Homeಮುಖಪುಟಹೆಜ್ಬುಲ್ಲಾ ಹೆಸರೇಳಿಕೊಂಡು ಜನವಸತಿ ಪ್ರದೇಶಗಳ ಮೇಲೆ ಇಸ್ರೇಲ್ ದಾಳಿ : ಸಂಕಷ್ಟಕ್ಕೆ ಸಿಲುಕಿದ ಲೆಬನಾನ್ ನಾಗರಿಕರು

ಹೆಜ್ಬುಲ್ಲಾ ಹೆಸರೇಳಿಕೊಂಡು ಜನವಸತಿ ಪ್ರದೇಶಗಳ ಮೇಲೆ ಇಸ್ರೇಲ್ ದಾಳಿ : ಸಂಕಷ್ಟಕ್ಕೆ ಸಿಲುಕಿದ ಲೆಬನಾನ್ ನಾಗರಿಕರು

- Advertisement -
- Advertisement -

ಗಾಝಾ ಬಳಿಕ ಮತ್ತೊಂದು ಸುಂದರ ನಾಡು ಲೆಬನಾನ್‌ ಮೇಲೆ ಇಸ್ರೇಲ್ ಆಕ್ರಮಣ ಮುಂದುವರೆಸಿದೆ.

ಲೆಬನಾನ್‌ನ ಸಶಸ್ತ್ರ ಗುಂಪು ಹೆಜ್ಬುಲ್ಲಾ ಮತ್ತು ಇಸ್ರೇಲ್ ಸೇನೆ ನಡುವೆ ಗಡಿಯಲ್ಲಿ ಮಾತ್ರ ನಡೆಯುತ್ತಿದ್ದ ಸಂಘರ್ಷ, ಇದೀಗ ಜನವಸತಿ ಪ್ರದೇಶಗಳಿಗೆ ವ್ಯಾಪಿಸಿದೆ. ಈಗಾಗಲೇ ವೈಮಾನಿಕ ದಾಳಿ ನಡೆಸಿ ನೂರಾರು ಜನರನ್ನು ಹತ್ಯೆಗೈದಿರುವ ಇಸ್ರೇಲ್, ಈಗ ನೆಲ ಕಾರ್ಯಾಚರಣೆ (Ground Operation) ಗೆ ಸಜ್ಜಾಗಿದೆ. ಇದರಿಂದ ನೆಮ್ಮದಿಯ ಬದುಕು ನಡೆಸುತ್ತಿರುವ ಅಮಾಯಕ ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಗಾಝಾದಲ್ಲಿ ಹಮಾಸ್ ಹೆಸರೇಳಿಕೊಂಡು 40 ಸಾವಿರಕ್ಕೂ ಅಧಿಕ ಅಮಾಯಕರನ್ನು ನಿರ್ಧಯವಾಗಿ ಕೊಂದು ಹಾಕಿದ್ದಲ್ಲದೆ, ಸುಂದರ ನಗರಗಳನ್ನು ನಕರವಾಗಿಸಿರುವ ಇಸ್ರೇಲ್, ಈಗ ಲೆಬನಾನ್‌ನಲ್ಲೂ ಅದನ್ನೇ ಮುಂದುವರೆಸುವ ಸೂಚನೆ ನೀಡಿದೆ.

ಶುಕ್ರವಾರ ಬೈರುತ್‌ನ ಜನನಿಬಿಡ ದಹಿಯೆ ಉಪನಗರದ ಮೇಲೆ ಇಸ್ರೇಲ್ ಸರಣಿ ದಾಳಿ ನಡೆಸಿದೆ. ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾನನ್ನು ಗುರಿಯಾಗಿಸಿ, ಅದರ ಕೇಂದ್ರ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ವರದಿಗಳು ಹೇಳಿವೆ.

ಹಸನ್ ನಸ್ರಲ್ಲಾನನ್ನು ಈಗಾಗಲೇ ಹತ್ಯೆ ಮಾಡಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಆದರೆ, ಈ ಬಗ್ಗೆ ಇನ್ನೂ ಖಚಿತವಾಗಿಲ್ಲ. ದಕ್ಷಿಣ ಲೆಬನಾನ್‌ನಲ್ಲಿ ಹೆಜ್ಬುಲ್ಲಾದ ಕ್ಷಿಪಣಿ ಘಟಕದ ಕಮಾಂಡರ್ ಮುಹಮ್ಮದ್ ಅಲಿ ಇಸ್ಮಾಯಿಲ್ ಮತ್ತು ಅವರ ಸಹಾಯಕ ಹುಸೈನ್ ಅಹ್ಮದ್ ಇಸ್ಮಾಯಿಲ್ ಅವರನ್ನು ಕೊಂದಿರುವುದಾಗಿ ಇಸ್ರೇಲಿ ಮಿಲಿಟರಿ ಹೇಳಿದೆ.

