Homeಮುಖಪುಟಹೆಜ್ಬುಲ್ಲಾ ಹೆಸರೇಳಿಕೊಂಡು ಜನವಸತಿ ಪ್ರದೇಶಗಳ ಮೇಲೆ ಇಸ್ರೇಲ್ ದಾಳಿ : ಸಂಕಷ್ಟಕ್ಕೆ ಸಿಲುಕಿದ ಲೆಬನಾನ್ ನಾಗರಿಕರು

ಹೆಜ್ಬುಲ್ಲಾ ಹೆಸರೇಳಿಕೊಂಡು ಜನವಸತಿ ಪ್ರದೇಶಗಳ ಮೇಲೆ ಇಸ್ರೇಲ್ ದಾಳಿ : ಸಂಕಷ್ಟಕ್ಕೆ ಸಿಲುಕಿದ ಲೆಬನಾನ್ ನಾಗರಿಕರು

- Advertisement -
- Advertisement -

ಗಾಝಾ ಬಳಿಕ ಮತ್ತೊಂದು ಸುಂದರ ನಾಡು ಲೆಬನಾನ್‌ ಮೇಲೆ ಇಸ್ರೇಲ್ ಆಕ್ರಮಣ ಮುಂದುವರೆಸಿದೆ.

ಲೆಬನಾನ್‌ನ ಸಶಸ್ತ್ರ ಗುಂಪು ಹೆಜ್ಬುಲ್ಲಾ ಮತ್ತು ಇಸ್ರೇಲ್ ಸೇನೆ ನಡುವೆ ಗಡಿಯಲ್ಲಿ ಮಾತ್ರ ನಡೆಯುತ್ತಿದ್ದ ಸಂಘರ್ಷ, ಇದೀಗ ಜನವಸತಿ ಪ್ರದೇಶಗಳಿಗೆ ವ್ಯಾಪಿಸಿದೆ. ಈಗಾಗಲೇ ವೈಮಾನಿಕ ದಾಳಿ ನಡೆಸಿ ನೂರಾರು ಜನರನ್ನು ಹತ್ಯೆಗೈದಿರುವ ಇಸ್ರೇಲ್, ಈಗ ನೆಲ ಕಾರ್ಯಾಚರಣೆ (Ground Operation) ಗೆ ಸಜ್ಜಾಗಿದೆ. ಇದರಿಂದ ನೆಮ್ಮದಿಯ ಬದುಕು ನಡೆಸುತ್ತಿರುವ ಅಮಾಯಕ ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಗಾಝಾದಲ್ಲಿ ಹಮಾಸ್ ಹೆಸರೇಳಿಕೊಂಡು 40 ಸಾವಿರಕ್ಕೂ ಅಧಿಕ ಅಮಾಯಕರನ್ನು ನಿರ್ಧಯವಾಗಿ ಕೊಂದು ಹಾಕಿದ್ದಲ್ಲದೆ, ಸುಂದರ ನಗರಗಳನ್ನು ನಕರವಾಗಿಸಿರುವ ಇಸ್ರೇಲ್, ಈಗ ಲೆಬನಾನ್‌ನಲ್ಲೂ ಅದನ್ನೇ ಮುಂದುವರೆಸುವ ಸೂಚನೆ ನೀಡಿದೆ.

ಶುಕ್ರವಾರ ಬೈರುತ್‌ನ ಜನನಿಬಿಡ ದಹಿಯೆ ಉಪನಗರದ ಮೇಲೆ ಇಸ್ರೇಲ್ ಸರಣಿ ದಾಳಿ ನಡೆಸಿದೆ. ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾನನ್ನು ಗುರಿಯಾಗಿಸಿ, ಅದರ ಕೇಂದ್ರ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ವರದಿಗಳು ಹೇಳಿವೆ.

ಹಸನ್ ನಸ್ರಲ್ಲಾನನ್ನು ಈಗಾಗಲೇ ಹತ್ಯೆ ಮಾಡಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಆದರೆ, ಈ ಬಗ್ಗೆ ಇನ್ನೂ ಖಚಿತವಾಗಿಲ್ಲ. ದಕ್ಷಿಣ ಲೆಬನಾನ್‌ನಲ್ಲಿ ಹೆಜ್ಬುಲ್ಲಾದ ಕ್ಷಿಪಣಿ ಘಟಕದ ಕಮಾಂಡರ್ ಮುಹಮ್ಮದ್ ಅಲಿ ಇಸ್ಮಾಯಿಲ್ ಮತ್ತು ಅವರ ಸಹಾಯಕ ಹುಸೈನ್ ಅಹ್ಮದ್ ಇಸ್ಮಾಯಿಲ್ ಅವರನ್ನು ಕೊಂದಿರುವುದಾಗಿ ಇಸ್ರೇಲಿ ಮಿಲಿಟರಿ ಹೇಳಿದೆ.

