Homeಅಂತರಾಷ್ಟ್ರೀಯಐಸಿಸ್' ಉಗ್ರವಾದಿ ಸಂಘಟನೆಯನ್ನು ಹೆತ್ತದ್ದು ಅಮೆರಿಕದ ಸಿಐಎ! - ಜೂಲಿಯನ್ ಅಸ್ಸಾಂಜ್

ಐಸಿಸ್’ ಉಗ್ರವಾದಿ ಸಂಘಟನೆಯನ್ನು ಹೆತ್ತದ್ದು ಅಮೆರಿಕದ ಸಿಐಎ! – ಜೂಲಿಯನ್ ಅಸ್ಸಾಂಜ್

ಐದು ಲಕ್ಷ ಯುಎಸ್‌ಎ ಕೇಬಲ್ ಸಂದೇಶ ಬಿಡುಗಡೆಗೊಳಿಸಿದ ವೀಕಿಲೀಕ್ಸ್.

- Advertisement -
- Advertisement -

ಪಶ್ಚಿಮ ಏಷ್ಯಾ ಮತ್ತು ಉತ್ತರ ಆಫ್ರಿಕಾದಲ್ಲಿ ಇಸ್ಲಾಮಿಕ್ ಮುಖವಾಡದಲ್ಲಿ ಭಯೋತ್ಪಾದನೆ ನಡೆಸಿದ ಐಸಿಸ್ (ISIS) ಸಂಘಟನೆಯನ್ನು ಹುಟ್ಟುಹಾಕಿದ್ದೇ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಗುಪ್ತಚರ ಸಂಸ್ಥೆಯಾಗಿರುವ ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿ ಅಥವಾ ಸಿಐಎ ಎಂದು ವಿಶ್ವದಾದ್ಯಂತದ ನೂರಾರು ಮಹಾನಾಯಕರ ಮತ್ತು ದೇಶಗಳ ಗುಟ್ಟುಗಳನ್ನು ರಟ್ಟು ಮಾಡಿ, ಲಕ್ಷಾಂತರ ದಾಖಲೆಗಳನ್ನು ಅಂತರ್ಜಾಲದಲ್ಲಿ ಬಹಿರಂಗಗೊಳಿಸಿದ ‘ವೀಕಿ ಲೀಕ್ಸ್’ ಸ್ಥಾಪಕ ಜೂಲಿಯನ್ ಅಸ್ಸಾಂಜ್ ಹೇಳಿದ್ದಾರೆ.

ಅದಕ್ಕೆ ಪೂರಕವಾಗಿ 1979ರಷ್ಟು ಹಳೆಯ ಯುಎಸ್‌ಎಯ ರಾಜತಾಂತ್ರಿಕ ಸಂಪರ್ಕ ಕೇಬಲ್‌ಗಳನ್ನು ಅವರು ಬಿಡುಗಡೆಗೊಳಿಸಿದ್ದಾರೆ. ಈ ತನಕ ಈ ದಾಖಲೆಗಳು ಗುಪ್ತವಾಗಿದ್ದವು. express.co.uk ಯಲ್ಲಿ ಜೋನ್ ಅಸ್ಟಿನ್ ಬರೆದಿರುವ ವರದಿಯಲ್ಲಿ ಇದನ್ನು ವಿವರಿಸಲಾಗಿದೆ.

ನವೆಂಬರ್ 28, 2010ರಂದು ‘ವೀಕಿಲೀಕ್ಸ್’ ಯುಎಸ್‌ಎ ಸಹಿತ ಹಲವು ದೇಶಗಳ ಸೂಕ್ಷ್ಮ ಮತ್ತು ಹಿಂದೆ ಗುಪ್ತವಾಗಿದ್ದ ದಾಖಲೆಗಳನ್ನು ಬಹಿರಂಗಪಡಿಸಿತ್ತು. ನಂತರ ಅದು ಪಬ್ಲಿಕ್ ಲೈಬ್ರರಿ ಫಾರ್ ಯುಎಸ್ ಡಿಪ್ಲೋಮೆಸಿ (ಪಿಎಲ್‌ಯುಎಸ್‌ಡಿ) ಎಂಬ ವಿಭಾಗ ತೆರೆದಿತ್ತು. ಅದರಲ್ಲಿ ಈಗ ಹೊಸದಾಗಿ 1979ರ ನಂತರದ 5,31,525 ಹೊಸ ಸಂಪರ್ಕ ಕೇಬಲ್‌ಗಳನ್ನು ಬಹಿರಂಗಪಡಿಸಲಾಗಿದೆ.

