Homeಅಂತರಾಷ್ಟ್ರೀಯಐಸಿಸ್' ಉಗ್ರವಾದಿ ಸಂಘಟನೆಯನ್ನು ಹೆತ್ತದ್ದು ಅಮೆರಿಕದ ಸಿಐಎ! - ಜೂಲಿಯನ್ ಅಸ್ಸಾಂಜ್

ಐಸಿಸ್’ ಉಗ್ರವಾದಿ ಸಂಘಟನೆಯನ್ನು ಹೆತ್ತದ್ದು ಅಮೆರಿಕದ ಸಿಐಎ! – ಜೂಲಿಯನ್ ಅಸ್ಸಾಂಜ್

ಐದು ಲಕ್ಷ ಯುಎಸ್‌ಎ ಕೇಬಲ್ ಸಂದೇಶ ಬಿಡುಗಡೆಗೊಳಿಸಿದ ವೀಕಿಲೀಕ್ಸ್.

- Advertisement -
- Advertisement -

ಪಶ್ಚಿಮ ಏಷ್ಯಾ ಮತ್ತು ಉತ್ತರ ಆಫ್ರಿಕಾದಲ್ಲಿ ಇಸ್ಲಾಮಿಕ್ ಮುಖವಾಡದಲ್ಲಿ ಭಯೋತ್ಪಾದನೆ ನಡೆಸಿದ ಐಸಿಸ್ (ISIS) ಸಂಘಟನೆಯನ್ನು ಹುಟ್ಟುಹಾಕಿದ್ದೇ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಗುಪ್ತಚರ ಸಂಸ್ಥೆಯಾಗಿರುವ ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿ ಅಥವಾ ಸಿಐಎ ಎಂದು ವಿಶ್ವದಾದ್ಯಂತದ ನೂರಾರು ಮಹಾನಾಯಕರ ಮತ್ತು ದೇಶಗಳ ಗುಟ್ಟುಗಳನ್ನು ರಟ್ಟು ಮಾಡಿ, ಲಕ್ಷಾಂತರ ದಾಖಲೆಗಳನ್ನು ಅಂತರ್ಜಾಲದಲ್ಲಿ ಬಹಿರಂಗಗೊಳಿಸಿದ ‘ವೀಕಿ ಲೀಕ್ಸ್’ ಸ್ಥಾಪಕ ಜೂಲಿಯನ್ ಅಸ್ಸಾಂಜ್ ಹೇಳಿದ್ದಾರೆ.

ಅದಕ್ಕೆ ಪೂರಕವಾಗಿ 1979ರಷ್ಟು ಹಳೆಯ ಯುಎಸ್‌ಎಯ ರಾಜತಾಂತ್ರಿಕ ಸಂಪರ್ಕ ಕೇಬಲ್‌ಗಳನ್ನು ಅವರು ಬಿಡುಗಡೆಗೊಳಿಸಿದ್ದಾರೆ. ಈ ತನಕ ಈ ದಾಖಲೆಗಳು ಗುಪ್ತವಾಗಿದ್ದವು. express.co.uk ಯಲ್ಲಿ ಜೋನ್ ಅಸ್ಟಿನ್ ಬರೆದಿರುವ ವರದಿಯಲ್ಲಿ ಇದನ್ನು ವಿವರಿಸಲಾಗಿದೆ.

ನವೆಂಬರ್ 28, 2010ರಂದು ‘ವೀಕಿಲೀಕ್ಸ್’ ಯುಎಸ್‌ಎ ಸಹಿತ ಹಲವು ದೇಶಗಳ ಸೂಕ್ಷ್ಮ ಮತ್ತು ಹಿಂದೆ ಗುಪ್ತವಾಗಿದ್ದ ದಾಖಲೆಗಳನ್ನು ಬಹಿರಂಗಪಡಿಸಿತ್ತು. ನಂತರ ಅದು ಪಬ್ಲಿಕ್ ಲೈಬ್ರರಿ ಫಾರ್ ಯುಎಸ್ ಡಿಪ್ಲೋಮೆಸಿ (ಪಿಎಲ್‌ಯುಎಸ್‌ಡಿ) ಎಂಬ ವಿಭಾಗ ತೆರೆದಿತ್ತು. ಅದರಲ್ಲಿ ಈಗ ಹೊಸದಾಗಿ 1979ರ ನಂತರದ 5,31,525 ಹೊಸ ಸಂಪರ್ಕ ಕೇಬಲ್‌ಗಳನ್ನು ಬಹಿರಂಗಪಡಿಸಲಾಗಿದೆ.

