Homeಮುಖಪುಟಉಗ್ರವಾದಕ್ಕೆ ಸಂಬಂಧಿಸಿದ ಇಸ್ಲಾಂ-ಹಿಂದುತ್ವದ ಲೇಖನವನ್ನು ಅಧಿಕೃತ ವೆಬ್‌ಸೈಟ್‌ನಿಂದ ತಗೆದುಹಾಕಿದ ಪೊಲೀಸ್ ಇಲಾಖೆ

ಉಗ್ರವಾದಕ್ಕೆ ಸಂಬಂಧಿಸಿದ ಇಸ್ಲಾಂ-ಹಿಂದುತ್ವದ ಲೇಖನವನ್ನು ಅಧಿಕೃತ ವೆಬ್‌ಸೈಟ್‌ನಿಂದ ತಗೆದುಹಾಕಿದ ಪೊಲೀಸ್ ಇಲಾಖೆ

- Advertisement -
- Advertisement -

ದೇಶದಲ್ಲಿ ಬೆಳೆಯುತ್ತಿರುವ ಉಗ್ರವಾದಕ್ಕೆ ಮುಸ್ಲಿಂ ಮತ್ತು ಹಿಂದುತ್ವ ಸಂಘಟನೆಗಳ ಪಾತ್ರ ಮತ್ತು ಆ ಬಗ್ಗೆ ಕಳವಳ ವ್ಯಕ್ತಪಡಿಸುವ ಲೇಖನಗಳನ್ನು ಬುಧವಾರ ಅಧಿಕೃತ ವೆಬ್‌ಸೈಟ್‌ನಿಂದ ತೆಗೆದುಹಾಕಲಾದ ಗುಂಪಿಗೆ ಸೇರಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜನವರಿ 20 ರಿಂದ ಜನವರಿ 22 ರವರೆಗೆ ಗುಪ್ತಚರ ಬ್ಯೂರೋ ಆಯೋಜಿಸಿದ್ದ ವಾರ್ಷಿಕ ಡೈರೆಕ್ಟರ್ ಜನರಲ್‌ಗಳು ಮತ್ತು ಇನ್‌ಸ್ಪೆಕ್ಟರ್ ಜನರಲ್‌ಗಳ ಪೊಲೀಸ್ ಕಾನ್ಫರೆನ್ಸ್‌ನಲ್ಲಿ ಲೇಖನಗಳನ್ನು ಸಲ್ಲಿಸಲಾಗಿದೆ. ಈ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದರು.

ಇದನ್ನೂ ಓದಿ: ರಿಶಿ ಸುನುಕ್ ಬಡತನ, ಜನಾಂಗೀಯವಾದ ಹೆಚ್ಚಿಸುತ್ತಾರೆ ಮತ್ತು ಹಿಂದೂತ್ವ ಫ಼್ಯಾಸಿಸಂ ಅನ್ನು ಗಟ್ಟಿಗೊಳಿಸುತ್ತಾರೆ!

2022 ರ ಸಮ್ಮೇಳನಕ್ಕಾಗಿ ಸಲ್ಲಿಸಲಾಗಿದ್ದ ಲೇಖನವನ್ನು ವೆಬ್‌ಸೈಟ್‌ನಿಂದ ತೆಗೆದುಹಾಕಲಾಗಿತ್ತು ಎಂದು ವರದಿಯಾಗಿದೆ. ಆದರೂ ಇದೀಗ 2021 ರಿಂದಲೂ ಹಾಕಲಾಗಿದ್ದ ಲೇಖನಗಳು ಲಭ್ಯವಿವೆ.

2022 ರಲ್ಲಿ ಪೊಲೀಸ್ ಅಧಿಕಾರಿಗಳು ಸಲ್ಲಿಸಿದ ಕೆಲವು ಲೇಖನಗಳು ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿ ಮತ್ತು ಮುಂದಿನ ಪ್ರದೇಶಗಳಲ್ಲಿ ಚೀನಾದ ಆಕ್ರಮಣಕಾರಿ ನಡವಳಿಕೆಯನ್ನು ಉಲ್ಲೇಖಿಸಿವೆ. ಇದು ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿಯಾಗಬಹುದು ಎಂದು ಪಿಟಿಐ ವರದಿ ಮಾಡಿದೆ.

