Homeಅಂತರಾಷ್ಟ್ರೀಯಐಸಿಸ್' ಉಗ್ರವಾದಿ ಸಂಘಟನೆಯನ್ನು ಹೆತ್ತದ್ದು ಅಮೆರಿಕದ ಸಿಐಎ! - ಜೂಲಿಯನ್ ಅಸ್ಸಾಂಜ್

ಐಸಿಸ್’ ಉಗ್ರವಾದಿ ಸಂಘಟನೆಯನ್ನು ಹೆತ್ತದ್ದು ಅಮೆರಿಕದ ಸಿಐಎ! – ಜೂಲಿಯನ್ ಅಸ್ಸಾಂಜ್

ಐದು ಲಕ್ಷ ಯುಎಸ್‌ಎ ಕೇಬಲ್ ಸಂದೇಶ ಬಿಡುಗಡೆಗೊಳಿಸಿದ ವೀಕಿಲೀಕ್ಸ್.

- Advertisement -
- Advertisement -

ಪಶ್ಚಿಮ ಏಷ್ಯಾ ಮತ್ತು ಉತ್ತರ ಆಫ್ರಿಕಾದಲ್ಲಿ ಇಸ್ಲಾಮಿಕ್ ಮುಖವಾಡದಲ್ಲಿ ಭಯೋತ್ಪಾದನೆ ನಡೆಸಿದ ಐಸಿಸ್ (ISIS) ಸಂಘಟನೆಯನ್ನು ಹುಟ್ಟುಹಾಕಿದ್ದೇ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಗುಪ್ತಚರ ಸಂಸ್ಥೆಯಾಗಿರುವ ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿ ಅಥವಾ ಸಿಐಎ ಎಂದು ವಿಶ್ವದಾದ್ಯಂತದ ನೂರಾರು ಮಹಾನಾಯಕರ ಮತ್ತು ದೇಶಗಳ ಗುಟ್ಟುಗಳನ್ನು ರಟ್ಟು ಮಾಡಿ, ಲಕ್ಷಾಂತರ ದಾಖಲೆಗಳನ್ನು ಅಂತರ್ಜಾಲದಲ್ಲಿ ಬಹಿರಂಗಗೊಳಿಸಿದ ‘ವೀಕಿ ಲೀಕ್ಸ್’ ಸ್ಥಾಪಕ ಜೂಲಿಯನ್ ಅಸ್ಸಾಂಜ್ ಹೇಳಿದ್ದಾರೆ.

ಅದಕ್ಕೆ ಪೂರಕವಾಗಿ 1979ರಷ್ಟು ಹಳೆಯ ಯುಎಸ್‌ಎಯ ರಾಜತಾಂತ್ರಿಕ ಸಂಪರ್ಕ ಕೇಬಲ್‌ಗಳನ್ನು ಅವರು ಬಿಡುಗಡೆಗೊಳಿಸಿದ್ದಾರೆ. ಈ ತನಕ ಈ ದಾಖಲೆಗಳು ಗುಪ್ತವಾಗಿದ್ದವು. express.co.uk ಯಲ್ಲಿ ಜೋನ್ ಅಸ್ಟಿನ್ ಬರೆದಿರುವ ವರದಿಯಲ್ಲಿ ಇದನ್ನು ವಿವರಿಸಲಾಗಿದೆ.

ನವೆಂಬರ್ 28, 2010ರಂದು ‘ವೀಕಿಲೀಕ್ಸ್’ ಯುಎಸ್‌ಎ ಸಹಿತ ಹಲವು ದೇಶಗಳ ಸೂಕ್ಷ್ಮ ಮತ್ತು ಹಿಂದೆ ಗುಪ್ತವಾಗಿದ್ದ ದಾಖಲೆಗಳನ್ನು ಬಹಿರಂಗಪಡಿಸಿತ್ತು. ನಂತರ ಅದು ಪಬ್ಲಿಕ್ ಲೈಬ್ರರಿ ಫಾರ್ ಯುಎಸ್ ಡಿಪ್ಲೋಮೆಸಿ (ಪಿಎಲ್‌ಯುಎಸ್‌ಡಿ) ಎಂಬ ವಿಭಾಗ ತೆರೆದಿತ್ತು. ಅದರಲ್ಲಿ ಈಗ ಹೊಸದಾಗಿ 1979ರ ನಂತರದ 5,31,525 ಹೊಸ ಸಂಪರ್ಕ ಕೇಬಲ್‌ಗಳನ್ನು ಬಹಿರಂಗಪಡಿಸಲಾಗಿದೆ.

