Homeಅಂತರಾಷ್ಟ್ರೀಯಗಾಝಾದಲ್ಲಿ ಮತ್ತೆ 700ಕ್ಕೂ ಹೆಚ್ಚು ನಾಗರಿಕರ ಹತ್ಯೆ: ಪ್ರಾದೇಶಿಕ ಸಂಘರ್ಷದ ಅಪಾಯ

ಗಾಝಾದಲ್ಲಿ ಮತ್ತೆ 700ಕ್ಕೂ ಹೆಚ್ಚು ನಾಗರಿಕರ ಹತ್ಯೆ: ಪ್ರಾದೇಶಿಕ ಸಂಘರ್ಷದ ಅಪಾಯ

- Advertisement -
- Advertisement -

4 ದಿನಗಳ ಕದನ ವಿರಾಮದ ಬಳಿಕ ಇಸ್ರೇಲ್‌ ಮತ್ತೆ ಪ್ಯಾಲೆಸ್ತೀನ್‌ ಮೇಲೆ ದಾಳಿಯನ್ನು ಮುಂದುವರಿಸಿದೆ. ಕಳೆದ 24 ಗಂಟೆಗಳಲ್ಲಿ ಗಾಝಾದಲ್ಲಿ 700ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರು ಕೊಲ್ಲಲ್ಪಟ್ಟಿದ್ದಾರೆ ಎಂದು ಗಾಝಾದಲ್ಲಿನ ಸರ್ಕಾರಿ ಮಾಧ್ಯಮ ಕಚೇರಿಯ ಮಹಾನಿರ್ದೇಶಕರು ಅಲ್ ಜಝೀರಾಗೆ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಇಸ್ರೇಲ್‌ ದಾಳಿಯನ್ನು ಇರಾನ್‌ ಖಂಡಿಸಿದ್ದು, ಪ್ರಾದೇಶಿಕ ಸಂಘರ್ಷದ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.

ಇಸ್ರೇಲ್‌ ಹತ್ಯಾಕಾಂಡ ಮುಂದುವರಿದಂತೆ ಗಾಝಾದ ಮೇಲೆ ಇಸ್ರೇಲ್‌ ದಾಳಿ ಕೊನೆಗೊಳ್ಳುವವರೆಗೆ ಬಂಧಿತ ಕೈದಿಗಳ ವಿನಿಮಯದ ಕುರಿತು ಮಾತುಕತೆ ಪುನರಾರಂಭಗೊಳ್ಳುವುದಿಲ್ಲ ಎಂದು ಹಮಾಸ್ ಹೇಳಿದೆ.

ಕದನ ವಿರಾಮ ಕೊನೆಗೊಳ್ಳುತ್ತಿದ್ದಂತೆ ಇಸ್ರೇಲ್‌ ಸೈನ್ಯವು ದಕ್ಷಿಣ ಗಾಝಾದ ಖಾನ್ ಯೂನಿಸ್‌ನಲ್ಲಿರುವ ನಿವಾಸಿಗಳಿಗೆ ಸ್ಥಳ ಬಿಟ್ಟು ತೆರಳುವಂತೆ ಸೂಚಿಸಿದೆ. ವೆಸ್ಟ್‌ ಬ್ಯಾಂಕ್‌ ಮೇಲೆ ಇಂದು ಬೆಳಗ್ಗೆ ಇಸ್ರೇಲ್‌ ಪಡೆಗಳು ನಡೆಸಿದ ದಾಳಿಯಲ್ಲಿ 21 ವರ್ಷದ ಪ್ಯಾಲೆಸ್ತೀನ್‌ ಯುವಕನ ಹತ್ಯೆ ನಡೆದಿದೆ. ಪ್ಯಾಲೆಸ್ತೀನ್‌ನ ಪ್ರಿಸನರ್ಸ್ ಸೊಸೈಟಿಯ ಪ್ರಕಾರ, ವೆಸ್ಟ್‌ ಬ್ಯಾಂಕ್‌ ಮೇಲೆ ರಾತ್ರಿ ಇಸ್ರೇಲ್‌ ಸೇನೆ ದಾಳಿ ನಡೆಸಿ ಕನಿಷ್ಠ 60 ಪ್ಯಾಲೆಸ್ತೀನಿಯನ್ನರನ್ನು ಬಂಧಿಸಿದೆ.

