Homeಅಂತರಾಷ್ಟ್ರೀಯಗಾಝಾದಲ್ಲಿ ಮತ್ತೆ 700ಕ್ಕೂ ಹೆಚ್ಚು ನಾಗರಿಕರ ಹತ್ಯೆ: ಪ್ರಾದೇಶಿಕ ಸಂಘರ್ಷದ ಅಪಾಯ

ಗಾಝಾದಲ್ಲಿ ಮತ್ತೆ 700ಕ್ಕೂ ಹೆಚ್ಚು ನಾಗರಿಕರ ಹತ್ಯೆ: ಪ್ರಾದೇಶಿಕ ಸಂಘರ್ಷದ ಅಪಾಯ

- Advertisement -
- Advertisement -

4 ದಿನಗಳ ಕದನ ವಿರಾಮದ ಬಳಿಕ ಇಸ್ರೇಲ್‌ ಮತ್ತೆ ಪ್ಯಾಲೆಸ್ತೀನ್‌ ಮೇಲೆ ದಾಳಿಯನ್ನು ಮುಂದುವರಿಸಿದೆ. ಕಳೆದ 24 ಗಂಟೆಗಳಲ್ಲಿ ಗಾಝಾದಲ್ಲಿ 700ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರು ಕೊಲ್ಲಲ್ಪಟ್ಟಿದ್ದಾರೆ ಎಂದು ಗಾಝಾದಲ್ಲಿನ ಸರ್ಕಾರಿ ಮಾಧ್ಯಮ ಕಚೇರಿಯ ಮಹಾನಿರ್ದೇಶಕರು ಅಲ್ ಜಝೀರಾಗೆ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಇಸ್ರೇಲ್‌ ದಾಳಿಯನ್ನು ಇರಾನ್‌ ಖಂಡಿಸಿದ್ದು, ಪ್ರಾದೇಶಿಕ ಸಂಘರ್ಷದ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.

ಇಸ್ರೇಲ್‌ ಹತ್ಯಾಕಾಂಡ ಮುಂದುವರಿದಂತೆ ಗಾಝಾದ ಮೇಲೆ ಇಸ್ರೇಲ್‌ ದಾಳಿ ಕೊನೆಗೊಳ್ಳುವವರೆಗೆ ಬಂಧಿತ ಕೈದಿಗಳ ವಿನಿಮಯದ ಕುರಿತು ಮಾತುಕತೆ ಪುನರಾರಂಭಗೊಳ್ಳುವುದಿಲ್ಲ ಎಂದು ಹಮಾಸ್ ಹೇಳಿದೆ.

ಕದನ ವಿರಾಮ ಕೊನೆಗೊಳ್ಳುತ್ತಿದ್ದಂತೆ ಇಸ್ರೇಲ್‌ ಸೈನ್ಯವು ದಕ್ಷಿಣ ಗಾಝಾದ ಖಾನ್ ಯೂನಿಸ್‌ನಲ್ಲಿರುವ ನಿವಾಸಿಗಳಿಗೆ ಸ್ಥಳ ಬಿಟ್ಟು ತೆರಳುವಂತೆ ಸೂಚಿಸಿದೆ. ವೆಸ್ಟ್‌ ಬ್ಯಾಂಕ್‌ ಮೇಲೆ ಇಂದು ಬೆಳಗ್ಗೆ ಇಸ್ರೇಲ್‌ ಪಡೆಗಳು ನಡೆಸಿದ ದಾಳಿಯಲ್ಲಿ 21 ವರ್ಷದ ಪ್ಯಾಲೆಸ್ತೀನ್‌ ಯುವಕನ ಹತ್ಯೆ ನಡೆದಿದೆ. ಪ್ಯಾಲೆಸ್ತೀನ್‌ನ ಪ್ರಿಸನರ್ಸ್ ಸೊಸೈಟಿಯ ಪ್ರಕಾರ, ವೆಸ್ಟ್‌ ಬ್ಯಾಂಕ್‌ ಮೇಲೆ ರಾತ್ರಿ ಇಸ್ರೇಲ್‌ ಸೇನೆ ದಾಳಿ ನಡೆಸಿ ಕನಿಷ್ಠ 60 ಪ್ಯಾಲೆಸ್ತೀನಿಯನ್ನರನ್ನು ಬಂಧಿಸಿದೆ.

