Homeಅಂತರಾಷ್ಟ್ರೀಯಗಾಜಾಕ್ಕೆ ವಿಶ್ವಸಂಸ್ಥೆಯ 100 ಲಾರಿಗಳ ಆಹಾರ ಸಾಮಗ್ರಿ ಪ್ರವೇಶಕ್ಕೆ ಅನುವು ಮಾಡಿದ ಇಸ್ರೇಲ್

ಗಾಜಾಕ್ಕೆ ವಿಶ್ವಸಂಸ್ಥೆಯ 100 ಲಾರಿಗಳ ಆಹಾರ ಸಾಮಗ್ರಿ ಪ್ರವೇಶಕ್ಕೆ ಅನುವು ಮಾಡಿದ ಇಸ್ರೇಲ್

- Advertisement -
- Advertisement -

ವಿಶ್ವಸಂಸ್ಥೆಯ ತಂಡಗಳು ಗಾಜಾ ನಿರಾಶ್ರಿತರ ದಿನನಿತ್ಯದ ಅಗತ್ಯಕ್ಕಾಗಿ ಸಂಗ್ರಹಿಸಿದ್ದ 90ಕ್ಕೂ ಹೆಚ್ಚು ಲಾರಿ ಲೋಡ್‌ಗಳ ಮಾನವೀಯ ನೆರವು ಪ್ರವೇಶಕ್ಕೆ ಇಸ್ರೇಲ್ 11 ವಾರಗಳ ದೀರ್ಘಾವಧಿಯ ದಿಗ್ಬಂಧನದ ನಂತರ ಅನುವು ಮಾಡಿದೆ.

ಹಿಟ್ಟು, ಶಿಶು ಆಹಾರ ಮತ್ತು ವೈದ್ಯಕೀಯ ಉಪಕರಣಗಳನ್ನು ಒಳಗೊಂಡ ಸಹಾಯವನ್ನು ಬುಧವಾರ ರಾತ್ರಿ ಕೆರೆಮ್ ಶಾಲೋಮ್ ಕ್ರಾಸಿಂಗ್‌ನಿಂದ ತೆಗೆದುಕೊಂಡು ವಿತರಣೆಗಾಗಿ ಗೋದಾಮುಗಳಿಗೆ ಸಾಗಿಸಲಾಯಿತು. ಗುರುವಾರ ಹಲವಾರು ಬೇಕರಿಗಳು ಹಿಟ್ಟಿನಿಂದ ಬ್ರೆಡ್ ಉತ್ಪಾದಿಸಲು ಪ್ರಾರಂಭಿಸಿದವು. ಇಸ್ರೇಲ್ ಮಿಲಿಟರಿ ಅನುಮೋದಿಸಿದ ಏಕ ಪ್ರವೇಶ ಮಾರ್ಗದಲ್ಲಿ ಭದ್ರತೆಯ ಕೊರತೆಯಿಂದಾಗಿ ಮೂರು ದಿನ ವಿಳಂಬವಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

ಇಸ್ರೇಲಿ ಅಧಿಕಾರಿಗಳು ಬುಧವಾರ ಕೆರೆಮ್ ಶಾಲೋಮ್ ಮೂಲಕ ಹೆಚ್ಚುವರಿಯಾಗಿ 100 ಲಾರಿ ಲೋಡ್‌ಗಳ ಪ್ರವೇಶಕ್ಕೆ ಅನುಮತಿಸಿದ್ದಾರೆ ಎಂದು ಹೇಳಿದ್ದಾರೆ. “ಗಾಜಾದಲ್ಲಿನ ಅಪಾರ ಅಗತ್ಯಗಳನ್ನು ಪೂರೈಸಲು ಅದು ಎಲ್ಲಿಯೂ ಸಾಕಾಗುವುದಿಲ್ಲ. ಯುದ್ಧದ ಮೊದಲು ಪ್ರತಿದಿನ ಸರಾಸರಿ 500 ಲಾರಿಗಳು ಪ್ರದೇಶವನ್ನು ಪ್ರವೇಶಿಸುತ್ತಿದ್ದವು” ಎಂದು ವಿಶ್ವಸಂಸ್ಥೆ ಹೇಳಿದೆ.

