Homeಮುಖಪುಟಕೆಂಪು ಸಮುದ್ರದಲ್ಲಿ ಅಪಹರಣಕ್ಕೊಳಗಾದ ಹಡಗು ಇಸ್ರೇಲ್‌ಗೆ ಸೇರಿದ್ದು: ವರದಿ

ಕೆಂಪು ಸಮುದ್ರದಲ್ಲಿ ಅಪಹರಣಕ್ಕೊಳಗಾದ ಹಡಗು ಇಸ್ರೇಲ್‌ಗೆ ಸೇರಿದ್ದು: ವರದಿ

- Advertisement -
- Advertisement -

ಟರ್ಕಿಯಿಂದ ಕೆಂಪು ಸಮುದ್ರದ ಮೂಲಕ ಭಾರತಕ್ಕೆ ತೆರಳುತ್ತಿದ್ದ ಹಡಗು ಅಪಹರಣಕ್ಕೆ ಒಳಗಾಗಿದೆ. ಆದರೆ ಹಡಗು ನಮ್ಮದಲ್ಲ ಎಂದು ಇಸ್ರೇಲ್‌ ಹೇಳುತ್ತಿದ್ದು, ಈ ಹಡಗು ಇಸ್ರೇಲ್‌ನ ಶ್ರೀಮಂತ ವ್ಯಕ್ತಿಗೆ ಸೇರಿದ್ದಾಗಿದೆ ಎಂದು ದಾಖಲೆಗಳು ಬಹಿರಂಗಪಡಿಸಿದೆ.

ಇಸ್ರೇಲ್‌ ಅಧಿಕಾರಿಗಳು ಹಡಗನ್ನು ಬ್ರಿಟಿಷರ ಒಡೆತನದ್ದು ಅಥವಾ ಜಪಾನಿಯವರದ್ದು ಇರಬಹುದು ಎಂದು ಹೇಳಿದೆ. ಆದರೆ ಇಸ್ರೇಲ್‌ನ ಶ್ರೀಮಂತ ವ್ಯಕ್ತಿ ಅಬ್ರಹಾಂ ರಾಮಿ ಉಂಗಾರ್‌ಗೆ ಸೇರಿದ್ದಾಗಿದೆ ಎಂದು ದಾಖಲೆಗಳು ಉಲ್ಲೇಖಿಸಿರುವ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಟರ್ಕಿಯಿಂದ ಕೆಂಪು ಸಮುದ್ರದ ಮೂಲಕ ಭಾರತಕ್ಕೆ ತೆರಳುತ್ತಿದ್ದ ಇಸ್ರೇಲ್‌ನ ಸರಕು ಹಡಗನ್ನು ಅಪಹರಿಸಲು  ಯೆಮೆನ್‌ನ ಹೌತಿ ಬಂಡುಕೋರರು ಕಾರಣ ಎಂದು ಇಸ್ರೇಲ್ ಆರೋಪವನ್ನು ಮಾಡಿದ್ದು, ಈ ಬಗ್ಗೆ ಹೌತಿ ಬಂಡುಕೋರರು ಯಾವುದೇ ಪ್ರತಿಕ್ರಿಯನ್ನು ನೀಡಿಲ್ಲ.

ನಿನ್ನೆ ಈ ಘಟನೆ ನಡೆದಿದ್ದು, ಇಸ್ರೇಲ್-ಹಮಾಸ್ ಯುದ್ಧದ ಮಧ್ಯೆ ಪ್ರಾದೇಶಿಕ ಉದ್ವಿಗ್ನತೆಯ ಆತಂಕವನ್ನು ಹುಟ್ಟುಹಾಕಿದೆ. ಈ ಬಗ್ಗೆ ಯೆಮೆನ್‌ನಲ್ಲಿನ ಇರಾನ್ ಬೆಂಬಲಿತ ಬಂಡುಕೋರ ಸಂಘಟನೆ ಹೌತಿಗಳಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಆದರೆ ಕೆಂಪು ಸಮುದ್ರದಲ್ಲಿ ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳನ್ನು ಗುರಿಯಾಗಿಸುವುದಾಗಿ ಇದಕ್ಕೂ ಮೊದಲು ಬೆದರಿಕೆ ಹಾಕಲಾಗಿತ್ತು.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಘಟನೆಯನ್ನು ಇರಾನಿನ ಭಯೋತ್ಪಾದಕ ಕೃತ್ಯ ಎಂದು ಕರೆದಿದ್ದು, ಬಲ್ಗೇರಿಯನ್ನರು, ಫಿಲಿಪಿನೋಗಳು, ಮೆಕ್ಸಿಕನ್ನರು ಮತ್ತು ಉಕ್ರೇನಿಯನ್ನರು ಸೇರಿದಂತೆ ವಿವಿಧ ರಾಷ್ಟ್ರದ 25 ಸಿಬ್ಬಂದಿಗಳಿದ್ದರು. ಆದರೆ ಹಡಗಿನಲ್ಲಿ ಇಸ್ರೇಲ್‌ ಪ್ರಜೆಗಳು ಇರಲಿಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್‌ ಮಿಲಿಟರಿ ಸರಕು ಹಡಗಿನ ಅಪಹರಣವನ್ನು ಅತ್ಯಂತ ಗಂಭೀರ ಘಟನೆ ಎಂದು ಕರೆದಿದೆ. ಹೌತಿ ಬಂಡುಕೋರರು ಸಮುದ್ರದ ಸಿಪ್ಪಿಂಗ್‌ ಲೈನ್‌ಗೆ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದೆ.

ಅಪಹರಿಸಲಾದ ಹಡಗು ಟರ್ಕಿಯ ಕೊರ್ಫೆಜ್‌ನಲ್ಲಿತ್ತು ಮತ್ತು ಇಸ್ರೇಲ್ ವಶಪಡಿಸಿಕೊಂಡ ಸಮಯದಲ್ಲಿ  ಪಿಪಾವಾವ್‌ನಿಂದ ಭಾರತಕ್ಕೆ ತೆರಳುತ್ತಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಹಡಗು ಇಸ್ರೇಲ್ ಮಾಲಿಕತ್ವವನ್ನು ಹೊಂದಿರಬಹುದು ಎಂದು ವರದಿಗಳು ಸೂಚಿಸಿದೆ.

ಹಡಗಿನ ಅಪಹರಣವು ಎರಿಟ್ರಿಯಾದ ಕರಾವಳಿಯ ಸಮೀಪವಿರುವ ಯೆಮೆನ್‌ನ ಬಂದರು ನಗರವಾದ ಹೊಡೆಡಾದ ಕರಾವಳಿಯಿಂದ ಸುಮಾರು 150 ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ. ಇಸ್ರೇಲ್ ಗಾಝಾದ ಮೇಲೆ ನಿರಂತರ ಬಾಂಬ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಹಡಗುಗಳನ್ನು ಗುರಿಯಾಗಿಸುವುದಾಗಿ ಹೌತಿಗಳು ಪದೇ ಪದೇ ಬೆದರಿಕೆ ಹಾಕಿದ್ದರು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಇದನ್ನು ಓದಿ: ಉತ್ತರಪ್ರದೇಶ: ಗೋಹತ್ಯೆ ಪ್ರಕರಣದ ಆರೋಪಿಯ ಎನ್‌ಕೌಂಟರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...