Homeಕರ್ನಾಟಕಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

ಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ ಹೊರಟಿರುವುದು ಖಂಡನೀಯ. ಎಲ್ಲ ಕಡೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಸಚಿವರು ಮುಂದೆ ನಿಂತು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ. ಅವರು ಎಷ್ಟೇ ಕೂಗಾಡಲಿ, ಹಾರಾಡಲಿ, ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

“90 ವರ್ಷಗಳ ಹಿಂದಿನ ಜನಗಣತಿ ಆಧಾರದಲ್ಲಿ ಇಂದಿನ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸುವುದು ಸರಿಯಲ್ಲ. ಹತ್ತು ವರ್ಷಕ್ಕೊಮ್ಮೆ ಜಾತಿ ಗಣತಿ ನಡೆಸುವುದರಿಂದ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ವೈಜ್ಞಾನಿಕವಾಗಿ ರೂಪಿಸಲು ಮತ್ತು ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ನಮ್ಮ ಕಾಂಗ್ರೆಸ್ ಸರ್ಕಾರ ಇದ್ದಾಗ 180 ಕೋಟಿ ಖರ್ಚು ಮಾಡಿ ಜಾತಿಜನಗಣತಿ ಮಾಡಿಸಿದ್ದೇನೆ ಎಂದು ಅವರ ಅವರು ಹೇಳಿದ್ದಾರೆ.

ಪ್ರಸ್ತುತ ಬೇರೆ ರಾಜ್ಯಗಳು ಜಾತಿ ಗಣತಿ ನಡೆಸುವ ಬಗ್ಗೆ ಆಸಕ್ತಿ ತೋರಿಸುತ್ತಿದೆ ಎಂದಿರುವ ಸಿದ್ದರಾಮಯ್ಯ, ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಪ್ರಧಾನಿ ಮೋದಿ ಬಳಿಗೆ ನಿಯೋಗ ಕರೆದೊಯ್ದು ಜಾತಿ ಜನಗಣತಿ ಬೇಡಿಕೆ ಮುಂದಿಟ್ಟಿರುವುದನ್ನು ಸ್ವಾಗತಿಸಿದ್ದಾರೆ.

“ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಜತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ವಿಷಾದನೀಯ ಬೆಳವಣಿಗೆ, ಒಪ್ಪಂದದ ಪ್ರಕಾರ ಜೆಡಿಎಸ್ ನಡೆದುಕೊಳ್ಳಲಿಲ್ಲ. ಹೀಗಾಗಿ ಮೂರು ಪಕ್ಷದವರು ಮೇಯರ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು. ಅತಿ ಹೆಚ್ಚು ಸ್ಥಾನ ಬಿಜೆಪಿ ಗೆದ್ದಿದ್ದರಿಂದ ಅವರಿಗೆ ಮೇಯರ್ ಸ್ಥಾನ ಸಿಕ್ಕಿದೆ” ಎಂದು ಅವರು ತಿಳಿಸಿದ್ದಾರೆ.

ಮೆಟ್ರೋ ಉದ್ಘಾಟನಾ ಸಭೆಯಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿದ ಅಧಿಕಾರಿಗಳ ನಡೆಯನ್ನು ಖಂಡಿಸಿದ ಸಿದ್ದರಾಮಯ್ಯ, “ಈ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಕ್ಕೆ ಅಗ್ರಸ್ಥಾನ. ಬೇರೆ ರಾಜ್ಯದಿಂದ ಬಂದ ನಾಯಕರು ಹಿಂದಿ/ಇಂಗ್ಲಿಷ್ನಲ್ಲಿ ಭಾಷಣ ಮಾಡಲಿ, ಆದರೆ ಕನ್ನಡ ನೆಲದಲ್ಲಿ ಮೆಟ್ರೋ ಅಧಿಕಾರಿಗಳು ಕನ್ನಡಕ್ಕೆ ಅವಮಾನ ಮಾಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಕಿಡಿ ಕಾರಿದ್ದಾರೆ.

“ಕೊರೋನಾ ನಿಯಂತ್ರಣದಲ್ಲಿ ಇದ್ದಾಗ ಸೂಕ್ತ ಮುನ್ನೆಚ್ಚರಿಕೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ತೆರೆಯುವುದು ಒಳ್ಳೆಯದು. ವಿದ್ಯಾರ್ಥಿಗಳು,ಹೆತ್ತವರು ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಣೇಶ ಹಬ್ಬ ಆಚರಿಸಬಹುದು. ಸಾರ್ವಜನಿಕರೂ ಗುಂಪು ಸೇರುವಾಗ ಎಚ್ಚರಿಕೆಯಿಂದ ಇರಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದು, ಅತಿ ಹೆಚ್ಚು ಜನ ಗುಂಪು ಸೇರದಂತೆ, ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಣೆ ಮಾಡದಂತೆ ಸರ್ಕಾರ ಎಚ್ಚರ ವಹಿಸುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪ.ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...