Homeಅಂತರಾಷ್ಟ್ರೀಯಐಸಿಸ್' ಉಗ್ರವಾದಿ ಸಂಘಟನೆಯನ್ನು ಹೆತ್ತದ್ದು ಅಮೆರಿಕದ ಸಿಐಎ! - ಜೂಲಿಯನ್ ಅಸ್ಸಾಂಜ್

ಐಸಿಸ್’ ಉಗ್ರವಾದಿ ಸಂಘಟನೆಯನ್ನು ಹೆತ್ತದ್ದು ಅಮೆರಿಕದ ಸಿಐಎ! – ಜೂಲಿಯನ್ ಅಸ್ಸಾಂಜ್

ಐದು ಲಕ್ಷ ಯುಎಸ್‌ಎ ಕೇಬಲ್ ಸಂದೇಶ ಬಿಡುಗಡೆಗೊಳಿಸಿದ ವೀಕಿಲೀಕ್ಸ್.

- Advertisement -
- Advertisement -

ಪಶ್ಚಿಮ ಏಷ್ಯಾ ಮತ್ತು ಉತ್ತರ ಆಫ್ರಿಕಾದಲ್ಲಿ ಇಸ್ಲಾಮಿಕ್ ಮುಖವಾಡದಲ್ಲಿ ಭಯೋತ್ಪಾದನೆ ನಡೆಸಿದ ಐಸಿಸ್ (ISIS) ಸಂಘಟನೆಯನ್ನು ಹುಟ್ಟುಹಾಕಿದ್ದೇ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಗುಪ್ತಚರ ಸಂಸ್ಥೆಯಾಗಿರುವ ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿ ಅಥವಾ ಸಿಐಎ ಎಂದು ವಿಶ್ವದಾದ್ಯಂತದ ನೂರಾರು ಮಹಾನಾಯಕರ ಮತ್ತು ದೇಶಗಳ ಗುಟ್ಟುಗಳನ್ನು ರಟ್ಟು ಮಾಡಿ, ಲಕ್ಷಾಂತರ ದಾಖಲೆಗಳನ್ನು ಅಂತರ್ಜಾಲದಲ್ಲಿ ಬಹಿರಂಗಗೊಳಿಸಿದ ‘ವೀಕಿ ಲೀಕ್ಸ್’ ಸ್ಥಾಪಕ ಜೂಲಿಯನ್ ಅಸ್ಸಾಂಜ್ ಹೇಳಿದ್ದಾರೆ.

ಅದಕ್ಕೆ ಪೂರಕವಾಗಿ 1979ರಷ್ಟು ಹಳೆಯ ಯುಎಸ್‌ಎಯ ರಾಜತಾಂತ್ರಿಕ ಸಂಪರ್ಕ ಕೇಬಲ್‌ಗಳನ್ನು ಅವರು ಬಿಡುಗಡೆಗೊಳಿಸಿದ್ದಾರೆ. ಈ ತನಕ ಈ ದಾಖಲೆಗಳು ಗುಪ್ತವಾಗಿದ್ದವು. express.co.uk ಯಲ್ಲಿ ಜೋನ್ ಅಸ್ಟಿನ್ ಬರೆದಿರುವ ವರದಿಯಲ್ಲಿ ಇದನ್ನು ವಿವರಿಸಲಾಗಿದೆ.

ನವೆಂಬರ್ 28, 2010ರಂದು ‘ವೀಕಿಲೀಕ್ಸ್’ ಯುಎಸ್‌ಎ ಸಹಿತ ಹಲವು ದೇಶಗಳ ಸೂಕ್ಷ್ಮ ಮತ್ತು ಹಿಂದೆ ಗುಪ್ತವಾಗಿದ್ದ ದಾಖಲೆಗಳನ್ನು ಬಹಿರಂಗಪಡಿಸಿತ್ತು. ನಂತರ ಅದು ಪಬ್ಲಿಕ್ ಲೈಬ್ರರಿ ಫಾರ್ ಯುಎಸ್ ಡಿಪ್ಲೋಮೆಸಿ (ಪಿಎಲ್‌ಯುಎಸ್‌ಡಿ) ಎಂಬ ವಿಭಾಗ ತೆರೆದಿತ್ತು. ಅದರಲ್ಲಿ ಈಗ ಹೊಸದಾಗಿ 1979ರ ನಂತರದ 5,31,525 ಹೊಸ ಸಂಪರ್ಕ ಕೇಬಲ್‌ಗಳನ್ನು ಬಹಿರಂಗಪಡಿಸಲಾಗಿದೆ.