ಇಂದು (ಸೆ.28) ಮುಂಜಾನೆಯವರೆಗೆ ಇಸ್ರೇಲ್ ಲೆಬನಾನ್‌ನ ಬೈರುತ್ ಮೇಲೆ ಸುಮಾರು 20ಕ್ಕೂ ಹೆಚ್ಚು ಪ್ರತ್ಯೇಕ ವೈಮಾನಿಕ ದಾಳಿಗಳನ್ನು ನಡೆಸಿದೆ. ಇದುವರೆಗೆ ಸುಮಾರು 700 ಜನರು ಸಾವನ್ನಪ್ಪಿದ್ದು, 2 ಸಾವಿರದಷ್ಟು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗಾಝಾದಲ್ಲಿ ಇಸ್ರೇಲ್ ಆಕ್ರಮಣ ಆರಂಭಿಸಿ ಮುಂದಿನ ಅಕ್ಟೋಬರ್ 7ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ. ಈಗಲೂ ಅಲ್ಲಿ ನರಮೇಧ ಕೊನೆಗೊಂಡಿಲ್ಲ. ನಗರಗಳು ಜನರ ವಾಸಕ್ಕೆ ಯೋಗ್ಯವಲ್ಲದ ರೀತಿ ಮಾರ್ಪಟ್ಟಿದೆ.

ಗಾಝಾದಲ್ಲಿ ದಾಳಿ ಆರಂಭಿಸುವಾಗ, “ನಮ್ಮ ಗುರಿ ಹಮಾಸ್ ಹೊರತು ನಾಗರಿಕರಲ್ಲ” ಎಂದು ಇಸ್ರೇಲ್ ಸೇನೆ ಹೇಳಿತ್ತು. ಆದರೆ, ಈಗ ಅಲ್ಲಿ ಬಲಿಯಾದ ಅಮಾಯಕ ನಾಗರಿಕ ಸಂಖ್ಯೆ 40 ಸಾವಿರ ದಾಟಿದೆ. ಈಗ ಲೆಬನಾನ್‌ನಲ್ಲೂ “ನಮ್ಮ ಗುರಿ ಹೆಜ್ಬುಲ್ಲಾ” ಎಂದು ಅದೇ ಹೇಳಿಕೆಯನ್ನು ಇಸ್ರೇಲ್ ಸೇನೆ ಹೇಳುತ್ತಿದೆ. ಈ ನಡುವೆ ಕಳೆದ ಒಂದು ವಾರದಲ್ಲಿ 700ರಷ್ಟು ನಾಗರಿಕರನ್ನು ಕೊಂದು ಹಾಕಿದೆ.

ಇತ್ತ ಸಂಘರ್ಷ ಹೆಚ್ಚಾಗುತ್ತಿದ್ದಂತೆ ಅತ್ತ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುಎಸ್‌ಗೆ ಭೇಟಿ ನೀಡಿದ್ದಾರೆ. ಜಗತ್ತಿಗೆ ಶಾಂತಿ ಕಥೆಯ ಹೇಳುವ ಯುಎಸ್‌, ಇನ್ನಷ್ಟು ಶಸ್ತ್ರಾವನ್ನು ಒದಗಿಸುವ ಭರವಸೆಯನ್ನು ಇಸ್ರೇಲ್‌ಗೆ ನೀಡಿದೆ. ಅಲ್ಲದೆ, ಮಧ್ಯಪ್ರಾಚ್ಯದಲ್ಲಿ ಶಾಂತಿ ತರಲು ಸೇನೆ ಕಳಿಸುವುದಾಗಿ ತಿಳಿಸಿದೆ. ಆದರೆ, ಯುಎಸ್‌ ಈ ಹಿಂದೆ ಸೇನೆ ಕಳಿಸಿದ ರಾಷ್ಟ್ರಗಳಲ್ಲಿ ಏನಾಗಿದೆ ಎಂಬುವುದು ಇಡೀ ಜಗತ್ತಿಗೆ ಗೊತ್ತಿದೆ.

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಶುಕ್ರವಾರ ಬೈರುತ್‌ನ ದಕ್ಷಿಣ ಉಪನಗರಗಳ ಜನನಿಬಿಡ ಪ್ರದೇಶಗಳ ಮೇಲಿನ ಇಸ್ರೇಲ್ ದಾಳಿಯನ್ನು ತೀವ್ರವಾಗಿ ಖಂಡಿಸಿದೆ.

ಇದನ್ನೂ ಓದಿ : ಕೇರಳ | ಪ್ಯಾಲೆಸ್ತೀನ್ ಪರ ಪೋಸ್ಟರ್‌ಗಳನ್ನು ಹರಿದ ಆಸ್ಟ್ರೇಲಿಯನ್ ಪ್ರವಾಸಿಯ ವಿರುದ್ಧದ ಪ್ರಕರಣ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...