Homeಮುಖಪುಟಹೆಜ್ಬುಲ್ಲಾ ಹೆಸರೇಳಿಕೊಂಡು ಜನವಸತಿ ಪ್ರದೇಶಗಳ ಮೇಲೆ ಇಸ್ರೇಲ್ ದಾಳಿ : ಸಂಕಷ್ಟಕ್ಕೆ ಸಿಲುಕಿದ ಲೆಬನಾನ್ ನಾಗರಿಕರು

ಹೆಜ್ಬುಲ್ಲಾ ಹೆಸರೇಳಿಕೊಂಡು ಜನವಸತಿ ಪ್ರದೇಶಗಳ ಮೇಲೆ ಇಸ್ರೇಲ್ ದಾಳಿ : ಸಂಕಷ್ಟಕ್ಕೆ ಸಿಲುಕಿದ ಲೆಬನಾನ್ ನಾಗರಿಕರು

- Advertisement -
- Advertisement -

ಗಾಝಾ ಬಳಿಕ ಮತ್ತೊಂದು ಸುಂದರ ನಾಡು ಲೆಬನಾನ್‌ ಮೇಲೆ ಇಸ್ರೇಲ್ ಆಕ್ರಮಣ ಮುಂದುವರೆಸಿದೆ.

ಲೆಬನಾನ್‌ನ ಸಶಸ್ತ್ರ ಗುಂಪು ಹೆಜ್ಬುಲ್ಲಾ ಮತ್ತು ಇಸ್ರೇಲ್ ಸೇನೆ ನಡುವೆ ಗಡಿಯಲ್ಲಿ ಮಾತ್ರ ನಡೆಯುತ್ತಿದ್ದ ಸಂಘರ್ಷ, ಇದೀಗ ಜನವಸತಿ ಪ್ರದೇಶಗಳಿಗೆ ವ್ಯಾಪಿಸಿದೆ. ಈಗಾಗಲೇ ವೈಮಾನಿಕ ದಾಳಿ ನಡೆಸಿ ನೂರಾರು ಜನರನ್ನು ಹತ್ಯೆಗೈದಿರುವ ಇಸ್ರೇಲ್, ಈಗ ನೆಲ ಕಾರ್ಯಾಚರಣೆ (Ground Operation) ಗೆ ಸಜ್ಜಾಗಿದೆ. ಇದರಿಂದ ನೆಮ್ಮದಿಯ ಬದುಕು ನಡೆಸುತ್ತಿರುವ ಅಮಾಯಕ ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಗಾಝಾದಲ್ಲಿ ಹಮಾಸ್ ಹೆಸರೇಳಿಕೊಂಡು 40 ಸಾವಿರಕ್ಕೂ ಅಧಿಕ ಅಮಾಯಕರನ್ನು ನಿರ್ಧಯವಾಗಿ ಕೊಂದು ಹಾಕಿದ್ದಲ್ಲದೆ, ಸುಂದರ ನಗರಗಳನ್ನು ನಕರವಾಗಿಸಿರುವ ಇಸ್ರೇಲ್, ಈಗ ಲೆಬನಾನ್‌ನಲ್ಲೂ ಅದನ್ನೇ ಮುಂದುವರೆಸುವ ಸೂಚನೆ ನೀಡಿದೆ.

ಶುಕ್ರವಾರ ಬೈರುತ್‌ನ ಜನನಿಬಿಡ ದಹಿಯೆ ಉಪನಗರದ ಮೇಲೆ ಇಸ್ರೇಲ್ ಸರಣಿ ದಾಳಿ ನಡೆಸಿದೆ. ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾನನ್ನು ಗುರಿಯಾಗಿಸಿ, ಅದರ ಕೇಂದ್ರ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ವರದಿಗಳು ಹೇಳಿವೆ.

ಹಸನ್ ನಸ್ರಲ್ಲಾನನ್ನು ಈಗಾಗಲೇ ಹತ್ಯೆ ಮಾಡಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಆದರೆ, ಈ ಬಗ್ಗೆ ಇನ್ನೂ ಖಚಿತವಾಗಿಲ್ಲ. ದಕ್ಷಿಣ ಲೆಬನಾನ್‌ನಲ್ಲಿ ಹೆಜ್ಬುಲ್ಲಾದ ಕ್ಷಿಪಣಿ ಘಟಕದ ಕಮಾಂಡರ್ ಮುಹಮ್ಮದ್ ಅಲಿ ಇಸ್ಮಾಯಿಲ್ ಮತ್ತು ಅವರ ಸಹಾಯಕ ಹುಸೈನ್ ಅಹ್ಮದ್ ಇಸ್ಮಾಯಿಲ್ ಅವರನ್ನು ಕೊಂದಿರುವುದಾಗಿ ಇಸ್ರೇಲಿ ಮಿಲಿಟರಿ ಹೇಳಿದೆ.

