Homeಅಂತರಾಷ್ಟ್ರೀಯಐಸಿಸ್' ಉಗ್ರವಾದಿ ಸಂಘಟನೆಯನ್ನು ಹೆತ್ತದ್ದು ಅಮೆರಿಕದ ಸಿಐಎ! - ಜೂಲಿಯನ್ ಅಸ್ಸಾಂಜ್

ಐಸಿಸ್’ ಉಗ್ರವಾದಿ ಸಂಘಟನೆಯನ್ನು ಹೆತ್ತದ್ದು ಅಮೆರಿಕದ ಸಿಐಎ! – ಜೂಲಿಯನ್ ಅಸ್ಸಾಂಜ್

ಐದು ಲಕ್ಷ ಯುಎಸ್‌ಎ ಕೇಬಲ್ ಸಂದೇಶ ಬಿಡುಗಡೆಗೊಳಿಸಿದ ವೀಕಿಲೀಕ್ಸ್.

- Advertisement -
- Advertisement -

ಪಶ್ಚಿಮ ಏಷ್ಯಾ ಮತ್ತು ಉತ್ತರ ಆಫ್ರಿಕಾದಲ್ಲಿ ಇಸ್ಲಾಮಿಕ್ ಮುಖವಾಡದಲ್ಲಿ ಭಯೋತ್ಪಾದನೆ ನಡೆಸಿದ ಐಸಿಸ್ (ISIS) ಸಂಘಟನೆಯನ್ನು ಹುಟ್ಟುಹಾಕಿದ್ದೇ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಗುಪ್ತಚರ ಸಂಸ್ಥೆಯಾಗಿರುವ ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿ ಅಥವಾ ಸಿಐಎ ಎಂದು ವಿಶ್ವದಾದ್ಯಂತದ ನೂರಾರು ಮಹಾನಾಯಕರ ಮತ್ತು ದೇಶಗಳ ಗುಟ್ಟುಗಳನ್ನು ರಟ್ಟು ಮಾಡಿ, ಲಕ್ಷಾಂತರ ದಾಖಲೆಗಳನ್ನು ಅಂತರ್ಜಾಲದಲ್ಲಿ ಬಹಿರಂಗಗೊಳಿಸಿದ ‘ವೀಕಿ ಲೀಕ್ಸ್’ ಸ್ಥಾಪಕ ಜೂಲಿಯನ್ ಅಸ್ಸಾಂಜ್ ಹೇಳಿದ್ದಾರೆ.

ಅದಕ್ಕೆ ಪೂರಕವಾಗಿ 1979ರಷ್ಟು ಹಳೆಯ ಯುಎಸ್‌ಎಯ ರಾಜತಾಂತ್ರಿಕ ಸಂಪರ್ಕ ಕೇಬಲ್‌ಗಳನ್ನು ಅವರು ಬಿಡುಗಡೆಗೊಳಿಸಿದ್ದಾರೆ. ಈ ತನಕ ಈ ದಾಖಲೆಗಳು ಗುಪ್ತವಾಗಿದ್ದವು. express.co.uk ಯಲ್ಲಿ ಜೋನ್ ಅಸ್ಟಿನ್ ಬರೆದಿರುವ ವರದಿಯಲ್ಲಿ ಇದನ್ನು ವಿವರಿಸಲಾಗಿದೆ.

ನವೆಂಬರ್ 28, 2010ರಂದು ‘ವೀಕಿಲೀಕ್ಸ್’ ಯುಎಸ್‌ಎ ಸಹಿತ ಹಲವು ದೇಶಗಳ ಸೂಕ್ಷ್ಮ ಮತ್ತು ಹಿಂದೆ ಗುಪ್ತವಾಗಿದ್ದ ದಾಖಲೆಗಳನ್ನು ಬಹಿರಂಗಪಡಿಸಿತ್ತು. ನಂತರ ಅದು ಪಬ್ಲಿಕ್ ಲೈಬ್ರರಿ ಫಾರ್ ಯುಎಸ್ ಡಿಪ್ಲೋಮೆಸಿ (ಪಿಎಲ್‌ಯುಎಸ್‌ಡಿ) ಎಂಬ ವಿಭಾಗ ತೆರೆದಿತ್ತು. ಅದರಲ್ಲಿ ಈಗ ಹೊಸದಾಗಿ 1979ರ ನಂತರದ 5,31,525 ಹೊಸ ಸಂಪರ್ಕ ಕೇಬಲ್‌ಗಳನ್ನು ಬಹಿರಂಗಪಡಿಸಲಾಗಿದೆ.

