Homeಮುಖಪುಟ'ಇಸ್ಕಾನ್' ಅತಿ ದೊಡ್ಡ ಮೋಸದ ಸಂಸ್ಥೆ, ಹಸುಗಳನ್ನು ಕಟುಕರಿಗೆ ಮಾರಿದೆ: ಬಿಜೆಪಿ ಸಂಸದೆ ಮನೇಕಾ ಗಾಂಧಿ

‘ಇಸ್ಕಾನ್’ ಅತಿ ದೊಡ್ಡ ಮೋಸದ ಸಂಸ್ಥೆ, ಹಸುಗಳನ್ನು ಕಟುಕರಿಗೆ ಮಾರಿದೆ: ಬಿಜೆಪಿ ಸಂಸದೆ ಮನೇಕಾ ಗಾಂಧಿ

- Advertisement -
- Advertisement -

ಅಂತರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್) ದೇಶದ ಅತಿ ದೊಡ್ಡ ಮೋಸದ ಸಂಸ್ಥೆಯಾಗಿದ್ದು, ಗೋಶಾಲೆಯಿಂದ ಗೋವುಗಳನ್ನು ಕಸಾಯಿ ಖಾನೆಗೆ ಮಾರಾಟ ಮಾಡುತ್ತಿದೆ ಎಂದು ಬಿಜೆಪಿ ಸಂಸದೆ ಮನೇಕಾ ಗಾಂಧಿ ಧಾರ್ಮಿಕ ಸಂಘಟನೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಶ್ವದ ಅತ್ಯಂತ ಪ್ರಭಾವಿ ಕೃಷ್ಣ ಪಂಥವಾದ ಇಸ್ಕಾನ್ ಸಂಸ್ಥೆಯು ಮನೇಕಾ ಗಾಂಧಿ ಅವರ ಆರೋಪಗಳನ್ನು ಸುಳ್ಳು ಎಂದು ತಿರಸ್ಕರಿಸಿತು.

ಮಾಜಿ ಕೇಂದ್ರ ಸಚಿವೆ ಮತ್ತು ಪ್ರಾಣಿ ಹಕ್ಕುಗಳ ಕಾರ್ಯಕರ್ತೆಯಾಗಿರುವ ಮನೇಕಾ ಗಾಂಧಿ ಅವರು ಪ್ರಾಣಿಗಳ ಕಲ್ಯಾಣದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಧ್ವನಿಯೆತ್ತಿದ್ದಾರೆ.

”ಇಸ್ಕಾನ್ ದೇಶದ ಅತಿದೊಡ್ಡ ಮೋಸದ ಸಂಸ್ಥೆ. ಇದು ಗೋಶಾಲೆಗಳನ್ನು ನಿರ್ವಹಿಸುತ್ತದೆ ಮತ್ತು ವಿಶಾಲವಾದ ಜಮೀನುಗಳನ್ನು ಒಳಗೊಂಡಂತೆ ಸರ್ಕಾರದಿಂದ ಪ್ರಯೋಜನಗಳನ್ನು ಪಡೆಯುತ್ತದೆ” ಎಂದು ಅವರು ವಿಡಿಯೋದಲ್ಲಿ ಹೇಳಿರುವುದು ವೈರಲ್ ಆಗಿದೆ.

ನಂತರ ಅವರು ಆಂಧ್ರಪ್ರದೇಶದ ಇಸ್ಕಾನ್‌ನ ಅನಂತಪುರ ಗೋಶಾಲಾಗೆ ಭೇಟಿ ನೀಡಿದ್ದನ್ನು ನೆನಪಿಸಿಕೊಳ್ಳುತ್ತಾರೆ, ಅಲ್ಲಿ ಅವರು ಹಾಲು ಅಥವಾ ಕರುಗಳನ್ನು ನೀಡದ ಯಾವುದೇ ಹಸುವನ್ನು ಕಾಣಿಸಲಿಲ್ಲ ಎಂದು ಹೇಳುತ್ತಾರೆ. “ಇಡೀ ಡೈರಿಯಲ್ಲಿ ಗೊಡ್ಡು ಹಸು ಇರಲಿಲ್ಲ. ಒಂದು ಕರುವೂ ಇರಲಿಲ್ಲ. ಅಂದರೆ ಎಲ್ಲಾ ಮಾರಾಟ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