ಯುನಿಸೆಫ್‌ನ ಜಾಗತಿಕ ವಕ್ತಾರರಾದ ಜೇಮ್ಸ್ ಎಲ್ಡರ್ ಅವರು ಗಾಝಾದ ದಕ್ಷಿಣದಲ್ಲಿರುವ ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಯೊಳಗಿನ ದೃಶ್ಯಗಳ ಬಗ್ಗೆ ವಿವರಿಸಿದ್ದಾರೆ. ಆಸ್ಪತ್ರೆಯಲ್ಲಿ ಜನರು ಸುಟ್ಟಗಾಯಗಳು, ತಲೆಗೆ ಗಂಭೀರ ಗಾಯಗಳಾಗಿ ಬಳಲುತ್ತಿದ್ದಾರೆ. ಮಕ್ಕಳು ಮೂಳೆಗಳನ್ನು ಮುರಿದುಕೊಂಡು ನರಳಾಡುತ್ತಿದ್ದಾರೆ. ಸಾವು- ಬದುಕಿನ ನಡುವೆ ಹೋರಾಡುತ್ತಿರುವ ಮಕ್ಕಳನ್ನು ನೋಡಿ ತಾಯಂದಿರು ಅಳುತ್ತಿದ್ದಾರೆ. ಇಸ್ರೇಲ್‌ ವೈಮಾನಿಕ ದಾಳಿಯಲ್ಲಿ ಒಂದು ಕಡೆ ಸಾವು ಸಂಭವಿಸಿದೆರೆ, ಇನ್ನೊಂದು ಕಡೆ ಸಾವು- ಬದುಕಿನ ನಡುವೆ ಮಕ್ಕಳ ನರಳಾಟವು ಕಂಡು ಬರುತ್ತಿದೆ ಎಂದು ಹೇಳಿದ್ದಾರೆ.

ಇರಾನ್‌ನ ವಿದೇಶಾಂಗ ಸಚಿವರು ಪ್ಯಾಲೇಸ್ತೀನಿಯನ್ನರ ವಿರುದ್ಧ ಇಸ್ರೇಲ್ ತನ್ನ ಯುದ್ಧ ಅಪರಾಧಗಳನ್ನು ನಿಲ್ಲಿಸದಿದ್ದರೆ ಆಳವಾದ ಪ್ರಾದೇಶಿಕ ಸಂಘರ್ಷದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಗಾಝಾ ಮತ್ತು ವೆಸ್ಟ್‌ ಬ್ಯಾಂಕ್‌ ಮೇಲೆ ಇಸ್ರೇಲ್‌ ದಾಳಿಯನ್ನು ನಿಲ್ಲಿಸದಿದ್ದರೆ ಈ ಪ್ರದೇಶದಲ್ಲಿ ಯುದ್ಧದ ವ್ಯಾಪ್ತಿ ಆಳವಾಗಿ ವಿಸ್ತರಿಸುವ ಸಾಧ್ಯತೆಯಿದೆ ಎಂದು ಹೊಸೆನ್ ಅಮೀರ್ ಅಬ್ದುಲ್ಲಾಹಿಯಾನ್ ಹೇಳಿದ್ದಾರೆ.

ಪ್ಯಾಲೆಸ್ತೀನಿಯರನ್ನು ತಮ್ಮ ಭೂಮಿಯನ್ನು ಬಿಟ್ಟು ತೆರಳುವಂತೆ ಇಸ್ರೇಲ್‌ ಬಲವಂತ ಪಡಿಸುತ್ತಿರುವುದನ್ನು ಖಂಡಿಸಿದ ಅಬ್ಡೊಲ್ಲಾಹಿಯಾನ್ ಇಸ್ರೇಲ್ ಮಿಲಿಟರಿ ದಾಳಿಯನ್ನು ತಕ್ಷಣಕ್ಕೆ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಅ.7ರಂದು ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಗಾಝಾದಲ್ಲಿ 15,000ಕ್ಕೂ ಅಧಿಕ ಜನರನ್ನು ಹತ್ಯೆ ಮಾಡಿದೆ. ಇದರಲ್ಲಿ 6,000ಕ್ಕೂ ಹೆಚ್ಚು ಮಕ್ಕಳು ಸೇರಿದ್ದಾರೆ. 30,000ಕ್ಕೂ ಅಧಿಕ ಮಂದಿ ಇಸ್ರೇಲ್‌ ದಾಳಿಯಿಂದ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಝಾದ ಆಸ್ಪತ್ರೆಗಳು ನಿರಾಶ್ರಿತರ ಶಿಬಿರಗಳಲ್ಲಿ ಜನರು ತುಂಬಿ ತುಳುಕುತ್ತಿದ್ದು, ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ.

ಕತಾರ್‌ ಮಧ್ಯಸ್ಥಿಕೆಯಲ್ಲಿ ಇತ್ತೀಚೆಗೆ 4 ದಿನಗಳ ಕದನ ವಿರಾಮ ಒಪ್ಪಂದ ಮಾಡಲಾಗಿತ್ತು. ಈ ವೇಳೆ ಇಸ್ರೇಲ್- ಹಮಾಸ್‌ ಒತ್ತೆಯಾಳುಗಳ ಬಿಡುಗಡೆ, ಪ್ಯಾಲೆಸ್ತೀನ್‌ಗೆ ಮಾನವೀಯ ನೆರವಿಗೆ ಒಪ್ಪಂದ ಮಾಡಲಾಗಿತ್ತು. ಆದರೆ ಕದನ ವಿರಾಮದ ಬೆನ್ನಲ್ಲೇ ಇಸ್ರೇಲ್‌ ಮತ್ತೆ ಯುದ್ಧವನ್ನು ಘೋಷಿಸಿತ್ತು.

 ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...