Homeಮುಖಪುಟಕೆಂಪು ಸಮುದ್ರದಲ್ಲಿ ಅಪಹರಣಕ್ಕೊಳಗಾದ ಹಡಗು ಇಸ್ರೇಲ್‌ಗೆ ಸೇರಿದ್ದು: ವರದಿ

ಕೆಂಪು ಸಮುದ್ರದಲ್ಲಿ ಅಪಹರಣಕ್ಕೊಳಗಾದ ಹಡಗು ಇಸ್ರೇಲ್‌ಗೆ ಸೇರಿದ್ದು: ವರದಿ

- Advertisement -
- Advertisement -

ಟರ್ಕಿಯಿಂದ ಕೆಂಪು ಸಮುದ್ರದ ಮೂಲಕ ಭಾರತಕ್ಕೆ ತೆರಳುತ್ತಿದ್ದ ಹಡಗು ಅಪಹರಣಕ್ಕೆ ಒಳಗಾಗಿದೆ. ಆದರೆ ಹಡಗು ನಮ್ಮದಲ್ಲ ಎಂದು ಇಸ್ರೇಲ್‌ ಹೇಳುತ್ತಿದ್ದು, ಈ ಹಡಗು ಇಸ್ರೇಲ್‌ನ ಶ್ರೀಮಂತ ವ್ಯಕ್ತಿಗೆ ಸೇರಿದ್ದಾಗಿದೆ ಎಂದು ದಾಖಲೆಗಳು ಬಹಿರಂಗಪಡಿಸಿದೆ.

ಇಸ್ರೇಲ್‌ ಅಧಿಕಾರಿಗಳು ಹಡಗನ್ನು ಬ್ರಿಟಿಷರ ಒಡೆತನದ್ದು ಅಥವಾ ಜಪಾನಿಯವರದ್ದು ಇರಬಹುದು ಎಂದು ಹೇಳಿದೆ. ಆದರೆ ಇಸ್ರೇಲ್‌ನ ಶ್ರೀಮಂತ ವ್ಯಕ್ತಿ ಅಬ್ರಹಾಂ ರಾಮಿ ಉಂಗಾರ್‌ಗೆ ಸೇರಿದ್ದಾಗಿದೆ ಎಂದು ದಾಖಲೆಗಳು ಉಲ್ಲೇಖಿಸಿರುವ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಟರ್ಕಿಯಿಂದ ಕೆಂಪು ಸಮುದ್ರದ ಮೂಲಕ ಭಾರತಕ್ಕೆ ತೆರಳುತ್ತಿದ್ದ ಇಸ್ರೇಲ್‌ನ ಸರಕು ಹಡಗನ್ನು ಅಪಹರಿಸಲು  ಯೆಮೆನ್‌ನ ಹೌತಿ ಬಂಡುಕೋರರು ಕಾರಣ ಎಂದು ಇಸ್ರೇಲ್ ಆರೋಪವನ್ನು ಮಾಡಿದ್ದು, ಈ ಬಗ್ಗೆ ಹೌತಿ ಬಂಡುಕೋರರು ಯಾವುದೇ ಪ್ರತಿಕ್ರಿಯನ್ನು ನೀಡಿಲ್ಲ.

ನಿನ್ನೆ ಈ ಘಟನೆ ನಡೆದಿದ್ದು, ಇಸ್ರೇಲ್-ಹಮಾಸ್ ಯುದ್ಧದ ಮಧ್ಯೆ ಪ್ರಾದೇಶಿಕ ಉದ್ವಿಗ್ನತೆಯ ಆತಂಕವನ್ನು ಹುಟ್ಟುಹಾಕಿದೆ. ಈ ಬಗ್ಗೆ ಯೆಮೆನ್‌ನಲ್ಲಿನ ಇರಾನ್ ಬೆಂಬಲಿತ ಬಂಡುಕೋರ ಸಂಘಟನೆ ಹೌತಿಗಳಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಆದರೆ ಕೆಂಪು ಸಮುದ್ರದಲ್ಲಿ ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳನ್ನು ಗುರಿಯಾಗಿಸುವುದಾಗಿ ಇದಕ್ಕೂ ಮೊದಲು ಬೆದರಿಕೆ ಹಾಕಲಾಗಿತ್ತು.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಘಟನೆಯನ್ನು ಇರಾನಿನ ಭಯೋತ್ಪಾದಕ ಕೃತ್ಯ ಎಂದು ಕರೆದಿದ್ದು, ಬಲ್ಗೇರಿಯನ್ನರು, ಫಿಲಿಪಿನೋಗಳು, ಮೆಕ್ಸಿಕನ್ನರು ಮತ್ತು ಉಕ್ರೇನಿಯನ್ನರು ಸೇರಿದಂತೆ ವಿವಿಧ ರಾಷ್ಟ್ರದ 25 ಸಿಬ್ಬಂದಿಗಳಿದ್ದರು. ಆದರೆ ಹಡಗಿನಲ್ಲಿ ಇಸ್ರೇಲ್‌ ಪ್ರಜೆಗಳು ಇರಲಿಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್‌ ಮಿಲಿಟರಿ ಸರಕು ಹಡಗಿನ ಅಪಹರಣವನ್ನು ಅತ್ಯಂತ ಗಂಭೀರ ಘಟನೆ ಎಂದು ಕರೆದಿದೆ. ಹೌತಿ ಬಂಡುಕೋರರು ಸಮುದ್ರದ ಸಿಪ್ಪಿಂಗ್‌ ಲೈನ್‌ಗೆ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದೆ.

ಅಪಹರಿಸಲಾದ ಹಡಗು ಟರ್ಕಿಯ ಕೊರ್ಫೆಜ್‌ನಲ್ಲಿತ್ತು ಮತ್ತು ಇಸ್ರೇಲ್ ವಶಪಡಿಸಿಕೊಂಡ ಸಮಯದಲ್ಲಿ  ಪಿಪಾವಾವ್‌ನಿಂದ ಭಾರತಕ್ಕೆ ತೆರಳುತ್ತಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಹಡಗು ಇಸ್ರೇಲ್ ಮಾಲಿಕತ್ವವನ್ನು ಹೊಂದಿರಬಹುದು ಎಂದು ವರದಿಗಳು ಸೂಚಿಸಿದೆ.

ಹಡಗಿನ ಅಪಹರಣವು ಎರಿಟ್ರಿಯಾದ ಕರಾವಳಿಯ ಸಮೀಪವಿರುವ ಯೆಮೆನ್‌ನ ಬಂದರು ನಗರವಾದ ಹೊಡೆಡಾದ ಕರಾವಳಿಯಿಂದ ಸುಮಾರು 150 ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ. ಇಸ್ರೇಲ್ ಗಾಝಾದ ಮೇಲೆ ನಿರಂತರ ಬಾಂಬ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಹಡಗುಗಳನ್ನು ಗುರಿಯಾಗಿಸುವುದಾಗಿ ಹೌತಿಗಳು ಪದೇ ಪದೇ ಬೆದರಿಕೆ ಹಾಕಿದ್ದರು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಇದನ್ನು ಓದಿ: ಉತ್ತರಪ್ರದೇಶ: ಗೋಹತ್ಯೆ ಪ್ರಕರಣದ ಆರೋಪಿಯ ಎನ್‌ಕೌಂಟರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...