Homeಮುಖಪುಟ'ಇಸ್ಕಾನ್' ಅತಿ ದೊಡ್ಡ ಮೋಸದ ಸಂಸ್ಥೆ, ಹಸುಗಳನ್ನು ಕಟುಕರಿಗೆ ಮಾರಿದೆ: ಬಿಜೆಪಿ ಸಂಸದೆ ಮನೇಕಾ ಗಾಂಧಿ

‘ಇಸ್ಕಾನ್’ ಅತಿ ದೊಡ್ಡ ಮೋಸದ ಸಂಸ್ಥೆ, ಹಸುಗಳನ್ನು ಕಟುಕರಿಗೆ ಮಾರಿದೆ: ಬಿಜೆಪಿ ಸಂಸದೆ ಮನೇಕಾ ಗಾಂಧಿ

- Advertisement -
- Advertisement -

ಅಂತರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್) ದೇಶದ ಅತಿ ದೊಡ್ಡ ಮೋಸದ ಸಂಸ್ಥೆಯಾಗಿದ್ದು, ಗೋಶಾಲೆಯಿಂದ ಗೋವುಗಳನ್ನು ಕಸಾಯಿ ಖಾನೆಗೆ ಮಾರಾಟ ಮಾಡುತ್ತಿದೆ ಎಂದು ಬಿಜೆಪಿ ಸಂಸದೆ ಮನೇಕಾ ಗಾಂಧಿ ಧಾರ್ಮಿಕ ಸಂಘಟನೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಶ್ವದ ಅತ್ಯಂತ ಪ್ರಭಾವಿ ಕೃಷ್ಣ ಪಂಥವಾದ ಇಸ್ಕಾನ್ ಸಂಸ್ಥೆಯು ಮನೇಕಾ ಗಾಂಧಿ ಅವರ ಆರೋಪಗಳನ್ನು ಸುಳ್ಳು ಎಂದು ತಿರಸ್ಕರಿಸಿತು.

ಮಾಜಿ ಕೇಂದ್ರ ಸಚಿವೆ ಮತ್ತು ಪ್ರಾಣಿ ಹಕ್ಕುಗಳ ಕಾರ್ಯಕರ್ತೆಯಾಗಿರುವ ಮನೇಕಾ ಗಾಂಧಿ ಅವರು ಪ್ರಾಣಿಗಳ ಕಲ್ಯಾಣದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಧ್ವನಿಯೆತ್ತಿದ್ದಾರೆ.

”ಇಸ್ಕಾನ್ ದೇಶದ ಅತಿದೊಡ್ಡ ಮೋಸದ ಸಂಸ್ಥೆ. ಇದು ಗೋಶಾಲೆಗಳನ್ನು ನಿರ್ವಹಿಸುತ್ತದೆ ಮತ್ತು ವಿಶಾಲವಾದ ಜಮೀನುಗಳನ್ನು ಒಳಗೊಂಡಂತೆ ಸರ್ಕಾರದಿಂದ ಪ್ರಯೋಜನಗಳನ್ನು ಪಡೆಯುತ್ತದೆ” ಎಂದು ಅವರು ವಿಡಿಯೋದಲ್ಲಿ ಹೇಳಿರುವುದು ವೈರಲ್ ಆಗಿದೆ.

ನಂತರ ಅವರು ಆಂಧ್ರಪ್ರದೇಶದ ಇಸ್ಕಾನ್‌ನ ಅನಂತಪುರ ಗೋಶಾಲಾಗೆ ಭೇಟಿ ನೀಡಿದ್ದನ್ನು ನೆನಪಿಸಿಕೊಳ್ಳುತ್ತಾರೆ, ಅಲ್ಲಿ ಅವರು ಹಾಲು ಅಥವಾ ಕರುಗಳನ್ನು ನೀಡದ ಯಾವುದೇ ಹಸುವನ್ನು ಕಾಣಿಸಲಿಲ್ಲ ಎಂದು ಹೇಳುತ್ತಾರೆ. “ಇಡೀ ಡೈರಿಯಲ್ಲಿ ಗೊಡ್ಡು ಹಸು ಇರಲಿಲ್ಲ. ಒಂದು ಕರುವೂ ಇರಲಿಲ್ಲ. ಅಂದರೆ ಎಲ್ಲಾ ಮಾರಾಟ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

