Homeಮುಖಪುಟಗೋವುಗಳ ಮಾರಾಟದ ಹೇಳಿಕೆಗಾಗಿ ಮನೇಕಾ ಗಾಂಧಿಗೆ ಇಸ್ಕಾನ್‌ನಿಂದ 100 ಕೋಟಿ ಮಾನನಷ್ಟ ನೋಟಿಸ್

ಗೋವುಗಳ ಮಾರಾಟದ ಹೇಳಿಕೆಗಾಗಿ ಮನೇಕಾ ಗಾಂಧಿಗೆ ಇಸ್ಕಾನ್‌ನಿಂದ 100 ಕೋಟಿ ಮಾನನಷ್ಟ ನೋಟಿಸ್

- Advertisement -
- Advertisement -

ಅಂತರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್) ದೇಶದ ಅತಿ ದೊಡ್ಡ ಮೋಸದ ಸಂಸ್ಥೆಯಾಗಿದ್ದು, ಗೋಶಾಲೆಯಿಂದ ಗೋವುಗಳನ್ನು ಕಸಾಯಿ ಖಾನೆಗೆ ಮಾರಾಟ ಮಾಡುತ್ತಿದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಸಂಸದೆ ಮನೇಕಾ ಗಾಂಧಿ ವಿರುದ್ಧ ಶುಕ್ರವಾರ 100 ಕೋಟಿ ರೂಪಾಯಿ ಮಾನನಷ್ಟ ನೋಟಿಸ್ ಕಳುಹಿಸಲಾಗಿದೆ.

ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊದಲ್ಲಿ, ”ಆಂಧ್ರಪ್ರದೇಶದ ಅನಂತಪುರ ನಗರದಲ್ಲಿ ಇಸ್ಕಾನ್‌ನ ಗೋಶಾಲೆಗೆ ಭೇಟಿ ನೀಡಿದ್ದಾಗಿ ಹೇಳುತ್ತಾರೆ. ಆಗ ಇಸ್ಕಾನ್ ಎನ್ನುವುದು ಭಾರತದ ಅತಿ ದೊಡ್ಡ ಮೋಸದ ಸಂಸ್ಥೆ ಎಂದು ಹೇಳಿದರು.

”ಇಡೀ ಡೈರಿಯಲ್ಲಿ ಒಂದೇ ಒಂದು ಗೊಡ್ಡು ಹಸು ಇರಲಿಲ್ಲ, ಒಂದು ಕರುವೂ ಇರಲಿಲ್ಲ. ಇದರರ್ಥ ಎಲ್ಲವನ್ನೂ ಮಾರಾಟ ಮಾಡಲಾಗಿದೆ” ಎಂದು ಹೇಳಿದರು. (ಗೊಡ್ಡು ಹಸು ಎಂದರೆ ಸ್ವಲ್ಪ ಸಮಯದಿಂದ ಹಾಲು ನೀಡದಿರುವುದು.)

ಮಾಜಿ ಕೇಂದ್ರ ಸಚಿವ ಮತ್ತು ಪ್ರಾಣಿ ಹಕ್ಕುಗಳ ಕಾರ್ಯಕರ್ತಯಾಗಿರುವ ಮನೇಕಾ ಗಾಂಧಿ, ”ಇಸ್ಕಾನ್ ಗೋಶಾಲೆಗಳನ್ನು ಸ್ಥಾಪಿಸಿ ಸರ್ಕಾರದಿಂದ ”ಅನಿಯಮಿತ ಪ್ರಯೋಜನಗಳನ್ನು” ಪಡೆಯುತ್ತಿದೆ ಎಂದು ಆರೋಪಿಸಿದರು.

”ಅವರು(ಇಸ್ಕಾನ್) ರಸ್ತೆಗಳಲ್ಲಿ ‘ಹರೇ ರಾಮ್ ಹರೇ ಕೃಷ್ಣ’ ಎಂದು ಹಾಡುತ್ತಾರೆ ಮತ್ತು ಅವರ ಸಂಪೂರ್ಣ ಜೀವನವು ಹಾಲಿನ ಮೇಲೆ ಅವಲಂಬಿತವಾಗಿದೆ ಎಂದು ಹೇಳುತ್ತಾರೆ. ಬಹುಶಃ, ಅವರಷ್ಟು ಜಾನುವಾರುಗಳನ್ನು ಯಾರೂ ಕಟುಕರಿಗೆ ಯಾರೂ ಮಾರಾಟ ಮಾಡಿರಲಿಕ್ಕಿಲ್ಲ” ಎಂದು ಹೇಳಿದರು.

ಈ ಬಗ್ಗೆ ಶುಕ್ರವಾರದ ಪ್ರತಿಕ್ರಿಯಿಸಿದ ಇಸ್ಕಾನ್, ”ಅವರ ಆರೋಪಗಳು ದುರುದ್ದೇಶಪೂರಿತ, ಸುಳ್ಳು ಮತ್ತು ಮಾನನಷ್ಟವಾಗಿವೆ” ಎಂದು ಹೇಳಿದೆ.

ಇಸ್ಕಾನ್ ಕೋಲ್ಕತ್ತಾದ ಉಪಾಧ್ಯಕ್ಷರಾದ ರಾಧರಮ್ ದಾಸ್ ಅವರು, ”ಸುಳ್ಳು ಹೇಳಿ ಅಪಪ್ರಚಾರ ಮಾಡಿದ್ದಾರೆ. ಅವರ ಟೀಕೆಗಳನ್ನು ಹಿಂಪಡೆಯಬೇಕು ಮತ್ತು ಬೇಷರತ್ತಾದ ಕ್ಷಮೆಯಾಚಿಸಬೇಕು, ಅದನ್ನು ಎಲ್ಲಾ ಪ್ರಮುಖ ಪತ್ರಿಕೆಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಕಟಿಸಬೇಕು” ಎಂದು ಒತ್ತಾಯಿಸಿದರು.

”ನಿಮ್ಮ ಸುಳ್ಳು ಹೇಳಿಕೆಗಳು ಮತ್ತು ಆರೋಪಗಳು ನನ್ನ ಕ್ಲೈಂಟ್‌ನ ಪ್ರತಿಷ್ಠೆಗೆ ತೀವ್ರ ಹಾನಿಯನ್ನುಂಟುಮಾಡಿದೆ. ನಿಮ್ಮ ಹೇಳಿಕೆಗಳು ಪ್ರಚೋದನಾತ್ಮಕವಾಗಿವೆ, ಸಂಸ್ಥೆಯ ಅನುಯಾಯಿಗಳನ್ನು ದಾರಿ ತಪ್ಪಿಸುವಂತಿವೆ” ಎಂದು ಎಂದು ಮಾನನಷ್ಟ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ‘ಇಸ್ಕಾನ್’ ಅತಿ ದೊಡ್ಡ ಮೋಸದ ಸಂಸ್ಥೆ, ಹಸುಗಳನ್ನು ಕಟುಕರಿಗೆ ಮಾರಿದೆ: ಬಿಜೆಪಿ ಸಂಸದೆ ಮನೇಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...