Homeಮುಖಪುಟಹೆಜ್ಬುಲ್ಲಾ ಹೆಸರೇಳಿಕೊಂಡು ಜನವಸತಿ ಪ್ರದೇಶಗಳ ಮೇಲೆ ಇಸ್ರೇಲ್ ದಾಳಿ : ಸಂಕಷ್ಟಕ್ಕೆ ಸಿಲುಕಿದ ಲೆಬನಾನ್ ನಾಗರಿಕರು

ಹೆಜ್ಬುಲ್ಲಾ ಹೆಸರೇಳಿಕೊಂಡು ಜನವಸತಿ ಪ್ರದೇಶಗಳ ಮೇಲೆ ಇಸ್ರೇಲ್ ದಾಳಿ : ಸಂಕಷ್ಟಕ್ಕೆ ಸಿಲುಕಿದ ಲೆಬನಾನ್ ನಾಗರಿಕರು

- Advertisement -
- Advertisement -

ಗಾಝಾ ಬಳಿಕ ಮತ್ತೊಂದು ಸುಂದರ ನಾಡು ಲೆಬನಾನ್‌ ಮೇಲೆ ಇಸ್ರೇಲ್ ಆಕ್ರಮಣ ಮುಂದುವರೆಸಿದೆ.

ಲೆಬನಾನ್‌ನ ಸಶಸ್ತ್ರ ಗುಂಪು ಹೆಜ್ಬುಲ್ಲಾ ಮತ್ತು ಇಸ್ರೇಲ್ ಸೇನೆ ನಡುವೆ ಗಡಿಯಲ್ಲಿ ಮಾತ್ರ ನಡೆಯುತ್ತಿದ್ದ ಸಂಘರ್ಷ, ಇದೀಗ ಜನವಸತಿ ಪ್ರದೇಶಗಳಿಗೆ ವ್ಯಾಪಿಸಿದೆ. ಈಗಾಗಲೇ ವೈಮಾನಿಕ ದಾಳಿ ನಡೆಸಿ ನೂರಾರು ಜನರನ್ನು ಹತ್ಯೆಗೈದಿರುವ ಇಸ್ರೇಲ್, ಈಗ ನೆಲ ಕಾರ್ಯಾಚರಣೆ (Ground Operation) ಗೆ ಸಜ್ಜಾಗಿದೆ. ಇದರಿಂದ ನೆಮ್ಮದಿಯ ಬದುಕು ನಡೆಸುತ್ತಿರುವ ಅಮಾಯಕ ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಗಾಝಾದಲ್ಲಿ ಹಮಾಸ್ ಹೆಸರೇಳಿಕೊಂಡು 40 ಸಾವಿರಕ್ಕೂ ಅಧಿಕ ಅಮಾಯಕರನ್ನು ನಿರ್ಧಯವಾಗಿ ಕೊಂದು ಹಾಕಿದ್ದಲ್ಲದೆ, ಸುಂದರ ನಗರಗಳನ್ನು ನಕರವಾಗಿಸಿರುವ ಇಸ್ರೇಲ್, ಈಗ ಲೆಬನಾನ್‌ನಲ್ಲೂ ಅದನ್ನೇ ಮುಂದುವರೆಸುವ ಸೂಚನೆ ನೀಡಿದೆ.

ಶುಕ್ರವಾರ ಬೈರುತ್‌ನ ಜನನಿಬಿಡ ದಹಿಯೆ ಉಪನಗರದ ಮೇಲೆ ಇಸ್ರೇಲ್ ಸರಣಿ ದಾಳಿ ನಡೆಸಿದೆ. ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾನನ್ನು ಗುರಿಯಾಗಿಸಿ, ಅದರ ಕೇಂದ್ರ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ವರದಿಗಳು ಹೇಳಿವೆ.

ಹಸನ್ ನಸ್ರಲ್ಲಾನನ್ನು ಈಗಾಗಲೇ ಹತ್ಯೆ ಮಾಡಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಆದರೆ, ಈ ಬಗ್ಗೆ ಇನ್ನೂ ಖಚಿತವಾಗಿಲ್ಲ. ದಕ್ಷಿಣ ಲೆಬನಾನ್‌ನಲ್ಲಿ ಹೆಜ್ಬುಲ್ಲಾದ ಕ್ಷಿಪಣಿ ಘಟಕದ ಕಮಾಂಡರ್ ಮುಹಮ್ಮದ್ ಅಲಿ ಇಸ್ಮಾಯಿಲ್ ಮತ್ತು ಅವರ ಸಹಾಯಕ ಹುಸೈನ್ ಅಹ್ಮದ್ ಇಸ್ಮಾಯಿಲ್ ಅವರನ್ನು ಕೊಂದಿರುವುದಾಗಿ ಇಸ್ರೇಲಿ ಮಿಲಿಟರಿ ಹೇಳಿದೆ.