ಅಗತ್ಯ ಆಹಾರಗಳ ಗಮನಾರ್ಹ ಕೊರತೆ ಮತ್ತು ಗಗನಕ್ಕೇರುತ್ತಿರುವ ಬೆಲೆಗಳ ನಡುವೆ, 2.1 ಮಿಲಿಯನ್ ಜನಸಂಖ್ಯೆಯಲ್ಲಿ ತೀವ್ರ ಮಟ್ಟದ ಹಸಿವಿನ ಬಗ್ಗೆ ಮಾನವೀಯ ಸಂಘಟನೆಗಳು ಎಚ್ಚರಿಸಿವೆ ಎಂದು ಆಕ್ರಮಿತ ಪಶ್ಚಿಮ ದಂಡೆಯಲ್ಲಿ ನೆಲೆಸಿರುವ ಪ್ಯಾಲೆಸ್ಟೀನಿಯನ್ ಪ್ರಾಧಿಕಾರದ ಆರೋಗ್ಯ ಸಚಿವ ಮಜೀದ್ ಅಬು ರಂಜಾನ್ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ 29 ಮಕ್ಕಳು ಮತ್ತು ವೃದ್ಧರು “ಹಸಿವಿಗೆ ಸಂಬಂಧಿಸಿದ” ಕಾರಣಗಳಿಂದ ಸಾವನ್ನಪ್ಪಿದ್ದಾರೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ತಿಳಿಸಿದೆ.

ಮುಂಬರುವ ತಿಂಗಳುಗಳಲ್ಲಿ ಅರ್ಧ ಮಿಲಿಯನ್ ಜನರು ಹಸಿವನ್ನು ಎದುರಿಸಲಿದ್ದಾರೆ ಎಂದು ವಿಶ್ವಸಂಸ್ಥೆ ಬೆಂಬಲಿತ ಇಂಟಿಗ್ರೇಟೆಡ್ ಫುಡ್ ಸೆಕ್ಯುರಿಟಿ ಫೇಸ್ ಕ್ಲಾಸಿಫಿಕೇಶನ್ (ಐಪಿಸಿ) ನಡೆಸಿದ ಮೌಲ್ಯಮಾಪನ ತಿಳಿಸಿದೆ.