ಇಂದು (ಸೆ.28) ಮುಂಜಾನೆಯವರೆಗೆ ಇಸ್ರೇಲ್ ಲೆಬನಾನ್‌ನ ಬೈರುತ್ ಮೇಲೆ ಸುಮಾರು 20ಕ್ಕೂ ಹೆಚ್ಚು ಪ್ರತ್ಯೇಕ ವೈಮಾನಿಕ ದಾಳಿಗಳನ್ನು ನಡೆಸಿದೆ. ಇದುವರೆಗೆ ಸುಮಾರು 700 ಜನರು ಸಾವನ್ನಪ್ಪಿದ್ದು, 2 ಸಾವಿರದಷ್ಟು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗಾಝಾದಲ್ಲಿ ಇಸ್ರೇಲ್ ಆಕ್ರಮಣ ಆರಂಭಿಸಿ ಮುಂದಿನ ಅಕ್ಟೋಬರ್ 7ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ. ಈಗಲೂ ಅಲ್ಲಿ ನರಮೇಧ ಕೊನೆಗೊಂಡಿಲ್ಲ. ನಗರಗಳು ಜನರ ವಾಸಕ್ಕೆ ಯೋಗ್ಯವಲ್ಲದ ರೀತಿ ಮಾರ್ಪಟ್ಟಿದೆ.

ಗಾಝಾದಲ್ಲಿ ದಾಳಿ ಆರಂಭಿಸುವಾಗ, “ನಮ್ಮ ಗುರಿ ಹಮಾಸ್ ಹೊರತು ನಾಗರಿಕರಲ್ಲ” ಎಂದು ಇಸ್ರೇಲ್ ಸೇನೆ ಹೇಳಿತ್ತು. ಆದರೆ, ಈಗ ಅಲ್ಲಿ ಬಲಿಯಾದ ಅಮಾಯಕ ನಾಗರಿಕ ಸಂಖ್ಯೆ 40 ಸಾವಿರ ದಾಟಿದೆ. ಈಗ ಲೆಬನಾನ್‌ನಲ್ಲೂ “ನಮ್ಮ ಗುರಿ ಹೆಜ್ಬುಲ್ಲಾ” ಎಂದು ಅದೇ ಹೇಳಿಕೆಯನ್ನು ಇಸ್ರೇಲ್ ಸೇನೆ ಹೇಳುತ್ತಿದೆ. ಈ ನಡುವೆ ಕಳೆದ ಒಂದು ವಾರದಲ್ಲಿ 700ರಷ್ಟು ನಾಗರಿಕರನ್ನು ಕೊಂದು ಹಾಕಿದೆ.

ಇತ್ತ ಸಂಘರ್ಷ ಹೆಚ್ಚಾಗುತ್ತಿದ್ದಂತೆ ಅತ್ತ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುಎಸ್‌ಗೆ ಭೇಟಿ ನೀಡಿದ್ದಾರೆ. ಜಗತ್ತಿಗೆ ಶಾಂತಿ ಕಥೆಯ ಹೇಳುವ ಯುಎಸ್‌, ಇನ್ನಷ್ಟು ಶಸ್ತ್ರಾವನ್ನು ಒದಗಿಸುವ ಭರವಸೆಯನ್ನು ಇಸ್ರೇಲ್‌ಗೆ ನೀಡಿದೆ. ಅಲ್ಲದೆ, ಮಧ್ಯಪ್ರಾಚ್ಯದಲ್ಲಿ ಶಾಂತಿ ತರಲು ಸೇನೆ ಕಳಿಸುವುದಾಗಿ ತಿಳಿಸಿದೆ. ಆದರೆ, ಯುಎಸ್‌ ಈ ಹಿಂದೆ ಸೇನೆ ಕಳಿಸಿದ ರಾಷ್ಟ್ರಗಳಲ್ಲಿ ಏನಾಗಿದೆ ಎಂಬುವುದು ಇಡೀ ಜಗತ್ತಿಗೆ ಗೊತ್ತಿದೆ.

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಶುಕ್ರವಾರ ಬೈರುತ್‌ನ ದಕ್ಷಿಣ ಉಪನಗರಗಳ ಜನನಿಬಿಡ ಪ್ರದೇಶಗಳ ಮೇಲಿನ ಇಸ್ರೇಲ್ ದಾಳಿಯನ್ನು ತೀವ್ರವಾಗಿ ಖಂಡಿಸಿದೆ.

ಇದನ್ನೂ ಓದಿ : ಕೇರಳ | ಪ್ಯಾಲೆಸ್ತೀನ್ ಪರ ಪೋಸ್ಟರ್‌ಗಳನ್ನು ಹರಿದ ಆಸ್ಟ್ರೇಲಿಯನ್ ಪ್ರವಾಸಿಯ ವಿರುದ್ಧದ ಪ್ರಕರಣ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...