Homeಮುಖಪುಟಉಗ್ರವಾದಕ್ಕೆ ಸಂಬಂಧಿಸಿದ ಇಸ್ಲಾಂ-ಹಿಂದುತ್ವದ ಲೇಖನವನ್ನು ಅಧಿಕೃತ ವೆಬ್‌ಸೈಟ್‌ನಿಂದ ತಗೆದುಹಾಕಿದ ಪೊಲೀಸ್ ಇಲಾಖೆ

ಉಗ್ರವಾದಕ್ಕೆ ಸಂಬಂಧಿಸಿದ ಇಸ್ಲಾಂ-ಹಿಂದುತ್ವದ ಲೇಖನವನ್ನು ಅಧಿಕೃತ ವೆಬ್‌ಸೈಟ್‌ನಿಂದ ತಗೆದುಹಾಕಿದ ಪೊಲೀಸ್ ಇಲಾಖೆ

- Advertisement -
- Advertisement -

ದೇಶದಲ್ಲಿ ಬೆಳೆಯುತ್ತಿರುವ ಉಗ್ರವಾದಕ್ಕೆ ಮುಸ್ಲಿಂ ಮತ್ತು ಹಿಂದುತ್ವ ಸಂಘಟನೆಗಳ ಪಾತ್ರ ಮತ್ತು ಆ ಬಗ್ಗೆ ಕಳವಳ ವ್ಯಕ್ತಪಡಿಸುವ ಲೇಖನಗಳನ್ನು ಬುಧವಾರ ಅಧಿಕೃತ ವೆಬ್‌ಸೈಟ್‌ನಿಂದ ತೆಗೆದುಹಾಕಲಾದ ಗುಂಪಿಗೆ ಸೇರಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜನವರಿ 20 ರಿಂದ ಜನವರಿ 22 ರವರೆಗೆ ಗುಪ್ತಚರ ಬ್ಯೂರೋ ಆಯೋಜಿಸಿದ್ದ ವಾರ್ಷಿಕ ಡೈರೆಕ್ಟರ್ ಜನರಲ್‌ಗಳು ಮತ್ತು ಇನ್‌ಸ್ಪೆಕ್ಟರ್ ಜನರಲ್‌ಗಳ ಪೊಲೀಸ್ ಕಾನ್ಫರೆನ್ಸ್‌ನಲ್ಲಿ ಲೇಖನಗಳನ್ನು ಸಲ್ಲಿಸಲಾಗಿದೆ. ಈ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದರು.

ಇದನ್ನೂ ಓದಿ: ರಿಶಿ ಸುನುಕ್ ಬಡತನ, ಜನಾಂಗೀಯವಾದ ಹೆಚ್ಚಿಸುತ್ತಾರೆ ಮತ್ತು ಹಿಂದೂತ್ವ ಫ಼್ಯಾಸಿಸಂ ಅನ್ನು ಗಟ್ಟಿಗೊಳಿಸುತ್ತಾರೆ!

2022 ರ ಸಮ್ಮೇಳನಕ್ಕಾಗಿ ಸಲ್ಲಿಸಲಾಗಿದ್ದ ಲೇಖನವನ್ನು ವೆಬ್‌ಸೈಟ್‌ನಿಂದ ತೆಗೆದುಹಾಕಲಾಗಿತ್ತು ಎಂದು ವರದಿಯಾಗಿದೆ. ಆದರೂ ಇದೀಗ 2021 ರಿಂದಲೂ ಹಾಕಲಾಗಿದ್ದ ಲೇಖನಗಳು ಲಭ್ಯವಿವೆ.

2022 ರಲ್ಲಿ ಪೊಲೀಸ್ ಅಧಿಕಾರಿಗಳು ಸಲ್ಲಿಸಿದ ಕೆಲವು ಲೇಖನಗಳು ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿ ಮತ್ತು ಮುಂದಿನ ಪ್ರದೇಶಗಳಲ್ಲಿ ಚೀನಾದ ಆಕ್ರಮಣಕಾರಿ ನಡವಳಿಕೆಯನ್ನು ಉಲ್ಲೇಖಿಸಿವೆ. ಇದು ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿಯಾಗಬಹುದು ಎಂದು ಪಿಟಿಐ ವರದಿ ಮಾಡಿದೆ.