ಈ ವರದಿಯಲ್ಲಿ ಇರುವಂತೆ, “ಕಾರ್ಟರ್ ಕೇಬಲ್ III” ಎಂದು ಕರೆಯಲಾಗುವ ಈ ಕೇಬಲ್‌ಗಳ ಮೂಲಕ ಅಸ್ಸಾಂಜ್ ಜಿಮ್ಮಿ ಕಾರ್ಟರ್ ಕಾಲದ ಬೆಳವಣಿಗೆಗಳನ್ನು ವಿವರಿಸುತ್ತಾರೆ. ಅವುಗಳಿಂದಲೇ ಐಸಿಸ್ ತಲೆಯೆತ್ತಲು ಸಾಧ್ಯವಾಯಿತು ಎನ್ನುತ್ತಾರವರು.

ನಮ್ಮ ಆಧುನಿಕ ಯುಗದ ಆರಂಭ ಯಾವುದು ಎಂದರೆ, 1979 ಎನ್ನಬಹುದು ಎಂಬ ಮಾತು ಇಲ್ಲಿ ದಾಖಲಾಗಿದೆ. ಸೋವಿಯತ್ ಒಕ್ಕೂಟವನ್ನು (ಯುಎಸ್‌ಎಸ್‌ಆರ್) ಬಗ್ಗುಬಡಿಯಲು ಅಫಘಾನಿಸ್ತಾನದ ಮುಜಾಹಿದ್ದೀನ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸುವ ಸಲುವಾಗಿ ಸಾವಿರಾರು ಕೋಟಿ ಡಾಲರುಗಳನ್ನು ಒದಗಿಸುವ ಸೌದಿ ಅರೇಬಿಯಾ ಜೊತೆಗೆ ಸಿಐಎ ಮಾಡಿದ ನಿರ್ಧಾರ ಅಲ್ ಖಾಯಿದ ಎಂಬ ಉಗ್ರಗಾಮಿ ಸಂಘಟನೆಯ ಸ್ಥಾಪನೆಗೆ ಕಾರಣವಾಯಿತು ಎಂದು ಅಸ್ಸಾಂಜ್ ವಾದಿಸಿದ್ದಾರೆ. ಪರಿಣಾಮವಾಗಿ 9/11 ಭಯೋತ್ಪಾದಕ ದಾಳಿ, ಅಫಘಾನಿಸ್ತಾನ್ ಮತ್ತು ಇರಾಕ್ ಮೇಲಿನ ದಾಳಿ ಮತ್ತು ಐಸಿಸ್ ಸ್ಥಾಪನೆಗೆ ಕಾರಣವಾಯಿತೆಂದು ಅವರ ವಾದ.

ನಂತರದಲ್ಲಿ ಐಸಿಸ್ ಹೆಸರಿನಲ್ಲಿಯೇ ಯುಎಸ್‌ಎ, ಲಿಬಿಯಾ, ಸುಡಾನ್, ಈಜಿಪ್ಟ್, ಯೆಮೆನ್ ಮತ್ತು ಸಿರಿಯಾದಂತಹ ತೈಲ ಸಮೃದ್ಧ ದೇಶಗಳಲ್ಲಿ ಹಸ್ತಕ್ಷೇಪ ನಡೆಸಿದ್ದು, ಇದೀಗ ಇನ್ನೊಂದು ತೈಲಸಮೃದ್ಧ ದೇಶ ಇರಾನ್‌ನಲ್ಲಿಯೂ ಹಾಗೆ ಮಾಡಲು ಹವಣಿಸುತ್ತಿದೆ ಎಂದು ಈ ಸಂದರ್ಭದಲ್ಲಿ ನೆನಪಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...