ಇಂದು (ಸೆ.28) ಮುಂಜಾನೆಯವರೆಗೆ ಇಸ್ರೇಲ್ ಲೆಬನಾನ್‌ನ ಬೈರುತ್ ಮೇಲೆ ಸುಮಾರು 20ಕ್ಕೂ ಹೆಚ್ಚು ಪ್ರತ್ಯೇಕ ವೈಮಾನಿಕ ದಾಳಿಗಳನ್ನು ನಡೆಸಿದೆ. ಇದುವರೆಗೆ ಸುಮಾರು 700 ಜನರು ಸಾವನ್ನಪ್ಪಿದ್ದು, 2 ಸಾವಿರದಷ್ಟು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗಾಝಾದಲ್ಲಿ ಇಸ್ರೇಲ್ ಆಕ್ರಮಣ ಆರಂಭಿಸಿ ಮುಂದಿನ ಅಕ್ಟೋಬರ್ 7ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ. ಈಗಲೂ ಅಲ್ಲಿ ನರಮೇಧ ಕೊನೆಗೊಂಡಿಲ್ಲ. ನಗರಗಳು ಜನರ ವಾಸಕ್ಕೆ ಯೋಗ್ಯವಲ್ಲದ ರೀತಿ ಮಾರ್ಪಟ್ಟಿದೆ.

ಗಾಝಾದಲ್ಲಿ ದಾಳಿ ಆರಂಭಿಸುವಾಗ, “ನಮ್ಮ ಗುರಿ ಹಮಾಸ್ ಹೊರತು ನಾಗರಿಕರಲ್ಲ” ಎಂದು ಇಸ್ರೇಲ್ ಸೇನೆ ಹೇಳಿತ್ತು. ಆದರೆ, ಈಗ ಅಲ್ಲಿ ಬಲಿಯಾದ ಅಮಾಯಕ ನಾಗರಿಕ ಸಂಖ್ಯೆ 40 ಸಾವಿರ ದಾಟಿದೆ. ಈಗ ಲೆಬನಾನ್‌ನಲ್ಲೂ “ನಮ್ಮ ಗುರಿ ಹೆಜ್ಬುಲ್ಲಾ” ಎಂದು ಅದೇ ಹೇಳಿಕೆಯನ್ನು ಇಸ್ರೇಲ್ ಸೇನೆ ಹೇಳುತ್ತಿದೆ. ಈ ನಡುವೆ ಕಳೆದ ಒಂದು ವಾರದಲ್ಲಿ 700ರಷ್ಟು ನಾಗರಿಕರನ್ನು ಕೊಂದು ಹಾಕಿದೆ.

ಇತ್ತ ಸಂಘರ್ಷ ಹೆಚ್ಚಾಗುತ್ತಿದ್ದಂತೆ ಅತ್ತ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುಎಸ್‌ಗೆ ಭೇಟಿ ನೀಡಿದ್ದಾರೆ. ಜಗತ್ತಿಗೆ ಶಾಂತಿ ಕಥೆಯ ಹೇಳುವ ಯುಎಸ್‌, ಇನ್ನಷ್ಟು ಶಸ್ತ್ರಾವನ್ನು ಒದಗಿಸುವ ಭರವಸೆಯನ್ನು ಇಸ್ರೇಲ್‌ಗೆ ನೀಡಿದೆ. ಅಲ್ಲದೆ, ಮಧ್ಯಪ್ರಾಚ್ಯದಲ್ಲಿ ಶಾಂತಿ ತರಲು ಸೇನೆ ಕಳಿಸುವುದಾಗಿ ತಿಳಿಸಿದೆ. ಆದರೆ, ಯುಎಸ್‌ ಈ ಹಿಂದೆ ಸೇನೆ ಕಳಿಸಿದ ರಾಷ್ಟ್ರಗಳಲ್ಲಿ ಏನಾಗಿದೆ ಎಂಬುವುದು ಇಡೀ ಜಗತ್ತಿಗೆ ಗೊತ್ತಿದೆ.

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಶುಕ್ರವಾರ ಬೈರುತ್‌ನ ದಕ್ಷಿಣ ಉಪನಗರಗಳ ಜನನಿಬಿಡ ಪ್ರದೇಶಗಳ ಮೇಲಿನ ಇಸ್ರೇಲ್ ದಾಳಿಯನ್ನು ತೀವ್ರವಾಗಿ ಖಂಡಿಸಿದೆ.

ಇದನ್ನೂ ಓದಿ : ಕೇರಳ | ಪ್ಯಾಲೆಸ್ತೀನ್ ಪರ ಪೋಸ್ಟರ್‌ಗಳನ್ನು ಹರಿದ ಆಸ್ಟ್ರೇಲಿಯನ್ ಪ್ರವಾಸಿಯ ವಿರುದ್ಧದ ಪ್ರಕರಣ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...