ಪೂರ್ವ ಲಡಾಖ್ ಪ್ರದೇಶದ 65 ಗಸ್ತು ಕೇಂದ್ರಗಳಲ್ಲಿ 26 ರಲ್ಲಿ ಭಾರತವು ಪ್ರವೇಶವನ್ನು ಕಳೆದುಕೊಂಡಿದೆ ಎಂದು ಲೇಹ್ ಹಿರಿಯ ಪೊಲೀಸ್ ಅಧೀಕ್ಷಕ ಪಿಡಿ ನಿತ್ಯಾ ತಮ್ಮ ಪತ್ರಿಕೆಯಲ್ಲಿ ತಿಳಿಸಿದ್ದಾರೆ. ಭಾರತ ಮತ್ತು ಚೀನಾ ನಡುವಿನ ಗಡಿ ಸಂಘರ್ಷಗಳ ಪ್ರಮುಖ ಫ್ಲ್ಯಾಶ್ ಪಾಯಿಂಟ್ – ಪೂರ್ವ ಲಡಾಖ್‌ನ ಕಾರಕೋರಂ ಪಾಸ್ ಮತ್ತು ಚುಮುರ್ ಪ್ರದೇಶದ ನಡುವೆ ಇರುವ 26 ಗಸ್ತು ಕೇಂದ್ರಗಳಿಗೆ ಭಾರತೀಯ ಭದ್ರತಾ ಪಡೆಗಳು ಇನ್ನು ಮುಂದೆ ಗಸ್ತು ತಿರುಗಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಇನ್ನೊಂದು ಲೇಖನವು ಹಿಂದುತ್ವ ಗುಂಪುಗಳಾದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳವನ್ನು ಮೂಲಭೂತ ಸಂಘಟನೆಗಳೆಂದು ಗುರುತಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಬಲಪಂಥೀಯ ವ್ಯಕ್ತಿಗಳು ಅಥವಾ ಗುಂಪುಗಳು ದೇಶದ ಬಗ್ಗೆ ಅಧಿಕೃತ ಪರಿಕಲ್ಪನೆಯನ್ನು ಹೊಂದಿವೆ. ಇದರಲ್ಲಿ ದೇಶ ಮತ್ತು ಜನರು ಜನಾಂಗೀಯವಾಗಿ ಏಕರೂಪವಾಗಿರಬೇಕು. ಎಲ್ಲರೂ ಏಕರೂಪದಲ್ಲಿ ಇರಬೇಕು ಎಂದು ಬಯಸುತ್ತಾರೆ” ಎಂದು ಪತ್ರಿಕೆಯೊಂದು ಹೇಳಿದೆ ಎಂದು ಪತ್ರಿಕೆ ವರದಿ ಮಾಡಿದೆ. “ಭಾರತವು ಬಹುಸಂಖ್ಯೆಯ ಸಮಾಜವಾಗಿದ್ದರೂ, ಬಹುಸಂಖ್ಯಾತತ್ವದ ಕಡೆಗೆ ಇಂಚಿಂಚಾಗಿ ಬಿಂಬಿಸಲಾಗಿದೆ. ಈ ರೀತಿಯಾಗಿ ಹೇಳುವ ಕೆಲವು ಬಲಪಂಥೀಯ ಸಂಘಟನೆಗಳನ್ನು ಹೆಸರಿಸಲಾಗಿದ್ದು- ಆನಂದ್ ಮಾರ್ಗ್, ವಿಎಚ್‌ಪಿ, ಬಜರಂಗದಳ, ಹಿಂದೂ ಸೇನೆ, ಇತ್ಯಾದಿ.”

ಪೊಲೀಸ್ ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಯೊಬ್ಬರು ಇಸ್ಲಾಮಿಕ್ ಮೂಲಭೂತವಾದ ಮತ್ತು ಹಿಂದೂ ಉಗ್ರವಾದವನ್ನು ಸವಾಲುಗಳೆಂದು ನೋಟಿಸ್ ಮಾಡಿದರು. ಇಸ್ಲಾಮಿಕ್ ಸಂಘಟನೆಗಳಾದ ಜಮಾತ್-ಎ-ಇಸ್ಲಾಮಿ ಮತ್ತು ಜಮಿಯತ್ ಅಹ್ಲೆ-ಹದಿತ್, ಹಾಗೂ ಹಿಂದೂ ಉಗ್ರವಾದವನ್ನು ಮೂಲಭೂತೀಕರಣಕ್ಕೆ ಕಾರಣವೆಂದು ಅಧಿಕೃತ ನೋಟಿಸ್ ಮಾಡಿದ್ದಾರೆ.

“ಹಿಂದೂ ರಾಷ್ಟ್ರೀಯತೆಯ ಬೆಳವಣಿಗೆಯೊಂದಿಗೆ ಬಾಬರಿ ಮಸೀದಿ ಧ್ವಂಸ, ಗೋಮಾಂಸ ಹತ್ಯೆ ಪ್ರಕರಣಗಳು ಮತ್ತು ‘ಘರ್ ವಾಪ್ಸಿ ಆಂದೋಲನ’ಗಳು ಯುವ ಮನಸ್ಸುಗಳನ್ನು ಸೇರಿಸಿಕೊಳ್ಳಲು ಮತ್ತು ತೀವ್ರಗಾಮಿಗೊಳಿಸಲು ಉಗ್ರಗಾಮಿ ಗುಂಪುಗಳಿಗೆ ಮೂಲವಾಗಿದೆ” ಎಂಬ ಲೇಖನವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...