ಈ ವರದಿಯಲ್ಲಿ ಇರುವಂತೆ, “ಕಾರ್ಟರ್ ಕೇಬಲ್ III” ಎಂದು ಕರೆಯಲಾಗುವ ಈ ಕೇಬಲ್‌ಗಳ ಮೂಲಕ ಅಸ್ಸಾಂಜ್ ಜಿಮ್ಮಿ ಕಾರ್ಟರ್ ಕಾಲದ ಬೆಳವಣಿಗೆಗಳನ್ನು ವಿವರಿಸುತ್ತಾರೆ. ಅವುಗಳಿಂದಲೇ ಐಸಿಸ್ ತಲೆಯೆತ್ತಲು ಸಾಧ್ಯವಾಯಿತು ಎನ್ನುತ್ತಾರವರು.

ನಮ್ಮ ಆಧುನಿಕ ಯುಗದ ಆರಂಭ ಯಾವುದು ಎಂದರೆ, 1979 ಎನ್ನಬಹುದು ಎಂಬ ಮಾತು ಇಲ್ಲಿ ದಾಖಲಾಗಿದೆ. ಸೋವಿಯತ್ ಒಕ್ಕೂಟವನ್ನು (ಯುಎಸ್‌ಎಸ್‌ಆರ್) ಬಗ್ಗುಬಡಿಯಲು ಅಫಘಾನಿಸ್ತಾನದ ಮುಜಾಹಿದ್ದೀನ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸುವ ಸಲುವಾಗಿ ಸಾವಿರಾರು ಕೋಟಿ ಡಾಲರುಗಳನ್ನು ಒದಗಿಸುವ ಸೌದಿ ಅರೇಬಿಯಾ ಜೊತೆಗೆ ಸಿಐಎ ಮಾಡಿದ ನಿರ್ಧಾರ ಅಲ್ ಖಾಯಿದ ಎಂಬ ಉಗ್ರಗಾಮಿ ಸಂಘಟನೆಯ ಸ್ಥಾಪನೆಗೆ ಕಾರಣವಾಯಿತು ಎಂದು ಅಸ್ಸಾಂಜ್ ವಾದಿಸಿದ್ದಾರೆ. ಪರಿಣಾಮವಾಗಿ 9/11 ಭಯೋತ್ಪಾದಕ ದಾಳಿ, ಅಫಘಾನಿಸ್ತಾನ್ ಮತ್ತು ಇರಾಕ್ ಮೇಲಿನ ದಾಳಿ ಮತ್ತು ಐಸಿಸ್ ಸ್ಥಾಪನೆಗೆ ಕಾರಣವಾಯಿತೆಂದು ಅವರ ವಾದ.

ನಂತರದಲ್ಲಿ ಐಸಿಸ್ ಹೆಸರಿನಲ್ಲಿಯೇ ಯುಎಸ್‌ಎ, ಲಿಬಿಯಾ, ಸುಡಾನ್, ಈಜಿಪ್ಟ್, ಯೆಮೆನ್ ಮತ್ತು ಸಿರಿಯಾದಂತಹ ತೈಲ ಸಮೃದ್ಧ ದೇಶಗಳಲ್ಲಿ ಹಸ್ತಕ್ಷೇಪ ನಡೆಸಿದ್ದು, ಇದೀಗ ಇನ್ನೊಂದು ತೈಲಸಮೃದ್ಧ ದೇಶ ಇರಾನ್‌ನಲ್ಲಿಯೂ ಹಾಗೆ ಮಾಡಲು ಹವಣಿಸುತ್ತಿದೆ ಎಂದು ಈ ಸಂದರ್ಭದಲ್ಲಿ ನೆನಪಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...