Homeಮುಖಪುಟಗಾಝಾ ಆಸ್ಪತ್ರೆಯ ಮೇಲೆ ಇಸ್ರೇಲ್ ಭೀಕರ ದಾಳಿ: 500ಕ್ಕೂ ಹೆಚ್ಚು ಜನರ ಸಾವು

ಗಾಝಾ ಆಸ್ಪತ್ರೆಯ ಮೇಲೆ ಇಸ್ರೇಲ್ ಭೀಕರ ದಾಳಿ: 500ಕ್ಕೂ ಹೆಚ್ಚು ಜನರ ಸಾವು

- Advertisement -
- Advertisement -

ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ದಾಳಿ ಮುಂದುವರೆದಿದ್ದು,  ಗಾಝಾ ನಗರದ ಅಲ್-ಅಹ್ಲಿ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ಮಾಡಿದೆ. ಈ ದಾಳಿಯಲ್ಲಿ 500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಆಸ್ಪತ್ರೆಯಲ್ಲಿ ಸಾವಿರಾರು ನಾಗರಿಕರು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದರು. ನಿರಂತರ ದಾಳಿಯ ಪರಿಣಾಮ ನಿರಾಶ್ರಿತರೂ ಆಸ್ಪತ್ರೆಯಲ್ಲಿ ಆಶ್ರಯ ಪಡೆಯುತ್ತಿದ್ದರು ಎನ್ನಲಾಗಿದೆ.

ಬಾಂಬ್ ದಾಳಿಯಿಂದಾಗಿ ಕನಿಷ್ಠ 500 ಮಂದಿ ಸಾವನ್ನಪ್ಪಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ಹೇಳಿದೆ. ವಿಶ್ವ ಸಂಸ್ಥೆ ನಡೆಸುತ್ತಿದ್ದ ಶಾಲೆಯಲ್ಲಿ ಆಶ್ರಯ ಪಡೆದಿದ್ದ ನಿರಾಶ್ರಿತರ ಮೇಲೂ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಆಸ್ಪತ್ರೆ ಮೇಲೆ ಬಾಂಬ್ ದಾಳಿ ಮಾಡಿರುವುದಕ್ಕೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್‌ ಜಜೀರಾ ಹಂಚಿಕೊಂಡಿರುವ ದೃಶ್ಯಗಳಲ್ಲಿ ವೈದ್ಯರು ಮತ್ತು ನಾಗರಿಕರು ಬಿಳಿ ಚೀಲಗಳು, ಅಥವಾ ಹೊದಿಕೆಗಳಲ್ಲಿ ಮೃತ ದೇಹಗಳ್ನು ಪಡೆದುಕೊಳ್ಳುತ್ತಿರುವುದನ್ನು ನೋಡಬಹುದು. ಆಸ್ಪತ್ರೆಯ ಅಂಗಳದಲ್ಲಿ ರಕ್ತದ ಕಲೆಗಳು ಮತ್ತು ಸುಟ್ಟ ಕಾರುಗಳು ಗೋಚರಿಸಸುತ್ತವೆ.

ಅಕ್ಟೋಬರ್ 7ರಿಂದ ನಡೆಯುತ್ತಿರುವ ಈ ಮಾರಣಾಂತಿಕ ಸಂಘರ್ಷದಲ್ಲಿ ಪ್ಯಾಲೆಸ್ತೀನ್, ಇಸ್ರೇಲ್‌ನ ಸಾವಿರಾರು ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ. ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ಸೇನೆ ವೈಮಾನಿಕ ದಾಳಿ ನಡೆಸುವ ಮೂಲಕ ವಿನಾಶಕಾರಿ ಪರಿಸ್ಥಿತಿಯನ್ನು ಸೃಷ್ಟಿಸಿದೆ.

10 ದಿನಗಳಿಂದ ನಡೆಯುತ್ತಿರುವ ಬಾಂಬ್ ದಾಳಿಯಿಂದಾಗಿ ಸೆಂಟ್ರಲ್ ಗಾಜಾದ ಅಹ್ಲಿ ಅರಬ್ ಆಸ್ಪತ್ರೆಗೆ ಸ್ಥಳಾಂತರಗೊಂಡಿದ್ದ 500 ರಿಂದ 600 ಜನ ಇಸ್ರೇಲ್ ಸೈನ್ಯದ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೆಸ್ತೀನ್ ಆಳ್ವಿಕೆಯ ಆರೋಗ್ಯ ಸಚಿವಾಲಯ ತಿಳಿಸಿದೆ. ನೂರಾರು ಗಾಯಾಳುಗಳು ಇನ್ನೂ ಅವಶೇಷಗಳಡಿಯಲ್ಲಿದ್ದಾರೆ ಎಂದು ಹೇಳಿದ್ದು, ಇದು ಯುದ್ಧ ಅಪರಾಧ ಎಂದು ಕರೆದಿದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಈ ಘಟನೆಯನ್ನು ಖಂಡಿಸಿದೆ. ಜೋರ್ಡಾನ್‌ನಲ್ಲಿ ಘಟನೆಯನ್ನು ಖಂಡಿಸಿ ಇಸ್ರೇಲ್ ರಾಯಭಾರ ಕಚೇರಿ ಮೇಲೆ ದಾಳಿ ಮಾಡಲು ಪ್ರತಿಭಟನಾಕಾರರು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: ಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...