ವಿಶ್ವಸಂಸ್ಥೆ ಮತ್ತು ಅದರ ಪಾಲುದಾರರು 140,000 ಟನ್‌ಗಳಿಗಿಂತ ಹೆಚ್ಚು ಆಹಾರವನ್ನು ಹೊಂದಿದ್ದಾರೆ. ಸುಮಾರು 6,000 ಲಾರಿ ಲೋಡ್‌ಗಳು ಎರಡು ತಿಂಗಳವರೆಗೆ ಗಾಜಾದ ಇಡೀ ಜನಸಂಖ್ಯೆಯನ್ನು ಪೋಷಿಸಲು ಸಾಕಾಗುತ್ತದೆ. ವಿಶ್ವಸಂಸ್ಥೆಯ ಕಾರ್ಯಕರ್ತರು ಇದನ್ನು ಗಾಜಾಕ್ಕೆ ತರಲು ಸಿದ್ಧರಾಗಿದ್ದಾರೆ ಎಂದು ಯುಎನ್ ವಿಶ್ವ ಆಹಾರ ಕಾರ್ಯಕ್ರಮದ (ಡಬ್ಲ್ಯೂಎಫ್‌ಪಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ 2ರಂದು ಇಸ್ರೇಲ್ ದೇಶವು ಗಾಜಾಗೆ ಎಲ್ಲಾ ನೆರವು ಮತ್ತು ವಾಣಿಜ್ಯ ಸರಬರಾಜುಗಳನ್ನು ನಿಲ್ಲಿಸಿತು ಮತ್ತು ಎರಡು ವಾರಗಳ ನಂತರ ತನ್ನ ಮಿಲಿಟರಿ ದಾಳಿಯನ್ನು ಪುನರಾರಂಭಿಸಿತು, ಹಮಾಸ್‌ನೊಂದಿಗಿನ ಎರಡು ತಿಂಗಳ ಕದನ ವಿರಾಮವನ್ನು ಕೊನೆಗೊಳಿಸಿತ್ತು. ಗಾಜಾದಲ್ಲಿ ಇನ್ನೂ ಬಂಧಿಸಲ್ಪಟ್ಟಿರುವ 58 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್ ಸಶಸ್ತ್ರ ಗುಂಪಿನ ಮೇಲೆ ಒತ್ತಡ ಹೇರಲು ಈ ಕ್ರಮಗಳು ಉದ್ದೇಶಿಸಲ್ಪಟ್ಟಿವೆ ಎಂದು ಅದು ಹೇಳಿದೆ. ಈ ಒತ್ತೆಯಾಳುಗಳಲ್ಲಿ ಇನ್ನೂ 23 ಮಂದಿ ಜೀವಂತವಾಗಿದ್ದಾರೆ ಎಂದು ನಂಬಲಾಗಿದೆ. ಇಸ್ರೇಲ್ ಯಾವುದೇ ಸಹಾಯದ ಕೊರತೆ ಇಲ್ಲ ಎಂದು ಹೇಳಿದೆ ಮತ್ತು ಹಮಾಸ್ ತನ್ನ ಹೋರಾಟಗಾರರಿಗೆ ನೀಡಲು ಅಥವಾ ಹಣ ಸಂಗ್ರಹಿಸುವುದಕ್ಕಾಗಿ ಈ ನೆರವು ಸರಬರಾಜುಗಳನ್ನು ಮಾರಾಟ ಮಾಡಲು ಕದಿಯುತ್ತಿದೆ ಎಂದು ಆರೋಪಿಸಿದೆ. ಈ ಆರೋಪವನ್ನು ಹಮಾಸ್ ನಿರಾಕರಿಸಿದೆ. ಸಹಾಯವನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂಬ ಇಸ್ರೇಲ್ ಆರೋಪವನ್ನು ವಿಶ್ವಸಂಸ್ಥೆಯೂ ನಿರಾಕರಿಸಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ ಹೇಳಿಕೆಯಲ್ಲಿ ಈ ಹೇಳಿಕೆಯನ್ನು ಪುನರಾವರ್ತಿಸಿದರು. ”ಫ್ರಾನ್ಸ್, ಕೆನಡಾ ಮತ್ತು ಯುಕೆ ನಾಯಕರು ಇಸ್ರೇಲ್ ಪ್ಯಾಲೆಸ್ಟೀನಿಯನ್ ಮಕ್ಕಳನ್ನು ಹಸಿವಿನಿಂದ ಬಳಲುಸುತ್ತಿದೆ ಎಂದು ಹೇಳುವ ಹಮಾಸ್‌ನ ಪ್ರಚಾರಕ್ಕೆ ಇಂಬು ಕೊಟ್ಟಿದ್ದಾರೆ” ಎಂದು ನೆತನ್ಯಾಹು ಆರೋಪಿಸಿದ್ದಾರೆ.

ಇಸ್ರೇಲ್ ಮಿಲಿಟರಿ ತನ್ನ ಹೊಸದಾಗಿ ವಿಸ್ತರಿಸಿದ ನೆಲದ ಆಕ್ರಮಣವನ್ನು ಮುಂದುವರಿಸಲು ಮತ್ತು ಪ್ಯಾಲೆಸ್ಟೀನಿಯನ್ ಪ್ರದೇಶದ ಸಂಪೂರ್ಣ ನಿಯಂತ್ರಣವನ್ನು ತೆಗೆದುಕೊಳ್ಳಲು ಸೀಮಿತ ಪ್ರಮಾಣದ ಆಹಾರವನ್ನು ಅನುಮತಿಸುವುದಾಗಿ ನೆತನ್ಯಾಹು ಈ ಹಿಂದೆ ಹೇಳಿದ್ದರು.

ವಿಶ್ವಸಂಸ್ಥೆ ಮತ್ತು ಇತರ ಸಂಸ್ಥೆಗಳು ಅಮೆರಿಕ-ಇಸ್ರೇಲಿ ಯೋಜನೆಗೆ ಸಹಕರಿಸುವುದಿಲ್ಲ ಎಂದು ಹೇಳಿವೆ. ಇದು ಮೂಲಭೂತ ಮಾನವೀಯ ತತ್ವಗಳಿಗೆ ವಿರುದ್ಧವಾಗಿದೆ ಎಂದು ಅವು ಹೇಳಿವೆ.

ದಕ್ಷಿಣದ ನಗರವಾದ ರಫಾದಲ್ಲಿರುವ ರೆಡ್‌ಕ್ರಾಸ್ ಫೀಲ್ಡ್ ಆಸ್ಪತ್ರೆಗೆ ಒಂದು ಲಾರಿ ಲೋಡ್ ವೈದ್ಯಕೀಯ ಸಾಮಗ್ರಿಗಳನ್ನು ತಂದಿರುವುದಾಗಿ ಅಂತರರಾಷ್ಟ್ರೀಯ ರೆಡ್‌ಕ್ರಾಸ್ ಸಮಿತಿ (ICRC) ತಿಳಿಸಿದೆ.