ಇಂದು (ಸೆ.28) ಮುಂಜಾನೆಯವರೆಗೆ ಇಸ್ರೇಲ್ ಲೆಬನಾನ್‌ನ ಬೈರುತ್ ಮೇಲೆ ಸುಮಾರು 20ಕ್ಕೂ ಹೆಚ್ಚು ಪ್ರತ್ಯೇಕ ವೈಮಾನಿಕ ದಾಳಿಗಳನ್ನು ನಡೆಸಿದೆ. ಇದುವರೆಗೆ ಸುಮಾರು 700 ಜನರು ಸಾವನ್ನಪ್ಪಿದ್ದು, 2 ಸಾವಿರದಷ್ಟು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗಾಝಾದಲ್ಲಿ ಇಸ್ರೇಲ್ ಆಕ್ರಮಣ ಆರಂಭಿಸಿ ಮುಂದಿನ ಅಕ್ಟೋಬರ್ 7ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ. ಈಗಲೂ ಅಲ್ಲಿ ನರಮೇಧ ಕೊನೆಗೊಂಡಿಲ್ಲ. ನಗರಗಳು ಜನರ ವಾಸಕ್ಕೆ ಯೋಗ್ಯವಲ್ಲದ ರೀತಿ ಮಾರ್ಪಟ್ಟಿದೆ.

ಗಾಝಾದಲ್ಲಿ ದಾಳಿ ಆರಂಭಿಸುವಾಗ, “ನಮ್ಮ ಗುರಿ ಹಮಾಸ್ ಹೊರತು ನಾಗರಿಕರಲ್ಲ” ಎಂದು ಇಸ್ರೇಲ್ ಸೇನೆ ಹೇಳಿತ್ತು. ಆದರೆ, ಈಗ ಅಲ್ಲಿ ಬಲಿಯಾದ ಅಮಾಯಕ ನಾಗರಿಕ ಸಂಖ್ಯೆ 40 ಸಾವಿರ ದಾಟಿದೆ. ಈಗ ಲೆಬನಾನ್‌ನಲ್ಲೂ “ನಮ್ಮ ಗುರಿ ಹೆಜ್ಬುಲ್ಲಾ” ಎಂದು ಅದೇ ಹೇಳಿಕೆಯನ್ನು ಇಸ್ರೇಲ್ ಸೇನೆ ಹೇಳುತ್ತಿದೆ. ಈ ನಡುವೆ ಕಳೆದ ಒಂದು ವಾರದಲ್ಲಿ 700ರಷ್ಟು ನಾಗರಿಕರನ್ನು ಕೊಂದು ಹಾಕಿದೆ.

ಇತ್ತ ಸಂಘರ್ಷ ಹೆಚ್ಚಾಗುತ್ತಿದ್ದಂತೆ ಅತ್ತ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುಎಸ್‌ಗೆ ಭೇಟಿ ನೀಡಿದ್ದಾರೆ. ಜಗತ್ತಿಗೆ ಶಾಂತಿ ಕಥೆಯ ಹೇಳುವ ಯುಎಸ್‌, ಇನ್ನಷ್ಟು ಶಸ್ತ್ರಾವನ್ನು ಒದಗಿಸುವ ಭರವಸೆಯನ್ನು ಇಸ್ರೇಲ್‌ಗೆ ನೀಡಿದೆ. ಅಲ್ಲದೆ, ಮಧ್ಯಪ್ರಾಚ್ಯದಲ್ಲಿ ಶಾಂತಿ ತರಲು ಸೇನೆ ಕಳಿಸುವುದಾಗಿ ತಿಳಿಸಿದೆ. ಆದರೆ, ಯುಎಸ್‌ ಈ ಹಿಂದೆ ಸೇನೆ ಕಳಿಸಿದ ರಾಷ್ಟ್ರಗಳಲ್ಲಿ ಏನಾಗಿದೆ ಎಂಬುವುದು ಇಡೀ ಜಗತ್ತಿಗೆ ಗೊತ್ತಿದೆ.

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಶುಕ್ರವಾರ ಬೈರುತ್‌ನ ದಕ್ಷಿಣ ಉಪನಗರಗಳ ಜನನಿಬಿಡ ಪ್ರದೇಶಗಳ ಮೇಲಿನ ಇಸ್ರೇಲ್ ದಾಳಿಯನ್ನು ತೀವ್ರವಾಗಿ ಖಂಡಿಸಿದೆ.

ಇದನ್ನೂ ಓದಿ : ಕೇರಳ | ಪ್ಯಾಲೆಸ್ತೀನ್ ಪರ ಪೋಸ್ಟರ್‌ಗಳನ್ನು ಹರಿದ ಆಸ್ಟ್ರೇಲಿಯನ್ ಪ್ರವಾಸಿಯ ವಿರುದ್ಧದ ಪ್ರಕರಣ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...