Homeಮುಖಪುಟಕೆಂಪು ಸಮುದ್ರದಲ್ಲಿ ಅಪಹರಣಕ್ಕೊಳಗಾದ ಹಡಗು ಇಸ್ರೇಲ್‌ಗೆ ಸೇರಿದ್ದು: ವರದಿ

ಕೆಂಪು ಸಮುದ್ರದಲ್ಲಿ ಅಪಹರಣಕ್ಕೊಳಗಾದ ಹಡಗು ಇಸ್ರೇಲ್‌ಗೆ ಸೇರಿದ್ದು: ವರದಿ

- Advertisement -
- Advertisement -

ಟರ್ಕಿಯಿಂದ ಕೆಂಪು ಸಮುದ್ರದ ಮೂಲಕ ಭಾರತಕ್ಕೆ ತೆರಳುತ್ತಿದ್ದ ಹಡಗು ಅಪಹರಣಕ್ಕೆ ಒಳಗಾಗಿದೆ. ಆದರೆ ಹಡಗು ನಮ್ಮದಲ್ಲ ಎಂದು ಇಸ್ರೇಲ್‌ ಹೇಳುತ್ತಿದ್ದು, ಈ ಹಡಗು ಇಸ್ರೇಲ್‌ನ ಶ್ರೀಮಂತ ವ್ಯಕ್ತಿಗೆ ಸೇರಿದ್ದಾಗಿದೆ ಎಂದು ದಾಖಲೆಗಳು ಬಹಿರಂಗಪಡಿಸಿದೆ.

ಇಸ್ರೇಲ್‌ ಅಧಿಕಾರಿಗಳು ಹಡಗನ್ನು ಬ್ರಿಟಿಷರ ಒಡೆತನದ್ದು ಅಥವಾ ಜಪಾನಿಯವರದ್ದು ಇರಬಹುದು ಎಂದು ಹೇಳಿದೆ. ಆದರೆ ಇಸ್ರೇಲ್‌ನ ಶ್ರೀಮಂತ ವ್ಯಕ್ತಿ ಅಬ್ರಹಾಂ ರಾಮಿ ಉಂಗಾರ್‌ಗೆ ಸೇರಿದ್ದಾಗಿದೆ ಎಂದು ದಾಖಲೆಗಳು ಉಲ್ಲೇಖಿಸಿರುವ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಟರ್ಕಿಯಿಂದ ಕೆಂಪು ಸಮುದ್ರದ ಮೂಲಕ ಭಾರತಕ್ಕೆ ತೆರಳುತ್ತಿದ್ದ ಇಸ್ರೇಲ್‌ನ ಸರಕು ಹಡಗನ್ನು ಅಪಹರಿಸಲು  ಯೆಮೆನ್‌ನ ಹೌತಿ ಬಂಡುಕೋರರು ಕಾರಣ ಎಂದು ಇಸ್ರೇಲ್ ಆರೋಪವನ್ನು ಮಾಡಿದ್ದು, ಈ ಬಗ್ಗೆ ಹೌತಿ ಬಂಡುಕೋರರು ಯಾವುದೇ ಪ್ರತಿಕ್ರಿಯನ್ನು ನೀಡಿಲ್ಲ.

ನಿನ್ನೆ ಈ ಘಟನೆ ನಡೆದಿದ್ದು, ಇಸ್ರೇಲ್-ಹಮಾಸ್ ಯುದ್ಧದ ಮಧ್ಯೆ ಪ್ರಾದೇಶಿಕ ಉದ್ವಿಗ್ನತೆಯ ಆತಂಕವನ್ನು ಹುಟ್ಟುಹಾಕಿದೆ. ಈ ಬಗ್ಗೆ ಯೆಮೆನ್‌ನಲ್ಲಿನ ಇರಾನ್ ಬೆಂಬಲಿತ ಬಂಡುಕೋರ ಸಂಘಟನೆ ಹೌತಿಗಳಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಆದರೆ ಕೆಂಪು ಸಮುದ್ರದಲ್ಲಿ ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳನ್ನು ಗುರಿಯಾಗಿಸುವುದಾಗಿ ಇದಕ್ಕೂ ಮೊದಲು ಬೆದರಿಕೆ ಹಾಕಲಾಗಿತ್ತು.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಘಟನೆಯನ್ನು ಇರಾನಿನ ಭಯೋತ್ಪಾದಕ ಕೃತ್ಯ ಎಂದು ಕರೆದಿದ್ದು, ಬಲ್ಗೇರಿಯನ್ನರು, ಫಿಲಿಪಿನೋಗಳು, ಮೆಕ್ಸಿಕನ್ನರು ಮತ್ತು ಉಕ್ರೇನಿಯನ್ನರು ಸೇರಿದಂತೆ ವಿವಿಧ ರಾಷ್ಟ್ರದ 25 ಸಿಬ್ಬಂದಿಗಳಿದ್ದರು. ಆದರೆ ಹಡಗಿನಲ್ಲಿ ಇಸ್ರೇಲ್‌ ಪ್ರಜೆಗಳು ಇರಲಿಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್‌ ಮಿಲಿಟರಿ ಸರಕು ಹಡಗಿನ ಅಪಹರಣವನ್ನು ಅತ್ಯಂತ ಗಂಭೀರ ಘಟನೆ ಎಂದು ಕರೆದಿದೆ. ಹೌತಿ ಬಂಡುಕೋರರು ಸಮುದ್ರದ ಸಿಪ್ಪಿಂಗ್‌ ಲೈನ್‌ಗೆ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದೆ.

ಅಪಹರಿಸಲಾದ ಹಡಗು ಟರ್ಕಿಯ ಕೊರ್ಫೆಜ್‌ನಲ್ಲಿತ್ತು ಮತ್ತು ಇಸ್ರೇಲ್ ವಶಪಡಿಸಿಕೊಂಡ ಸಮಯದಲ್ಲಿ  ಪಿಪಾವಾವ್‌ನಿಂದ ಭಾರತಕ್ಕೆ ತೆರಳುತ್ತಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಹಡಗು ಇಸ್ರೇಲ್ ಮಾಲಿಕತ್ವವನ್ನು ಹೊಂದಿರಬಹುದು ಎಂದು ವರದಿಗಳು ಸೂಚಿಸಿದೆ.

ಹಡಗಿನ ಅಪಹರಣವು ಎರಿಟ್ರಿಯಾದ ಕರಾವಳಿಯ ಸಮೀಪವಿರುವ ಯೆಮೆನ್‌ನ ಬಂದರು ನಗರವಾದ ಹೊಡೆಡಾದ ಕರಾವಳಿಯಿಂದ ಸುಮಾರು 150 ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ. ಇಸ್ರೇಲ್ ಗಾಝಾದ ಮೇಲೆ ನಿರಂತರ ಬಾಂಬ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಹಡಗುಗಳನ್ನು ಗುರಿಯಾಗಿಸುವುದಾಗಿ ಹೌತಿಗಳು ಪದೇ ಪದೇ ಬೆದರಿಕೆ ಹಾಕಿದ್ದರು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಇದನ್ನು ಓದಿ: ಉತ್ತರಪ್ರದೇಶ: ಗೋಹತ್ಯೆ ಪ್ರಕರಣದ ಆರೋಪಿಯ ಎನ್‌ಕೌಂಟರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...