(ಗೊಡ್ಡು ಹಸು ಎಂದರೆ ಸ್ವಲ್ಪ ಸಮಯದಿಂದ ಹಾಲು ನೀಡದಿರುವುದು)

”ಇಸ್ಕಾನ್ ತನ್ನ ಎಲ್ಲಾ ಹಸುಗಳನ್ನು ಕಟುಕರಿಗೆ ಮಾರುತ್ತಿದೆ. ಅವರು ರಸ್ತೆಗಳಲ್ಲಿ ‘ಹರೇ ರಾಮ್ ಹರೇ ಕೃಷ್ಣ’ ಎಂದು ಹಾಡುತ್ತಾರೆ. ನಂತರ ಅವರು ತಮ್ಮ ಇಡೀ ಜೀವನ ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ಬಹುಶಃ ಅವರಷ್ಟು ಜಾನುವಾರುಗಳನ್ನು ಯಾರೂ ಕಟುಕರಿಗೆ ಮಾರಾಟ ಮಾಡಿಲ್ಲ” ಎಂದು ಅವರು ಆರೋಪಿಸಿದ್ದಾರೆ.

ಆರೋಪಗಳನ್ನು ತಿರಸ್ಕರಿಸಿದ ಇಸ್ಕಾನ್‌ನ ರಾಷ್ಟ್ರೀಯ ವಕ್ತಾರ ಯುಧಿಸ್ತಿರ್ ಗೋವಿಂದ ದಾಸ್, ”ಈ ಧಾರ್ಮಿಕ ಸಂಸ್ಥೆಯು ಭಾರತದಲ್ಲಿ ಮಾತ್ರವಲ್ಲದೆ ಜಾಗತಿಕವಾಗಿ ಗೋವು ಮತ್ತು ಗೂಳಿ ರಕ್ಷಣೆ ಮತ್ತು ಆರೈಕೆಯಲ್ಲಿ ಮುಂಚೂಣಿಯಲ್ಲಿದೆ. ಹಸುಗಳು ಮತ್ತು ಹೋರಿಗಳ ಸೇವೆ ಮಾಡುತ್ತದೆ ವಿನಃ ಅವರ ಆರೋಪದಂತೆ ಕಟುಕರಿಗೆ ಮಾರಾಟ ಮಾಡುವುದಿಲ್ಲ” ಎಂದು ಅವರು ಹೇಳಿದರು.

ದನದ ಮಾಂಸವು ಪ್ರಧಾನ ಆಹಾರವಾಗಿರುವ ಪ್ರಪಂಚದ ಹಲವು ಭಾಗಗಳಲ್ಲಿ ಇಸ್ಕಾನ್ ಗೋಸಂರಕ್ಷಣೆಗೆ ಮುಂದಾಗಿದೆ. ಮನೇಕ ಗಾಂಧಿ ಅವರು ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಮತ್ತು ಇಸ್ಕಾನ್‌ನ ಹಿತೈಷಿಗಳು ಆದ್ದರಿಂದ ಅವರ ಈ ಹೇಳಿಕೆಗಳಿಂದ ನಮಗೆ ಆಶ್ಚರ್ಯವಾಗಿದೆ” ಎಂದು ಇಸ್ಕಾನ್ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮೋದಿಯವರ ಪಕ್ಷ, ಸಂಘಪರಿವಾರ ಅತಿ ಹೆಚ್ಚು ದ್ವೇಷ ಭಾಷಣಗಳಲ್ಲಿ ತೊಡಗಿವೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...