ದಕ್ಷಿಣ ಅಲ್-ಮವಾಸಿ ಪ್ರದೇಶದಲ್ಲಿ ಚಾರಿಟಿ ಯುಕೆ-ಮೆಡ್‌ನ ಫೀಲ್ಡ್ ಆಸ್ಪತ್ರೆಯನ್ನು ನಡೆಸುವ ಉಸ್ತುವಾರಿ ಹೊಂದಿರುವ ನರ್ಸ್ ಮ್ಯಾಂಡಿ ಬ್ಲಾಕ್‌ಮನ್, ಗಾಜಾದಲ್ಲಿನ ಪರಿಸ್ಥಿತಿಯನ್ನು “ಹೃದಯ ವಿದ್ರಾವಕ” ಎಂದು ಬಣ್ಣಿಸಿದ್ದಾರೆ, ಆಹಾರದ ಕೊರತೆ ಅಪಾಯಕಾರಿಯಾಗಿದೆ ಎಂದಿದ್ದಾರೆ.

ಆಸ್ಪತ್ರೆಗೆ ಬರುವ ರೋಗಿಗಳು ತಮ್ಮ ಹಿಂದಿನ ಎರಡು ಅವಧಿಗಳಿಗಿಂತ “ಗೋಚರವಾಗಿ ತೆಳ್ಳಗಿದ್ದಾರೆ” ಮತ್ತು ಸಿಬ್ಬಂದಿ ಅವರಿಗೆ ದಿನಕ್ಕೆ ಒಂದು ಊಟವನ್ನು ಮಾತ್ರ ನೀಡಲು ಸಾಧ್ಯವಾಯಿತು, ಅದರಲ್ಲಿ ಅಕ್ಕಿ ಮತ್ತು ಕೆಲವು ದ್ವಿದಳ ಧಾನ್ಯಗಳು ಸೇರಿವೆ ಎಂದು ಅವರು ಬಿಬಿಸಿಗೆ ತಿಳಿಸಿದರು.

“ಜನರು ನಿರಂತರವಾಗಿ ಸ್ಥಳಾಂತರಗೊಳ್ಳಬೇಕಾಗಿದೆ ಮತ್ತು ಅವರ ಮಕ್ಕಳಿಗೆ ಆಹಾರವನ್ನು ನೀಡಲು ಸಾಧ್ಯವಾಗುತ್ತಿಲ್ಲ. ಮರುದಿನ ಏನಾಗಲಿದೆ ಎಂದು ಯಾರಿಗೂ ತಿಳಿದಿಲ್ಲ. ನಿರಂತರ ಸಂಕಟ ಮತ್ತು ನಿರಂತರ ಆತಂಕವಿದೆ” ಎಂದು ಅವರು ಹೇಳಿದರು.

ಈ ಸಾಮಗ್ರಿಗಳ ನೆರವು ಗಾಜಾವನ್ನು ಪ್ರವೇಶಿಸುವ ಮೊದಲು, WFPಯ ಹಿರಿಯ ಅಧಿಕಾರಿ ಆಂಟೊಯಿನ್ ರೆನಾರ್ಡ್ ಅವರು, ಸಹಾಯ ಸಂಸ್ಥೆಗಳು ಇಸ್ರೇಲಿ ಮಿಲಿಟರಿ ಲಾರಿಗಳನ್ನು ಅಪಾಯಕಾರಿ ಎಂದು ಪರಿಗಣಿಸುವ ಮಾರ್ಗದಲ್ಲಿ ಚಲಿಸುವಂತೆ ಬಯಸಿದ್ದರಿಂದ ಅದನ್ನು ಸಂಗ್ರಹಿಸುವಲ್ಲಿ ಸಮಸ್ಯೆಗಳು ಉದ್ಭವಿಸಿದವು ಎಂದಿದ್ದಾರೆ.