ಈ ವರದಿಯಲ್ಲಿ ಇರುವಂತೆ, “ಕಾರ್ಟರ್ ಕೇಬಲ್ III” ಎಂದು ಕರೆಯಲಾಗುವ ಈ ಕೇಬಲ್‌ಗಳ ಮೂಲಕ ಅಸ್ಸಾಂಜ್ ಜಿಮ್ಮಿ ಕಾರ್ಟರ್ ಕಾಲದ ಬೆಳವಣಿಗೆಗಳನ್ನು ವಿವರಿಸುತ್ತಾರೆ. ಅವುಗಳಿಂದಲೇ ಐಸಿಸ್ ತಲೆಯೆತ್ತಲು ಸಾಧ್ಯವಾಯಿತು ಎನ್ನುತ್ತಾರವರು.

ನಮ್ಮ ಆಧುನಿಕ ಯುಗದ ಆರಂಭ ಯಾವುದು ಎಂದರೆ, 1979 ಎನ್ನಬಹುದು ಎಂಬ ಮಾತು ಇಲ್ಲಿ ದಾಖಲಾಗಿದೆ. ಸೋವಿಯತ್ ಒಕ್ಕೂಟವನ್ನು (ಯುಎಸ್‌ಎಸ್‌ಆರ್) ಬಗ್ಗುಬಡಿಯಲು ಅಫಘಾನಿಸ್ತಾನದ ಮುಜಾಹಿದ್ದೀನ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸುವ ಸಲುವಾಗಿ ಸಾವಿರಾರು ಕೋಟಿ ಡಾಲರುಗಳನ್ನು ಒದಗಿಸುವ ಸೌದಿ ಅರೇಬಿಯಾ ಜೊತೆಗೆ ಸಿಐಎ ಮಾಡಿದ ನಿರ್ಧಾರ ಅಲ್ ಖಾಯಿದ ಎಂಬ ಉಗ್ರಗಾಮಿ ಸಂಘಟನೆಯ ಸ್ಥಾಪನೆಗೆ ಕಾರಣವಾಯಿತು ಎಂದು ಅಸ್ಸಾಂಜ್ ವಾದಿಸಿದ್ದಾರೆ. ಪರಿಣಾಮವಾಗಿ 9/11 ಭಯೋತ್ಪಾದಕ ದಾಳಿ, ಅಫಘಾನಿಸ್ತಾನ್ ಮತ್ತು ಇರಾಕ್ ಮೇಲಿನ ದಾಳಿ ಮತ್ತು ಐಸಿಸ್ ಸ್ಥಾಪನೆಗೆ ಕಾರಣವಾಯಿತೆಂದು ಅವರ ವಾದ.

ನಂತರದಲ್ಲಿ ಐಸಿಸ್ ಹೆಸರಿನಲ್ಲಿಯೇ ಯುಎಸ್‌ಎ, ಲಿಬಿಯಾ, ಸುಡಾನ್, ಈಜಿಪ್ಟ್, ಯೆಮೆನ್ ಮತ್ತು ಸಿರಿಯಾದಂತಹ ತೈಲ ಸಮೃದ್ಧ ದೇಶಗಳಲ್ಲಿ ಹಸ್ತಕ್ಷೇಪ ನಡೆಸಿದ್ದು, ಇದೀಗ ಇನ್ನೊಂದು ತೈಲಸಮೃದ್ಧ ದೇಶ ಇರಾನ್‌ನಲ್ಲಿಯೂ ಹಾಗೆ ಮಾಡಲು ಹವಣಿಸುತ್ತಿದೆ ಎಂದು ಈ ಸಂದರ್ಭದಲ್ಲಿ ನೆನಪಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....