Homeಅಂತರಾಷ್ಟ್ರೀಯಸುದ್ದಿ ಓದುತ್ತಿರುವಾಗಲೇ ಇರಾನ್ ಸರ್ಕಾರಿ ಚಾನೆಲ್‌ ಮೇಲೆ ಇಸ್ರೇಲ್ ದಾಳಿ; ನೇರ ಪ್ರಸಾರದಲ್ಲಿ ದಾಖಲು

ಸುದ್ದಿ ಓದುತ್ತಿರುವಾಗಲೇ ಇರಾನ್ ಸರ್ಕಾರಿ ಚಾನೆಲ್‌ ಮೇಲೆ ಇಸ್ರೇಲ್ ದಾಳಿ; ನೇರ ಪ್ರಸಾರದಲ್ಲಿ ದಾಖಲು

- Advertisement -
- Advertisement -

ಇರಾನ್ ಸರ್ಕಾರಿ ಟಿವಿ ನಿರೂಪಕಿಯೊಬ್ಬರು ಸೋಮವಾರ ಸ್ಟುಡಿಯೋದಲ್ಲಿ ಸುದ್ದಿ ಓದುತ್ತಿರುವಾಗಲೇ ಇಸ್ರೇಲ್ ವಾಯುದಾಳಿ ನಡೆಸಿದ್ದು, ನೇರಪ್ರಸಾದಲ್ಲಿ ದಾಳಿ ಭೀಕರತೆ ದಾಖಲಾಗಿದೆ. ಟೆಹ್ರಾನ್ ಪ್ರದೇಶವನ್ನು ಸ್ಥಳಾಂತರಿಸುವಂತೆ ಇಸ್ರೇಲ್ ಎಚ್ಚರಿಕೆ ನೀಡಿದ ಒಂದು ಗಂಟೆಯ ನಂತರ ಸ್ಫೋಟ ಸಂಭವಿಸಿದ್ದು, ಪ್ರಾಣ ಉಳಿಸಿಕೊಳ್ಳಲು ನಿರೂಪಕಿ ಸ್ಟುಡಿಯೋ ತೊರೆದಿರುವುದುನ್ನು ಕಾಣಬಹುದು.

ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ನ್ಯೂಸ್ ನೆಟ್‌ವರ್ಕ್‌ನ ವರದಿಗಾರ್ತಿ ಮಾತನಾಡುತ್ತಾ, “ತಾಯ್ನಾಡಿನ ವಿರುದ್ಧ ಆಕ್ರಮಣದ ಶಬ್ದ, ಸತ್ಯ ಮತ್ತು ಸದಾಚಾರದ ವಿರುದ್ಧ ಆಕ್ರಮಣದ ಶಬ್ದ” ಎಂದು ಹೇಳುತ್ತಿದ್ದಂತೆಯೇ ದಾಳಿ ನಡೆದಿದದ್ದು, ಇಡೀ ಸ್ಟುಡಿಯೋ ಧೂಳಿನಿಂದ ಆವೃತವಾಯಿತು.

ನಿರೂಪಕಿ ಸಹರ್ ಎಮಾಮಿ ಅವರು ನೇರಪ್ರಸಾರದಿಂದ ಹೊರಗೆ ಓಡಿಹೋದರು. ಈ ಸಂದರ್ಭದಲ್ಲಿ ಚಾನೆಲ್ ಸಿಬ್ಬಂದಿ ‘ಅಲ್ಲಾಹು ಅಕ್ಬರ್’ ಎಂದು ಕೂಗಿಕೊಂಡು ಪ್ರಾಣರಕ್ಷಣೆಗೆ ಓಡಿದ್ದಾರೆ.

ಚಾನೆಲ್‌ನ ಪ್ರಸಾರವು ಕೂಡಲೇ ರೆಕಾರ್ಡ್ ಮಾಡಿದ ಕಾರ್ಯಕ್ರಮಗಳಿಗೆ ಬದಲಾಯಿತು. ಶೀಘ್ರದಲ್ಲೇ, ಎಮಾಮಿ ಮತ್ತೊಂದು ಸ್ಟುಡಿಯೋದಿಂದ ನೇರ ಪ್ರಸಾರಕ್ಕೆ ಹಿಂತಿರುಗಿದರು. ಮತ್ತೋರ್ವ ನಿರೂಪಕನೊಂದಿಗೆ ಕುಳಿತು ಮಾತನಾಡುತ್ತಿರುವುದು ಕಂಡುಬಂದಿತು.

ದಾಳಿಯ ಹೊಣೆಯನ್ನು ಇಸ್ರೇಲ್‌ನ ರಕ್ಷಣಾ ಸಚಿವಾಲಯ ಒಪ್ಪಿಕೊಂಡಿದೆ. “ದಾಳಿ ಪ್ರದೇಶದ ನಿವಾಸಿಗಳನ್ನು ವ್ಯಾಪಕವಾಗಿ ಸ್ಥಳಾಂತರಿಸಿದ ನಂತರ ಇರಾನಿನ ಆಡಳಿತದ ಪ್ರಚಾರ ಮತ್ತು ಪ್ರಚೋದನೆ ಪ್ರಸಾರ ಪ್ರಾಧಿಕಾರದ ಮೇಲೆ ಐಡಿಎಫ್ ದಾಳಿ ಮಾಡಿದೆ” ಎಂದು ಇಸ್ರೇಲ್ ಕಾಟ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ನಾವು ಎಲ್ಲೆಡೆ ಇರಾನಿನ ಸರ್ವಾಧಿಕಾರಿಯನ್ನು ಹೊಡೆಯುತ್ತೇವೆ” ಎಂದು ಘೋಷಿಸಿದ್ದಾರೆ.

ಚಾನೆಲ್‌ ಮೇಲಿನ ದಾಳಿಯ ಒಂದು ಗಂಟೆಯ ಮೊದಲು, ಇಸ್ರೇಲಿ ಮಿಲಿಟರಿ ದೇಶದ ರಾಜ್ಯ ಟಿವಿ ಮತ್ತು ಪೊಲೀಸ್ ಪ್ರಧಾನ ಕಚೇರಿ ಮತ್ತು ಮೂರು ದೊಡ್ಡ ಆಸ್ಪತ್ರೆಗಳನ್ನು ಒಳಗೊಂಡಿರುವ ಮಧ್ಯ ಟೆಹ್ರಾನ್‌ನ ಒಂದು ಭಾಗದಲ್ಲಿ ಸುಮಾರು 330,000 ಜನರ ಮೇಲೆ ಪರಿಣಾಮ ಬೀರುವ ಬಗ್ಗೆ ಮೊದಲೇ ಎಚ್ಚರಿಕೆ ನೀಡಿತ್ತು.

ಸಂಘರ್ಷದ ನಾಲ್ಕನೇ ದಿನದಂದು ಇಸ್ರೇಲಿ ಮಿಲಿಟರಿ ಇರಾನಿನ ರಾಜಧಾನಿಯ ಮೇಲೆ ವಾಯು ಪ್ರಾಬಲ್ಯವನ್ನು ಸಾಧಿಸಿದೆ.

ಇರಾನ್ ವಿರುದ್ಧ ಯುದ್ಧ | ಟ್ರಂಪ್ ಅಧಿಕಾರ ತಡೆಯುವ ಮಸೂದೆ ಮಂಡಿಸಿದ ಯುಎಸ್ ಸೆನೆಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...