ಈ ಮಾರ್ಗವು ತೀವ್ರವಾಗಿ ಹಸಿದ ನಾಗರಿಕರು ಮತ್ತು ಸಶಸ್ತ್ರ ಕ್ರಿಮಿನಲ್ ಗ್ಯಾಂಗ್‌ಗಳ ದಾಳಿಗೆ ಒಳಪಡಿಸಬಹುದು ಎಂಬ ಆತಂಕವಿದೆ. ಈಗ ಗಾಜಾದಲ್ಲಿ ಹಿಟ್ಟು ತುಂಬಿದ ಪ್ರತಿ ಟ್ರಕ್ ಸುಮಾರು $400,000 (£298,000) ಮೌಲ್ಯದ್ದಾಗಿದೆ. ನಾವು ಕಡಿಮೆ ಆಹಾರ ಒದಗಿಸಿದರೆ ಹೆಚ್ಚಿನ ಅಪಾಯ ಮತ್ತು ಆತಂಕ ಸೃಷ್ಟಿಯಾಗುತ್ತದೆ. ಗೋದಾಮುಗಳಿಗೆ ಸುರಕ್ಷಿತ ಮಾರ್ಗದಲ್ಲಿ “ದಿನಕ್ಕೆ ನೂರಾರು ಟ್ರಕ್‌ಗಳು” ಪ್ರಯಾಣಿಸುವುದು ಪರಿಹಾರವಾಗಿದೆ ಎಂದು ಅವರು ಹೇಳಿದರು.

ಗಾಜಾ ಬದಿಯಲ್ಲಿರುವ ನೆರವು ಸಂಸ್ಥೆಗಳು ತಮ್ಮ ಸರಕುಗಳೊಂದಿಗೆ ಸಶಸ್ತ್ರ ಕಾವಲುಗಾರರನ್ನು ನೇಮಿಸಲಿಲ್ಲ ಏಕೆಂದರೆ ಅದು ತುಂಬಾ ಅಪಾಯಕಾರಿ ಎಂದು ಪರಿಗಣಿಸಲಾಗಿದೆ. ಪ್ರತಿದಿನ ಕನಿಷ್ಠ 100 ನೆರವು ಲಾರಿಗಳನ್ನು ತರುವುದರಿಂದ ಜನಸಂಖ್ಯೆಯ “ಕನಿಷ್ಠ” ಆಹಾರ ಅಗತ್ಯಗಳನ್ನು ಮಾತ್ರ ಪೂರೈಸಬಹುದು. ಗಾಜಾದಾದ್ಯಂತ ಇಸ್ರೇಲಿ ಬಾಂಬ್ ದಾಳಿ ಮತ್ತು ಭೂ ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಹಮಾಸ್ ನಡೆಸುವ ಆರೋಗ್ಯ ಸಚಿವಾಲಯ ಗುರುವಾರ ವರದಿ ಮಾಡಿದೆ. ಕಳೆದ 24 ಗಂಟೆಗಳಲ್ಲಿ 107 ಜನರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿಯು ಇದೆ ಎಂದು ರೆನಾರ್ಡ್ ವಿವರಿಸಿದರು.

ಹಮಾಸ್ ನಡೆಸುವ ನಾಗರಿಕ ರಕ್ಷಣಾ ಸಂಸ್ಥೆಯ ಪ್ರಕಾರ, ಗುರುವಾರ ಬೆಳಗಿನ ಜಾವದಿಂದ ಕನಿಷ್ಠ 52 ಜನರು ಸಾವನ್ನಪ್ಪಿದ್ದಾರೆ ಎಂದಿದೆ. ಪ್ಯಾಲೇಸ್ಟಿನಿಯನ್ ಮಾಧ್ಯಮಗಳು 16 ಜನರನ್ನು ಒಳಗೊಂಡಿವೆ ಎಂದು ವರದಿ ಮಾಡಿವೆ. ಅವರಲ್ಲಿ ಹೆಚ್ಚಿನವರು ಒಂದೇ ಕುಟುಂಬದ ಸದಸ್ಯರು, ಉತ್ತರ ಗಾಜಾದ ಜಬಾಲಿಯಾದಲ್ಲಿ ಮನೆ ಮೇಲೆ ದಾಳಿ ಮಾಡಿದಾಗ ಅವರು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿವೆ.

ಮಹಾರಾಷ್ಟ್ರ| ಮಾವೋವಾದಿಗಳ ಹಿಡಿತವಿದ್ದ ಗಡ್ಚಿರೋಲಿಯಲ್ಲಿ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಅನುಮೋದನೆ; 1 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...