ಯುನಿಸೆಫ್‌ನ ಜಾಗತಿಕ ವಕ್ತಾರರಾದ ಜೇಮ್ಸ್ ಎಲ್ಡರ್ ಅವರು ಗಾಝಾದ ದಕ್ಷಿಣದಲ್ಲಿರುವ ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಯೊಳಗಿನ ದೃಶ್ಯಗಳ ಬಗ್ಗೆ ವಿವರಿಸಿದ್ದಾರೆ. ಆಸ್ಪತ್ರೆಯಲ್ಲಿ ಜನರು ಸುಟ್ಟಗಾಯಗಳು, ತಲೆಗೆ ಗಂಭೀರ ಗಾಯಗಳಾಗಿ ಬಳಲುತ್ತಿದ್ದಾರೆ. ಮಕ್ಕಳು ಮೂಳೆಗಳನ್ನು ಮುರಿದುಕೊಂಡು ನರಳಾಡುತ್ತಿದ್ದಾರೆ. ಸಾವು- ಬದುಕಿನ ನಡುವೆ ಹೋರಾಡುತ್ತಿರುವ ಮಕ್ಕಳನ್ನು ನೋಡಿ ತಾಯಂದಿರು ಅಳುತ್ತಿದ್ದಾರೆ. ಇಸ್ರೇಲ್‌ ವೈಮಾನಿಕ ದಾಳಿಯಲ್ಲಿ ಒಂದು ಕಡೆ ಸಾವು ಸಂಭವಿಸಿದೆರೆ, ಇನ್ನೊಂದು ಕಡೆ ಸಾವು- ಬದುಕಿನ ನಡುವೆ ಮಕ್ಕಳ ನರಳಾಟವು ಕಂಡು ಬರುತ್ತಿದೆ ಎಂದು ಹೇಳಿದ್ದಾರೆ.

ಇರಾನ್‌ನ ವಿದೇಶಾಂಗ ಸಚಿವರು ಪ್ಯಾಲೇಸ್ತೀನಿಯನ್ನರ ವಿರುದ್ಧ ಇಸ್ರೇಲ್ ತನ್ನ ಯುದ್ಧ ಅಪರಾಧಗಳನ್ನು ನಿಲ್ಲಿಸದಿದ್ದರೆ ಆಳವಾದ ಪ್ರಾದೇಶಿಕ ಸಂಘರ್ಷದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಗಾಝಾ ಮತ್ತು ವೆಸ್ಟ್‌ ಬ್ಯಾಂಕ್‌ ಮೇಲೆ ಇಸ್ರೇಲ್‌ ದಾಳಿಯನ್ನು ನಿಲ್ಲಿಸದಿದ್ದರೆ ಈ ಪ್ರದೇಶದಲ್ಲಿ ಯುದ್ಧದ ವ್ಯಾಪ್ತಿ ಆಳವಾಗಿ ವಿಸ್ತರಿಸುವ ಸಾಧ್ಯತೆಯಿದೆ ಎಂದು ಹೊಸೆನ್ ಅಮೀರ್ ಅಬ್ದುಲ್ಲಾಹಿಯಾನ್ ಹೇಳಿದ್ದಾರೆ.

ಪ್ಯಾಲೆಸ್ತೀನಿಯರನ್ನು ತಮ್ಮ ಭೂಮಿಯನ್ನು ಬಿಟ್ಟು ತೆರಳುವಂತೆ ಇಸ್ರೇಲ್‌ ಬಲವಂತ ಪಡಿಸುತ್ತಿರುವುದನ್ನು ಖಂಡಿಸಿದ ಅಬ್ಡೊಲ್ಲಾಹಿಯಾನ್ ಇಸ್ರೇಲ್ ಮಿಲಿಟರಿ ದಾಳಿಯನ್ನು ತಕ್ಷಣಕ್ಕೆ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಅ.7ರಂದು ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಗಾಝಾದಲ್ಲಿ 15,000ಕ್ಕೂ ಅಧಿಕ ಜನರನ್ನು ಹತ್ಯೆ ಮಾಡಿದೆ. ಇದರಲ್ಲಿ 6,000ಕ್ಕೂ ಹೆಚ್ಚು ಮಕ್ಕಳು ಸೇರಿದ್ದಾರೆ. 30,000ಕ್ಕೂ ಅಧಿಕ ಮಂದಿ ಇಸ್ರೇಲ್‌ ದಾಳಿಯಿಂದ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಝಾದ ಆಸ್ಪತ್ರೆಗಳು ನಿರಾಶ್ರಿತರ ಶಿಬಿರಗಳಲ್ಲಿ ಜನರು ತುಂಬಿ ತುಳುಕುತ್ತಿದ್ದು, ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ.

ಕತಾರ್‌ ಮಧ್ಯಸ್ಥಿಕೆಯಲ್ಲಿ ಇತ್ತೀಚೆಗೆ 4 ದಿನಗಳ ಕದನ ವಿರಾಮ ಒಪ್ಪಂದ ಮಾಡಲಾಗಿತ್ತು. ಈ ವೇಳೆ ಇಸ್ರೇಲ್- ಹಮಾಸ್‌ ಒತ್ತೆಯಾಳುಗಳ ಬಿಡುಗಡೆ, ಪ್ಯಾಲೆಸ್ತೀನ್‌ಗೆ ಮಾನವೀಯ ನೆರವಿಗೆ ಒಪ್ಪಂದ ಮಾಡಲಾಗಿತ್ತು. ಆದರೆ ಕದನ ವಿರಾಮದ ಬೆನ್ನಲ್ಲೇ ಇಸ್ರೇಲ್‌ ಮತ್ತೆ ಯುದ್ಧವನ್ನು ಘೋಷಿಸಿತ್ತು.

 ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...