕ್ಕೆ ಅಗ್ರಸ್ಥಾನ. ಬೇರೆ ರಾಜ್ಯದಿಂದ ಬಂದ ನಾಯಕರು ಹಿಂದಿ/ಇಂಗ್ಲಿಷ್ನಲ್ಲಿ ಭಾಷಣ ಮಾಡಲಿ, ಆದರೆ ಕನ್ನಡ ನೆಲದಲ್ಲಿ ಮೆಟ್ರೋ ಅಧಿಕಾರಿಗಳು ಕನ್ನಡಕ್ಕೆ ಅವಮಾನ ಮಾಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಕಿಡಿ ಕಾರಿದ್ದಾರೆ.

“ಕೊರೋನಾ ನಿಯಂತ್ರಣದಲ್ಲಿ ಇದ್ದಾಗ ಸೂಕ್ತ ಮುನ್ನೆಚ್ಚರಿಕೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ತೆರೆಯುವುದು ಒಳ್ಳೆಯದು. ವಿದ್ಯಾರ್ಥಿಗಳು,ಹೆತ್ತವರು ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಣೇಶ ಹಬ್ಬ ಆಚರಿಸಬಹುದು. ಸಾರ್ವಜನಿಕರೂ ಗುಂಪು ಸೇರುವಾಗ ಎಚ್ಚರಿಕೆಯಿಂದ ಇರಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದು, ಅತಿ ಹೆಚ್ಚು ಜನ ಗುಂಪು ಸೇರದಂತೆ, ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಣೆ ಮಾಡದಂತೆ ಸರ್ಕಾರ ಎಚ್ಚರ ವಹಿಸುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪ.ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...