ಈ ವರದಿಯಲ್ಲಿ ಇರುವಂತೆ, “ಕಾರ್ಟರ್ ಕೇಬಲ್ III” ಎಂದು ಕರೆಯಲಾಗುವ ಈ ಕೇಬಲ್‌ಗಳ ಮೂಲಕ ಅಸ್ಸಾಂಜ್ ಜಿಮ್ಮಿ ಕಾರ್ಟರ್ ಕಾಲದ ಬೆಳವಣಿಗೆಗಳನ್ನು ವಿವರಿಸುತ್ತಾರೆ. ಅವುಗಳಿಂದಲೇ ಐಸಿಸ್ ತಲೆಯೆತ್ತಲು ಸಾಧ್ಯವಾಯಿತು ಎನ್ನುತ್ತಾರವರು.

ನಮ್ಮ ಆಧುನಿಕ ಯುಗದ ಆರಂಭ ಯಾವುದು ಎಂದರೆ, 1979 ಎನ್ನಬಹುದು ಎಂಬ ಮಾತು ಇಲ್ಲಿ ದಾಖಲಾಗಿದೆ. ಸೋವಿಯತ್ ಒಕ್ಕೂಟವನ್ನು (ಯುಎಸ್‌ಎಸ್‌ಆರ್) ಬಗ್ಗುಬಡಿಯಲು ಅಫಘಾನಿಸ್ತಾನದ ಮುಜಾಹಿದ್ದೀನ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸುವ ಸಲುವಾಗಿ ಸಾವಿರಾರು ಕೋಟಿ ಡಾಲರುಗಳನ್ನು ಒದಗಿಸುವ ಸೌದಿ ಅರೇಬಿಯಾ ಜೊತೆಗೆ ಸಿಐಎ ಮಾಡಿದ ನಿರ್ಧಾರ ಅಲ್ ಖಾಯಿದ ಎಂಬ ಉಗ್ರಗಾಮಿ ಸಂಘಟನೆಯ ಸ್ಥಾಪನೆಗೆ ಕಾರಣವಾಯಿತು ಎಂದು ಅಸ್ಸಾಂಜ್ ವಾದಿಸಿದ್ದಾರೆ. ಪರಿಣಾಮವಾಗಿ 9/11 ಭಯೋತ್ಪಾದಕ ದಾಳಿ, ಅಫಘಾನಿಸ್ತಾನ್ ಮತ್ತು ಇರಾಕ್ ಮೇಲಿನ ದಾಳಿ ಮತ್ತು ಐಸಿಸ್ ಸ್ಥಾಪನೆಗೆ ಕಾರಣವಾಯಿತೆಂದು ಅವರ ವಾದ.

ನಂತರದಲ್ಲಿ ಐಸಿಸ್ ಹೆಸರಿನಲ್ಲಿಯೇ ಯುಎಸ್‌ಎ, ಲಿಬಿಯಾ, ಸುಡಾನ್, ಈಜಿಪ್ಟ್, ಯೆಮೆನ್ ಮತ್ತು ಸಿರಿಯಾದಂತಹ ತೈಲ ಸಮೃದ್ಧ ದೇಶಗಳಲ್ಲಿ ಹಸ್ತಕ್ಷೇಪ ನಡೆಸಿದ್ದು, ಇದೀಗ ಇನ್ನೊಂದು ತೈಲಸಮೃದ್ಧ ದೇಶ ಇರಾನ್‌ನಲ್ಲಿಯೂ ಹಾಗೆ ಮಾಡಲು ಹವಣಿಸುತ್ತಿದೆ ಎಂದು ಈ ಸಂದರ್ಭದಲ್ಲಿ ನೆನಪಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...