ಈ ವರದಿಯಲ್ಲಿ ಇರುವಂತೆ, “ಕಾರ್ಟರ್ ಕೇಬಲ್ III” ಎಂದು ಕರೆಯಲಾಗುವ ಈ ಕೇಬಲ್‌ಗಳ ಮೂಲಕ ಅಸ್ಸಾಂಜ್ ಜಿಮ್ಮಿ ಕಾರ್ಟರ್ ಕಾಲದ ಬೆಳವಣಿಗೆಗಳನ್ನು ವಿವರಿಸುತ್ತಾರೆ. ಅವುಗಳಿಂದಲೇ ಐಸಿಸ್ ತಲೆಯೆತ್ತಲು ಸಾಧ್ಯವಾಯಿತು ಎನ್ನುತ್ತಾರವರು.

ನಮ್ಮ ಆಧುನಿಕ ಯುಗದ ಆರಂಭ ಯಾವುದು ಎಂದರೆ, 1979 ಎನ್ನಬಹುದು ಎಂಬ ಮಾತು ಇಲ್ಲಿ ದಾಖಲಾಗಿದೆ. ಸೋವಿಯತ್ ಒಕ್ಕೂಟವನ್ನು (ಯುಎಸ್‌ಎಸ್‌ಆರ್) ಬಗ್ಗುಬಡಿಯಲು ಅಫಘಾನಿಸ್ತಾನದ ಮುಜಾಹಿದ್ದೀನ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸುವ ಸಲುವಾಗಿ ಸಾವಿರಾರು ಕೋಟಿ ಡಾಲರುಗಳನ್ನು ಒದಗಿಸುವ ಸೌದಿ ಅರೇಬಿಯಾ ಜೊತೆಗೆ ಸಿಐಎ ಮಾಡಿದ ನಿರ್ಧಾರ ಅಲ್ ಖಾಯಿದ ಎಂಬ ಉಗ್ರಗಾಮಿ ಸಂಘಟನೆಯ ಸ್ಥಾಪನೆಗೆ ಕಾರಣವಾಯಿತು ಎಂದು ಅಸ್ಸಾಂಜ್ ವಾದಿಸಿದ್ದಾರೆ. ಪರಿಣಾಮವಾಗಿ 9/11 ಭಯೋತ್ಪಾದಕ ದಾಳಿ, ಅಫಘಾನಿಸ್ತಾನ್ ಮತ್ತು ಇರಾಕ್ ಮೇಲಿನ ದಾಳಿ ಮತ್ತು ಐಸಿಸ್ ಸ್ಥಾಪನೆಗೆ ಕಾರಣವಾಯಿತೆಂದು ಅವರ ವಾದ.

ನಂತರದಲ್ಲಿ ಐಸಿಸ್ ಹೆಸರಿನಲ್ಲಿಯೇ ಯುಎಸ್‌ಎ, ಲಿಬಿಯಾ, ಸುಡಾನ್, ಈಜಿಪ್ಟ್, ಯೆಮೆನ್ ಮತ್ತು ಸಿರಿಯಾದಂತಹ ತೈಲ ಸಮೃದ್ಧ ದೇಶಗಳಲ್ಲಿ ಹಸ್ತಕ್ಷೇಪ ನಡೆಸಿದ್ದು, ಇದೀಗ ಇನ್ನೊಂದು ತೈಲಸಮೃದ್ಧ ದೇಶ ಇರಾನ್‌ನಲ್ಲಿಯೂ ಹಾಗೆ ಮಾಡಲು ಹವಣಿಸುತ್ತಿದೆ ಎಂದು ಈ ಸಂದರ್ಭದಲ್ಲಿ ನೆನಪಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...