Homeಮುಖಪುಟಇಸ್ರೇಲ್‌ ದಾಳಿ | ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ

ಇಸ್ರೇಲ್‌ ದಾಳಿ | ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ

- Advertisement -
- Advertisement -

ಶುಕ್ರವಾರದಂದು ಇಸ್ರೇಲ್ ನಡೆಸಿದ ಬೃಹತ್ ವೈಮಾನಿಕ ದಾಳಿಯಲ್ಲಿ ತಮ್ಮ ನಾಯಕ ಹಸನ್ ನಸ್ರಲ್ಲಾ ಮೃತಪಟ್ಟಿರುವುದನ್ನು ಲೆಬನಾನ್‌ನ ಬಂಡುಕೋರ ಸಂಘಟನೆ ಹೆಜ್ಬೊಲ್ಲಾಹ್  ಶನಿವಾರ ದೃಢಪಡಿಸಿದೆ. ಇಸ್ರೇಲ್‌ ದಾಳಿ

ಬೈರುತ್‌ನಲ್ಲಿರುವ ಗುಂಪಿನ ಪ್ರಧಾನ ಕಚೇರಿಯ ಮೇಲೆ ನಡೆಸಿದ ದಾಳಿಯಲ್ಲಿ ಸಂಘಟನೆಯ 64 ವರ್ಷದ ನಾಯಕನನ್ನು ಕೊಂದಿರುವುದಾಗಿ ಇಸ್ರೇಲ್ ಸೇನೆಯು ಶನಿವಾರ ಮುಂಜಾನೆ ಹೇಳಿಕೊಂಡಿತ್ತು. ಈ ಕಾರ್ಯಾಚರಣೆಯನ್ನು ಇಸ್ರೇಲ್ ‘ಆಪರೇಷನ್ ನ್ಯೂ ಆರ್ಡರ್’ ಎಂದು ಕರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮ್ಮ ನಾಯಕನ ಸಾವನ್ನು ಘೋಸಿರುವ ಹೇಳಿಕೆಯಲ್ಲಿ ಸಂಘಟನೆಯು “ನಸ್ರಲ್ಲಾಹ್ ಅವರು ಕೂಡಾ ಹುತಾತ್ಮರನ್ನು ಸೇರಿಕೊಂಡಿದ್ದಾರೆ” ಎಂದು ಹೇಳಿದೆ. ತರುವಾಯ ಹಿಜ್ಬುಲ್ಲಾದ ಅಲ್-ಮನರ್ ಟಿವಿಯು ನಸ್ರಲ್ಲಾ ಅವರ ಮರಣಕ್ಕೆ ಸಂತಾಪ ಸೂಚಿಸುವ ಕುರಾನ್ ಸ್ಲೋಕಗಳನ್ನು ಪ್ರಸಾರ ಮಾಡಲು ಪ್ರಾರಂಭಿಸಿತು ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಇದನ್ನೂಓದಿ: ‘ಸುಲಿಗೆ’ | ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನಲ್ಲಿ FIR

ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ಮಾತನಾಡಿದ ಹಿಜ್ಬುಲ್ಲಾಹ್ ಸಂಘಟನೆಯ ಅಧಿಕಾರಿಗಳು ಶನಿವಾರ ಮುಂಜಾನೆ ನಸ್ರಲ್ಲಾ ಅವರ ದೇಹವನ್ನು ಮತ್ತೊಬ್ಬ ಉನ್ನತ ಕಮಾಂಡರ್ ಅಲಿ ಕರಕಿ ಅವರ ದೇಹದೊಂದಿಗೆ ಗುರುತಿಸಿದ್ದಾರೆ ಎಂದು ಹೇಳಿದ್ದಾರೆ.

ಅಕ್ಟೋಬರ್ 7, 2023 ರಂದು ಇಸ್ರೇಲ್‌ನ ಮೇಲೆ ಹಮಾಸ್ ನಡೆಸಿದ ದಾಳಿಯ ನಂತರ ಇಸ್ರೇಲ್‌ನೊಂದಿಗೆ ಸಶಸ್ತ್ರ ಸಂಘರ್ಷದಲ್ಲಿದ್ದ ಹಿಜ್ಬುಲ್ಲಾ ಸಂಘಟನೆಗೆ ತಮ್ಮ ಸಂಘಟನೆಯ ದೀರ್ಘಕಾಲದ ನಾಯಕನ ಸಾವು ಭಾರಿ ಹೊಡೆತವಾಗಿದೆ.

ನಸ್ರಲ್ಲಾ ಅವರ ಮರಣವನ್ನು ಘೋಷಿಸಿದ ನಂತರ ಸಂಘಟನೆಯು ಇಸ್ರೇಲ್ ವಿರುದ್ಧ ತನ್ನ ಯುದ್ಧವನ್ನು ಮುಂದುವರೆಸುವುದಾಗಿ ಹೇಳಿದೆ. ಗಾಜಾ ಮತ್ತು ಪ್ಯಾಲೆಸ್ತೀನ್‌ಗೆ ಬೆಂಬಲ ಹಾಗೂ ಲೆಬನಾನ್ ಮತ್ತು ಅದರ ಜನರ ರಕ್ಷಣೆಗಾಗಿ ಈ ಹೋರಾಟ ಮುಂದುವರೆಯುವುದಾಗಿ ಹೇಳಿದೆ.ಇಸ್ರೇಲ್‌ ದಾಳಿ

ನಸ್ರಲ್ಲಾ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಹಿಜ್ಬೊಲ್ಲಾವನ್ನು ಮುನ್ನಡೆಸಿದ್ದರು. ಇಸ್ರೇಲ್ ನಡೆಸಿದ ದಾಳಿಯಲ್ಲಿ ನಸ್ರಲ್ಲಾಹ್ ಜೊತೆಗೆ ಅವರ ಮಗಳು ಝೈನಾಬ್ ನಸ್ರಲ್ಲಾ, ಹಿಜ್ಬುಲ್ಲಾದ ಸದರ್ನ್ ಫ್ರಂಟ್ನ ಕಮಾಂಡರ್ ಅಲಿ ಕರ್ಕಿ ಮತ್ತು ಇರಾನ್ ರೆವಲ್ಯೂಷನರಿ ಗಾರ್ಡ್ಸ್‌ನ ಡೆಪ್ಯುಟಿ ಕಮಾಂಡರ್ ಅಬ್ಬಾಸ್ ನಿಲ್ಫೊರೌಶನ್ ಸಹ ದಾಳಿಯಲ್ಲಿ ಕೊಲ್ಲಲ್ಪಟ್ಟರು ಎಂದು ವರದಿಯಾಗಿದೆ.

ವಿಡಿಯೊ ನೋಡಿ: ಅಟ್ರಾಸಿಟಿ’ ಕಾದಂಬರಿ; ಮನುಷ್ಯ ಲೋಕದ ರೂಪಾಂತರವನ್ನ ಕಟ್ಟುತಿದೆಯಾ? ಡಾ. ಗೀತಾ ವಸಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...