Homeಅಂತರಾಷ್ಟ್ರೀಯಸುದ್ದಿ ಓದುತ್ತಿರುವಾಗಲೇ ಇರಾನ್ ಸರ್ಕಾರಿ ಚಾನೆಲ್‌ ಮೇಲೆ ಇಸ್ರೇಲ್ ದಾಳಿ; ನೇರ ಪ್ರಸಾರದಲ್ಲಿ ದಾಖಲು

ಸುದ್ದಿ ಓದುತ್ತಿರುವಾಗಲೇ ಇರಾನ್ ಸರ್ಕಾರಿ ಚಾನೆಲ್‌ ಮೇಲೆ ಇಸ್ರೇಲ್ ದಾಳಿ; ನೇರ ಪ್ರಸಾರದಲ್ಲಿ ದಾಖಲು

- Advertisement -
- Advertisement -

ಇರಾನ್ ಸರ್ಕಾರಿ ಟಿವಿ ನಿರೂಪಕಿಯೊಬ್ಬರು ಸೋಮವಾರ ಸ್ಟುಡಿಯೋದಲ್ಲಿ ಸುದ್ದಿ ಓದುತ್ತಿರುವಾಗಲೇ ಇಸ್ರೇಲ್ ವಾಯುದಾಳಿ ನಡೆಸಿದ್ದು, ನೇರಪ್ರಸಾದಲ್ಲಿ ದಾಳಿ ಭೀಕರತೆ ದಾಖಲಾಗಿದೆ. ಟೆಹ್ರಾನ್ ಪ್ರದೇಶವನ್ನು ಸ್ಥಳಾಂತರಿಸುವಂತೆ ಇಸ್ರೇಲ್ ಎಚ್ಚರಿಕೆ ನೀಡಿದ ಒಂದು ಗಂಟೆಯ ನಂತರ ಸ್ಫೋಟ ಸಂಭವಿಸಿದ್ದು, ಪ್ರಾಣ ಉಳಿಸಿಕೊಳ್ಳಲು ನಿರೂಪಕಿ ಸ್ಟುಡಿಯೋ ತೊರೆದಿರುವುದುನ್ನು ಕಾಣಬಹುದು.

ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ನ್ಯೂಸ್ ನೆಟ್‌ವರ್ಕ್‌ನ ವರದಿಗಾರ್ತಿ ಮಾತನಾಡುತ್ತಾ, “ತಾಯ್ನಾಡಿನ ವಿರುದ್ಧ ಆಕ್ರಮಣದ ಶಬ್ದ, ಸತ್ಯ ಮತ್ತು ಸದಾಚಾರದ ವಿರುದ್ಧ ಆಕ್ರಮಣದ ಶಬ್ದ” ಎಂದು ಹೇಳುತ್ತಿದ್ದಂತೆಯೇ ದಾಳಿ ನಡೆದಿದದ್ದು, ಇಡೀ ಸ್ಟುಡಿಯೋ ಧೂಳಿನಿಂದ ಆವೃತವಾಯಿತು.

ನಿರೂಪಕಿ ಸಹರ್ ಎಮಾಮಿ ಅವರು ನೇರಪ್ರಸಾರದಿಂದ ಹೊರಗೆ ಓಡಿಹೋದರು. ಈ ಸಂದರ್ಭದಲ್ಲಿ ಚಾನೆಲ್ ಸಿಬ್ಬಂದಿ ‘ಅಲ್ಲಾಹು ಅಕ್ಬರ್’ ಎಂದು ಕೂಗಿಕೊಂಡು ಪ್ರಾಣರಕ್ಷಣೆಗೆ ಓಡಿದ್ದಾರೆ.

ಚಾನೆಲ್‌ನ ಪ್ರಸಾರವು ಕೂಡಲೇ ರೆಕಾರ್ಡ್ ಮಾಡಿದ ಕಾರ್ಯಕ್ರಮಗಳಿಗೆ ಬದಲಾಯಿತು. ಶೀಘ್ರದಲ್ಲೇ, ಎಮಾಮಿ ಮತ್ತೊಂದು ಸ್ಟುಡಿಯೋದಿಂದ ನೇರ ಪ್ರಸಾರಕ್ಕೆ ಹಿಂತಿರುಗಿದರು. ಮತ್ತೋರ್ವ ನಿರೂಪಕನೊಂದಿಗೆ ಕುಳಿತು ಮಾತನಾಡುತ್ತಿರುವುದು ಕಂಡುಬಂದಿತು.

ದಾಳಿಯ ಹೊಣೆಯನ್ನು ಇಸ್ರೇಲ್‌ನ ರಕ್ಷಣಾ ಸಚಿವಾಲಯ ಒಪ್ಪಿಕೊಂಡಿದೆ. “ದಾಳಿ ಪ್ರದೇಶದ ನಿವಾಸಿಗಳನ್ನು ವ್ಯಾಪಕವಾಗಿ ಸ್ಥಳಾಂತರಿಸಿದ ನಂತರ ಇರಾನಿನ ಆಡಳಿತದ ಪ್ರಚಾರ ಮತ್ತು ಪ್ರಚೋದನೆ ಪ್ರಸಾರ ಪ್ರಾಧಿಕಾರದ ಮೇಲೆ ಐಡಿಎಫ್ ದಾಳಿ ಮಾಡಿದೆ” ಎಂದು ಇಸ್ರೇಲ್ ಕಾಟ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ನಾವು ಎಲ್ಲೆಡೆ ಇರಾನಿನ ಸರ್ವಾಧಿಕಾರಿಯನ್ನು ಹೊಡೆಯುತ್ತೇವೆ” ಎಂದು ಘೋಷಿಸಿದ್ದಾರೆ.

ಚಾನೆಲ್‌ ಮೇಲಿನ ದಾಳಿಯ ಒಂದು ಗಂಟೆಯ ಮೊದಲು, ಇಸ್ರೇಲಿ ಮಿಲಿಟರಿ ದೇಶದ ರಾಜ್ಯ ಟಿವಿ ಮತ್ತು ಪೊಲೀಸ್ ಪ್ರಧಾನ ಕಚೇರಿ ಮತ್ತು ಮೂರು ದೊಡ್ಡ ಆಸ್ಪತ್ರೆಗಳನ್ನು ಒಳಗೊಂಡಿರುವ ಮಧ್ಯ ಟೆಹ್ರಾನ್‌ನ ಒಂದು ಭಾಗದಲ್ಲಿ ಸುಮಾರು 330,000 ಜನರ ಮೇಲೆ ಪರಿಣಾಮ ಬೀರುವ ಬಗ್ಗೆ ಮೊದಲೇ ಎಚ್ಚರಿಕೆ ನೀಡಿತ್ತು.

ಸಂಘರ್ಷದ ನಾಲ್ಕನೇ ದಿನದಂದು ಇಸ್ರೇಲಿ ಮಿಲಿಟರಿ ಇರಾನಿನ ರಾಜಧಾನಿಯ ಮೇಲೆ ವಾಯು ಪ್ರಾಬಲ್ಯವನ್ನು ಸಾಧಿಸಿದೆ.

ಇರಾನ್ ವಿರುದ್ಧ ಯುದ್ಧ | ಟ್ರಂಪ್ ಅಧಿಕಾರ ತಡೆಯುವ ಮಸೂದೆ ಮಂಡಿಸಿದ ಯುಎಸ್ ಸೆನೆಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...