ಪೂರ್ವ ಲಡಾಖ್ ಪ್ರದೇಶದ 65 ಗಸ್ತು ಕೇಂದ್ರಗಳಲ್ಲಿ 26 ರಲ್ಲಿ ಭಾರತವು ಪ್ರವೇಶವನ್ನು ಕಳೆದುಕೊಂಡಿದೆ ಎಂದು ಲೇಹ್ ಹಿರಿಯ ಪೊಲೀಸ್ ಅಧೀಕ್ಷಕ ಪಿಡಿ ನಿತ್ಯಾ ತಮ್ಮ ಪತ್ರಿಕೆಯಲ್ಲಿ ತಿಳಿಸಿದ್ದಾರೆ. ಭಾರತ ಮತ್ತು ಚೀನಾ ನಡುವಿನ ಗಡಿ ಸಂಘರ್ಷಗಳ ಪ್ರಮುಖ ಫ್ಲ್ಯಾಶ್ ಪಾಯಿಂಟ್ – ಪೂರ್ವ ಲಡಾಖ್‌ನ ಕಾರಕೋರಂ ಪಾಸ್ ಮತ್ತು ಚುಮುರ್ ಪ್ರದೇಶದ ನಡುವೆ ಇರುವ 26 ಗಸ್ತು ಕೇಂದ್ರಗಳಿಗೆ ಭಾರತೀಯ ಭದ್ರತಾ ಪಡೆಗಳು ಇನ್ನು ಮುಂದೆ ಗಸ್ತು ತಿರುಗಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಇನ್ನೊಂದು ಲೇಖನವು ಹಿಂದುತ್ವ ಗುಂಪುಗಳಾದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳವನ್ನು ಮೂಲಭೂತ ಸಂಘಟನೆಗಳೆಂದು ಗುರುತಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಬಲಪಂಥೀಯ ವ್ಯಕ್ತಿಗಳು ಅಥವಾ ಗುಂಪುಗಳು ದೇಶದ ಬಗ್ಗೆ ಅಧಿಕೃತ ಪರಿಕಲ್ಪನೆಯನ್ನು ಹೊಂದಿವೆ. ಇದರಲ್ಲಿ ದೇಶ ಮತ್ತು ಜನರು ಜನಾಂಗೀಯವಾಗಿ ಏಕರೂಪವಾಗಿರಬೇಕು. ಎಲ್ಲರೂ ಏಕರೂಪದಲ್ಲಿ ಇರಬೇಕು ಎಂದು ಬಯಸುತ್ತಾರೆ” ಎಂದು ಪತ್ರಿಕೆಯೊಂದು ಹೇಳಿದೆ ಎಂದು ಪತ್ರಿಕೆ ವರದಿ ಮಾಡಿದೆ. “ಭಾರತವು ಬಹುಸಂಖ್ಯೆಯ ಸಮಾಜವಾಗಿದ್ದರೂ, ಬಹುಸಂಖ್ಯಾತತ್ವದ ಕಡೆಗೆ ಇಂಚಿಂಚಾಗಿ ಬಿಂಬಿಸಲಾಗಿದೆ. ಈ ರೀತಿಯಾಗಿ ಹೇಳುವ ಕೆಲವು ಬಲಪಂಥೀಯ ಸಂಘಟನೆಗಳನ್ನು ಹೆಸರಿಸಲಾಗಿದ್ದು- ಆನಂದ್ ಮಾರ್ಗ್, ವಿಎಚ್‌ಪಿ, ಬಜರಂಗದಳ, ಹಿಂದೂ ಸೇನೆ, ಇತ್ಯಾದಿ.”

ಪೊಲೀಸ್ ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಯೊಬ್ಬರು ಇಸ್ಲಾಮಿಕ್ ಮೂಲಭೂತವಾದ ಮತ್ತು ಹಿಂದೂ ಉಗ್ರವಾದವನ್ನು ಸವಾಲುಗಳೆಂದು ನೋಟಿಸ್ ಮಾಡಿದರು. ಇಸ್ಲಾಮಿಕ್ ಸಂಘಟನೆಗಳಾದ ಜಮಾತ್-ಎ-ಇಸ್ಲಾಮಿ ಮತ್ತು ಜಮಿಯತ್ ಅಹ್ಲೆ-ಹದಿತ್, ಹಾಗೂ ಹಿಂದೂ ಉಗ್ರವಾದವನ್ನು ಮೂಲಭೂತೀಕರಣಕ್ಕೆ ಕಾರಣವೆಂದು ಅಧಿಕೃತ ನೋಟಿಸ್ ಮಾಡಿದ್ದಾರೆ.

“ಹಿಂದೂ ರಾಷ್ಟ್ರೀಯತೆಯ ಬೆಳವಣಿಗೆಯೊಂದಿಗೆ ಬಾಬರಿ ಮಸೀದಿ ಧ್ವಂಸ, ಗೋಮಾಂಸ ಹತ್ಯೆ ಪ್ರಕರಣಗಳು ಮತ್ತು ‘ಘರ್ ವಾಪ್ಸಿ ಆಂದೋಲನ’ಗಳು ಯುವ ಮನಸ್ಸುಗಳನ್ನು ಸೇರಿಸಿಕೊಳ್ಳಲು ಮತ್ತು ತೀವ್ರಗಾಮಿಗೊಳಿಸಲು ಉಗ್ರಗಾಮಿ ಗುಂಪುಗಳಿಗೆ ಮೂಲವಾಗಿದೆ” ಎಂಬ ಲೇಖನವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...