Homeಕರ್ನಾಟಕಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

ಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ ಹೊರಟಿರುವುದು ಖಂಡನೀಯ. ಎಲ್ಲ ಕಡೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಸಚಿವರು ಮುಂದೆ ನಿಂತು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ. ಅವರು ಎಷ್ಟೇ ಕೂಗಾಡಲಿ, ಹಾರಾಡಲಿ, ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

“90 ವರ್ಷಗಳ ಹಿಂದಿನ ಜನಗಣತಿ ಆಧಾರದಲ್ಲಿ ಇಂದಿನ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸುವುದು ಸರಿಯಲ್ಲ. ಹತ್ತು ವರ್ಷಕ್ಕೊಮ್ಮೆ ಜಾತಿ ಗಣತಿ ನಡೆಸುವುದರಿಂದ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ವೈಜ್ಞಾನಿಕವಾಗಿ ರೂಪಿಸಲು ಮತ್ತು ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ನಮ್ಮ ಕಾಂಗ್ರೆಸ್ ಸರ್ಕಾರ ಇದ್ದಾಗ 180 ಕೋಟಿ ಖರ್ಚು ಮಾಡಿ ಜಾತಿಜನಗಣತಿ ಮಾಡಿಸಿದ್ದೇನೆ ಎಂದು ಅವರ ಅವರು ಹೇಳಿದ್ದಾರೆ.

ಪ್ರಸ್ತುತ ಬೇರೆ ರಾಜ್ಯಗಳು ಜಾತಿ ಗಣತಿ ನಡೆಸುವ ಬಗ್ಗೆ ಆಸಕ್ತಿ ತೋರಿಸುತ್ತಿದೆ ಎಂದಿರುವ ಸಿದ್ದರಾಮಯ್ಯ, ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಪ್ರಧಾನಿ ಮೋದಿ ಬಳಿಗೆ ನಿಯೋಗ ಕರೆದೊಯ್ದು ಜಾತಿ ಜನಗಣತಿ ಬೇಡಿಕೆ ಮುಂದಿಟ್ಟಿರುವುದನ್ನು ಸ್ವಾಗತಿಸಿದ್ದಾರೆ.

“ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಜತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ವಿಷಾದನೀಯ ಬೆಳವಣಿಗೆ, ಒಪ್ಪಂದದ ಪ್ರಕಾರ ಜೆಡಿಎಸ್ ನಡೆದುಕೊಳ್ಳಲಿಲ್ಲ. ಹೀಗಾಗಿ ಮೂರು ಪಕ್ಷದವರು ಮೇಯರ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು. ಅತಿ ಹೆಚ್ಚು ಸ್ಥಾನ ಬಿಜೆಪಿ ಗೆದ್ದಿದ್ದರಿಂದ ಅವರಿಗೆ ಮೇಯರ್ ಸ್ಥಾನ ಸಿಕ್ಕಿದೆ” ಎಂದು ಅವರು ತಿಳಿಸಿದ್ದಾರೆ.

ಮೆಟ್ರೋ ಉದ್ಘಾಟನಾ ಸಭೆಯಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿದ ಅಧಿಕಾರಿಗಳ ನಡೆಯನ್ನು ಖಂಡಿಸಿದ ಸಿದ್ದರಾಮಯ್ಯ, “ಈ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಕ್ಕೆ ಅಗ್ರಸ್ಥಾನ. ಬೇರೆ ರಾಜ್ಯದಿಂದ ಬಂದ ನಾಯಕರು ಹಿಂದಿ/ಇಂಗ್ಲಿಷ್ನಲ್ಲಿ ಭಾಷಣ ಮಾಡಲಿ, ಆದರೆ ಕನ್ನಡ ನೆಲದಲ್ಲಿ ಮೆಟ್ರೋ ಅಧಿಕಾರಿಗಳು ಕನ್ನಡಕ್ಕೆ ಅವಮಾನ ಮಾಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಕಿಡಿ ಕಾರಿದ್ದಾರೆ.

“ಕೊರೋನಾ ನಿಯಂತ್ರಣದಲ್ಲಿ ಇದ್ದಾಗ ಸೂಕ್ತ ಮುನ್ನೆಚ್ಚರಿಕೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ತೆರೆಯುವುದು ಒಳ್ಳೆಯದು. ವಿದ್ಯಾರ್ಥಿಗಳು,ಹೆತ್ತವರು ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಣೇಶ ಹಬ್ಬ ಆಚರಿಸಬಹುದು. ಸಾರ್ವಜನಿಕರೂ ಗುಂಪು ಸೇರುವಾಗ ಎಚ್ಚರಿಕೆಯಿಂದ ಇರಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದು, ಅತಿ ಹೆಚ್ಚು ಜನ ಗುಂಪು ಸೇರದಂತೆ, ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಣೆ ಮಾಡದಂತೆ ಸರ್ಕಾರ ಎಚ್ಚರ ವಹಿಸುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪ.ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...