Homeಅಂತರಾಷ್ಟ್ರೀಯಇರಾನ್ ಮೇಲೆ ಇಸ್ರೇಲ್ ದಾಳಿ; ಭಾರತೀಯರಿಗೆ ತುರ್ತು ಪ್ರಯಾಣ ಸಲಹೆ ನೀಡಿದ ಭಾರತ!

ಇರಾನ್ ಮೇಲೆ ಇಸ್ರೇಲ್ ದಾಳಿ; ಭಾರತೀಯರಿಗೆ ತುರ್ತು ಪ್ರಯಾಣ ಸಲಹೆ ನೀಡಿದ ಭಾರತ!

- Advertisement -
- Advertisement -

ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳ ಹಿನ್ನಲೆ ಪ್ರಾದೇಶಿಕ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಗಿದ್ದು, ಭಾರತವು ಶುಕ್ರವಾರ ಇರಾನ್ ಮತ್ತು ಇಸ್ರೇಲ್‌ನಲ್ಲಿರುವ ತನ್ನ ನಾಗರಿಕರಿಗೆ ತುರ್ತು ಪ್ರಯಾಣ ಸಲಹೆಗಳನ್ನು ನೀಡಿದೆ. ಅದಾಗ್ಯೂ, ಇರಾನ್ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದು, ಅದರ ನಂತರ ಏರ್ ಇಂಡಿಯಾ ತನ್ನ 15 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವಿಮಾನಗಳನ್ನು ಬೇರೆಡೆಗೆ ತಿರುಗಿಸಿದೆ.ಇರಾನ್ ಮೇಲೆ ಇಸ್ರೇಲ್

ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಇರಾನ್‌ನಲ್ಲಿರುವ ಭಾರತೀಯ ಮೂಲದ ವ್ಯಕ್ತಿಗಳು ತೀವ್ರ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದೆ.

“ಇರಾನ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಇರಾನ್‌ನಲ್ಲಿರುವ ಭಾರತೀಯ ಮೂಲದ ವ್ಯಕ್ತಿಗಳು ಜಾಗರೂಕರಾಗಿರಲು, ಎಲ್ಲಾ ಅನಗತ್ಯ ಚಲನೆಗಳನ್ನು ತಪ್ಪಿಸಲು, ರಾಯಭಾರ ಕಚೇರಿಯ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಅನುಸರಿಸಲು ಮತ್ತು ಸ್ಥಳೀಯ ಅಧಿಕಾರಿಗಳ ಸಲಹೆಯಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲು ವಿನಂತಿಸಲಾಗಿದೆ” ಎಂದು ರಾಯಭಾರ ಕಚೇರಿ ಎಕ್ಸ್‌ನಲ್ಲಿ ತಿಳಿಸಿದೆ.

ಅದೇ ವೇಳೆ, ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ಉಲ್ಬಣಗೊಳ್ಳುವ ಭೀತಿಯ ನಡುವೆ ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಇದೇ ರೀತಿಯ ಎಚ್ಚರಿಕೆಯನ್ನು ನೀಡಿದೆ, .

“ಪ್ರದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಇಸ್ರೇಲ್ ಅಧಿಕಾರಿಗಳು ಮತ್ತು ಹೋಮ್ ಫ್ರಂಟ್ ಕಮಾಂಡ್ ಸೂಚಿಸಿದಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಪಾಲಿಸಲು ಸೂಚಿಸಲಾಗಿದೆ” ಎಂದು ಅದು ಹೇಳಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ‘ಆಪರೇಷನ್ ರೈಸಿಂಗ್ ಲಯನ್’ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದ ನಂತರ ಈ ಎರಡು ಸಲಹೆಗಳನ್ನು ನೀಡಲಾಗಿದೆ. ಈ ಆಪರೇಷನ್‌ ಇರಾನ್‌ನ ಪರಮಾಣು ಸಾಮರ್ಥ್ಯಗಳನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

ಇಸ್ರೇಲ್ ದಾಳಿಗಳು ನಟಾಂಜ್‌ನಲ್ಲಿರುವ ಯುರೇನಿಯಂ ಪುಷ್ಟೀಕರಣ ಸೌಲಭ್ಯ ಸೇರಿದಂತೆ ಪ್ರಮುಖ ಪರಮಾಣು ಮೂಲಸೌಕರ್ಯದ ಮೇಲೆ ಪರಿಣಾಮ ಬೀರಿವೆ ಎಂದು ನೆತನ್ಯಾಹು ಹೇಳಿದ್ದಾರೆ.

ಇಸ್ರೇಲ್‌ ದಾಳಿಯಿಂದಾಗಿ ಇರಾನ್ ತನ್ನ ವಾಯುಪ್ರದೇಶದ ಕೆಲವು ಭಾಗಗಳನ್ನು ಮುಚ್ಚಿದ್ದು, ವಾಣಿಜ್ಯ ವಾಯು ಸಂಚಾರಕ್ಕೂ ಅಡ್ಡಿಯಾಗಿದೆ. ಏರ್ ಇಂಡಿಯಾದ ಹಲವಾರು ದೀರ್ಘ-ಪ್ರಯಾಣದ ವಿಮಾನಗಳನ್ನು ಮಾರ್ಗಮಧ್ಯದಲ್ಲಿ ತಿರುಗುವಂತೆ ಅಥವಾ ಹಿಂತಿರುಗುವಂತೆ ಆಯಿದೆ.

ಭಾರತೀಯ ಪ್ರಜೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕವನ್ನು ಕಾಯ್ದುಕೊಳ್ಳುವಾಗ, ಪ್ರದೇಶದಲ್ಲಿನ ತನ್ನ ಕಾರ್ಯಾಚರಣೆಗಳ ಮೂಲಕ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಭಾರತ ಸರ್ಕಾರ ಹೇಳಿದೆ. ಇರಾನ್ ಮೇಲೆ ಇಸ್ರೇಲ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಏರ್ ಇಂಡಿಯಾ ಪತನ: ಮೃತಪಟ್ಟ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಸಾವಿನ ಸಂಖ್ಯೆ ಕನಿಷ್ಠ 265

ಏರ್ ಇಂಡಿಯಾ ಪತನ: ಮೃತಪಟ್ಟ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಸಾವಿನ ಸಂಖ್ಯೆ ಕನಿಷ್ಠ 265

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...