Homeಕರ್ನಾಟಕಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

ಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ ಹೊರಟಿರುವುದು ಖಂಡನೀಯ. ಎಲ್ಲ ಕಡೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಸಚಿವರು ಮುಂದೆ ನಿಂತು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ. ಅವರು ಎಷ್ಟೇ ಕೂಗಾಡಲಿ, ಹಾರಾಡಲಿ, ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

“90 ವರ್ಷಗಳ ಹಿಂದಿನ ಜನಗಣತಿ ಆಧಾರದಲ್ಲಿ ಇಂದಿನ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸುವುದು ಸರಿಯಲ್ಲ. ಹತ್ತು ವರ್ಷಕ್ಕೊಮ್ಮೆ ಜಾತಿ ಗಣತಿ ನಡೆಸುವುದರಿಂದ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ವೈಜ್ಞಾನಿಕವಾಗಿ ರೂಪಿಸಲು ಮತ್ತು ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ನಮ್ಮ ಕಾಂಗ್ರೆಸ್ ಸರ್ಕಾರ ಇದ್ದಾಗ 180 ಕೋಟಿ ಖರ್ಚು ಮಾಡಿ ಜಾತಿಜನಗಣತಿ ಮಾಡಿಸಿದ್ದೇನೆ ಎಂದು ಅವರ ಅವರು ಹೇಳಿದ್ದಾರೆ.

ಪ್ರಸ್ತುತ ಬೇರೆ ರಾಜ್ಯಗಳು ಜಾತಿ ಗಣತಿ ನಡೆಸುವ ಬಗ್ಗೆ ಆಸಕ್ತಿ ತೋರಿಸುತ್ತಿದೆ ಎಂದಿರುವ ಸಿದ್ದರಾಮಯ್ಯ, ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಪ್ರಧಾನಿ ಮೋದಿ ಬಳಿಗೆ ನಿಯೋಗ ಕರೆದೊಯ್ದು ಜಾತಿ ಜನಗಣತಿ ಬೇಡಿಕೆ ಮುಂದಿಟ್ಟಿರುವುದನ್ನು ಸ್ವಾಗತಿಸಿದ್ದಾರೆ.

“ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಜತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ವಿಷಾದನೀಯ ಬೆಳವಣಿಗೆ, ಒಪ್ಪಂದದ ಪ್ರಕಾರ ಜೆಡಿಎಸ್ ನಡೆದುಕೊಳ್ಳಲಿಲ್ಲ. ಹೀಗಾಗಿ ಮೂರು ಪಕ್ಷದವರು ಮೇಯರ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು. ಅತಿ ಹೆಚ್ಚು ಸ್ಥಾನ ಬಿಜೆಪಿ ಗೆದ್ದಿದ್ದರಿಂದ ಅವರಿಗೆ ಮೇಯರ್ ಸ್ಥಾನ ಸಿಕ್ಕಿದೆ” ಎಂದು ಅವರು ತಿಳಿಸಿದ್ದಾರೆ.

ಮೆಟ್ರೋ ಉದ್ಘಾಟನಾ ಸಭೆಯಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿದ ಅಧಿಕಾರಿಗಳ ನಡೆಯನ್ನು ಖಂಡಿಸಿದ ಸಿದ್ದರಾಮಯ್ಯ, “ಈ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಕ್ಕೆ ಅಗ್ರಸ್ಥಾನ. ಬೇರೆ ರಾಜ್ಯದಿಂದ ಬಂದ ನಾಯಕರು ಹಿಂದಿ/ಇಂಗ್ಲಿಷ್ನಲ್ಲಿ ಭಾಷಣ ಮಾಡಲಿ, ಆದರೆ ಕನ್ನಡ ನೆಲದಲ್ಲಿ ಮೆಟ್ರೋ ಅಧಿಕಾರಿಗಳು ಕನ್ನಡಕ್ಕೆ ಅವಮಾನ ಮಾಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಕಿಡಿ ಕಾರಿದ್ದಾರೆ.

“ಕೊರೋನಾ ನಿಯಂತ್ರಣದಲ್ಲಿ ಇದ್ದಾಗ ಸೂಕ್ತ ಮುನ್ನೆಚ್ಚರಿಕೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ತೆರೆಯುವುದು ಒಳ್ಳೆಯದು. ವಿದ್ಯಾರ್ಥಿಗಳು,ಹೆತ್ತವರು ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಣೇಶ ಹಬ್ಬ ಆಚರಿಸಬಹುದು. ಸಾರ್ವಜನಿಕರೂ ಗುಂಪು ಸೇರುವಾಗ ಎಚ್ಚರಿಕೆಯಿಂದ ಇರಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದು, ಅತಿ ಹೆಚ್ಚು ಜನ ಗುಂಪು ಸೇರದಂತೆ, ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಣೆ ಮಾಡದಂತೆ ಸರ್ಕಾರ ಎಚ್ಚರ ವಹಿಸುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪ.ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...