(ಗೊಡ್ಡು ಹಸು ಎಂದರೆ ಸ್ವಲ್ಪ ಸಮಯದಿಂದ ಹಾಲು ನೀಡದಿರುವುದು)

”ಇಸ್ಕಾನ್ ತನ್ನ ಎಲ್ಲಾ ಹಸುಗಳನ್ನು ಕಟುಕರಿಗೆ ಮಾರುತ್ತಿದೆ. ಅವರು ರಸ್ತೆಗಳಲ್ಲಿ ‘ಹರೇ ರಾಮ್ ಹರೇ ಕೃಷ್ಣ’ ಎಂದು ಹಾಡುತ್ತಾರೆ. ನಂತರ ಅವರು ತಮ್ಮ ಇಡೀ ಜೀವನ ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ಬಹುಶಃ ಅವರಷ್ಟು ಜಾನುವಾರುಗಳನ್ನು ಯಾರೂ ಕಟುಕರಿಗೆ ಮಾರಾಟ ಮಾಡಿಲ್ಲ” ಎಂದು ಅವರು ಆರೋಪಿಸಿದ್ದಾರೆ.

ಆರೋಪಗಳನ್ನು ತಿರಸ್ಕರಿಸಿದ ಇಸ್ಕಾನ್‌ನ ರಾಷ್ಟ್ರೀಯ ವಕ್ತಾರ ಯುಧಿಸ್ತಿರ್ ಗೋವಿಂದ ದಾಸ್, ”ಈ ಧಾರ್ಮಿಕ ಸಂಸ್ಥೆಯು ಭಾರತದಲ್ಲಿ ಮಾತ್ರವಲ್ಲದೆ ಜಾಗತಿಕವಾಗಿ ಗೋವು ಮತ್ತು ಗೂಳಿ ರಕ್ಷಣೆ ಮತ್ತು ಆರೈಕೆಯಲ್ಲಿ ಮುಂಚೂಣಿಯಲ್ಲಿದೆ. ಹಸುಗಳು ಮತ್ತು ಹೋರಿಗಳ ಸೇವೆ ಮಾಡುತ್ತದೆ ವಿನಃ ಅವರ ಆರೋಪದಂತೆ ಕಟುಕರಿಗೆ ಮಾರಾಟ ಮಾಡುವುದಿಲ್ಲ” ಎಂದು ಅವರು ಹೇಳಿದರು.

ದನದ ಮಾಂಸವು ಪ್ರಧಾನ ಆಹಾರವಾಗಿರುವ ಪ್ರಪಂಚದ ಹಲವು ಭಾಗಗಳಲ್ಲಿ ಇಸ್ಕಾನ್ ಗೋಸಂರಕ್ಷಣೆಗೆ ಮುಂದಾಗಿದೆ. ಮನೇಕ ಗಾಂಧಿ ಅವರು ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಮತ್ತು ಇಸ್ಕಾನ್‌ನ ಹಿತೈಷಿಗಳು ಆದ್ದರಿಂದ ಅವರ ಈ ಹೇಳಿಕೆಗಳಿಂದ ನಮಗೆ ಆಶ್ಚರ್ಯವಾಗಿದೆ” ಎಂದು ಇಸ್ಕಾನ್ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮೋದಿಯವರ ಪಕ್ಷ, ಸಂಘಪರಿವಾರ ಅತಿ ಹೆಚ್ಚು ದ್ವೇಷ ಭಾಷಣಗಳಲ್ಲಿ ತೊಡಗಿವೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...