Homeಅಂತರಾಷ್ಟ್ರೀಯಗಾಝಾದಲ್ಲಿ ಮತ್ತೆ 700ಕ್ಕೂ ಹೆಚ್ಚು ನಾಗರಿಕರ ಹತ್ಯೆ: ಪ್ರಾದೇಶಿಕ ಸಂಘರ್ಷದ ಅಪಾಯ

ಗಾಝಾದಲ್ಲಿ ಮತ್ತೆ 700ಕ್ಕೂ ಹೆಚ್ಚು ನಾಗರಿಕರ ಹತ್ಯೆ: ಪ್ರಾದೇಶಿಕ ಸಂಘರ್ಷದ ಅಪಾಯ

- Advertisement -
- Advertisement -

4 ದಿನಗಳ ಕದನ ವಿರಾಮದ ಬಳಿಕ ಇಸ್ರೇಲ್‌ ಮತ್ತೆ ಪ್ಯಾಲೆಸ್ತೀನ್‌ ಮೇಲೆ ದಾಳಿಯನ್ನು ಮುಂದುವರಿಸಿದೆ. ಕಳೆದ 24 ಗಂಟೆಗಳಲ್ಲಿ ಗಾಝಾದಲ್ಲಿ 700ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರು ಕೊಲ್ಲಲ್ಪಟ್ಟಿದ್ದಾರೆ ಎಂದು ಗಾಝಾದಲ್ಲಿನ ಸರ್ಕಾರಿ ಮಾಧ್ಯಮ ಕಚೇರಿಯ ಮಹಾನಿರ್ದೇಶಕರು ಅಲ್ ಜಝೀರಾಗೆ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಇಸ್ರೇಲ್‌ ದಾಳಿಯನ್ನು ಇರಾನ್‌ ಖಂಡಿಸಿದ್ದು, ಪ್ರಾದೇಶಿಕ ಸಂಘರ್ಷದ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.

ಇಸ್ರೇಲ್‌ ಹತ್ಯಾಕಾಂಡ ಮುಂದುವರಿದಂತೆ ಗಾಝಾದ ಮೇಲೆ ಇಸ್ರೇಲ್‌ ದಾಳಿ ಕೊನೆಗೊಳ್ಳುವವರೆಗೆ ಬಂಧಿತ ಕೈದಿಗಳ ವಿನಿಮಯದ ಕುರಿತು ಮಾತುಕತೆ ಪುನರಾರಂಭಗೊಳ್ಳುವುದಿಲ್ಲ ಎಂದು ಹಮಾಸ್ ಹೇಳಿದೆ.

ಕದನ ವಿರಾಮ ಕೊನೆಗೊಳ್ಳುತ್ತಿದ್ದಂತೆ ಇಸ್ರೇಲ್‌ ಸೈನ್ಯವು ದಕ್ಷಿಣ ಗಾಝಾದ ಖಾನ್ ಯೂನಿಸ್‌ನಲ್ಲಿರುವ ನಿವಾಸಿಗಳಿಗೆ ಸ್ಥಳ ಬಿಟ್ಟು ತೆರಳುವಂತೆ ಸೂಚಿಸಿದೆ. ವೆಸ್ಟ್‌ ಬ್ಯಾಂಕ್‌ ಮೇಲೆ ಇಂದು ಬೆಳಗ್ಗೆ ಇಸ್ರೇಲ್‌ ಪಡೆಗಳು ನಡೆಸಿದ ದಾಳಿಯಲ್ಲಿ 21 ವರ್ಷದ ಪ್ಯಾಲೆಸ್ತೀನ್‌ ಯುವಕನ ಹತ್ಯೆ ನಡೆದಿದೆ. ಪ್ಯಾಲೆಸ್ತೀನ್‌ನ ಪ್ರಿಸನರ್ಸ್ ಸೊಸೈಟಿಯ ಪ್ರಕಾರ, ವೆಸ್ಟ್‌ ಬ್ಯಾಂಕ್‌ ಮೇಲೆ ರಾತ್ರಿ ಇಸ್ರೇಲ್‌ ಸೇನೆ ದಾಳಿ ನಡೆಸಿ ಕನಿಷ್ಠ 60 ಪ್ಯಾಲೆಸ್ತೀನಿಯನ್ನರನ್ನು ಬಂಧಿಸಿದೆ.

ಯುನಿಸೆಫ್‌ನ ಜಾಗತಿಕ ವಕ್ತಾರರಾದ ಜೇಮ್ಸ್ ಎಲ್ಡರ್ ಅವರು ಗಾಝಾದ ದಕ್ಷಿಣದಲ್ಲಿರುವ ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಯೊಳಗಿನ ದೃಶ್ಯಗಳ ಬಗ್ಗೆ ವಿವರಿಸಿದ್ದಾರೆ. ಆಸ್ಪತ್ರೆಯಲ್ಲಿ ಜನರು ಸುಟ್ಟಗಾಯಗಳು, ತಲೆಗೆ ಗಂಭೀರ ಗಾಯಗಳಾಗಿ ಬಳಲುತ್ತಿದ್ದಾರೆ. ಮಕ್ಕಳು ಮೂಳೆಗಳನ್ನು ಮುರಿದುಕೊಂಡು ನರಳಾಡುತ್ತಿದ್ದಾರೆ. ಸಾವು- ಬದುಕಿನ ನಡುವೆ ಹೋರಾಡುತ್ತಿರುವ ಮಕ್ಕಳನ್ನು ನೋಡಿ ತಾಯಂದಿರು ಅಳುತ್ತಿದ್ದಾರೆ. ಇಸ್ರೇಲ್‌ ವೈಮಾನಿಕ ದಾಳಿಯಲ್ಲಿ ಒಂದು ಕಡೆ ಸಾವು ಸಂಭವಿಸಿದೆರೆ, ಇನ್ನೊಂದು ಕಡೆ ಸಾವು- ಬದುಕಿನ ನಡುವೆ ಮಕ್ಕಳ ನರಳಾಟವು ಕಂಡು ಬರುತ್ತಿದೆ ಎಂದು ಹೇಳಿದ್ದಾರೆ.

ಇರಾನ್‌ನ ವಿದೇಶಾಂಗ ಸಚಿವರು ಪ್ಯಾಲೇಸ್ತೀನಿಯನ್ನರ ವಿರುದ್ಧ ಇಸ್ರೇಲ್ ತನ್ನ ಯುದ್ಧ ಅಪರಾಧಗಳನ್ನು ನಿಲ್ಲಿಸದಿದ್ದರೆ ಆಳವಾದ ಪ್ರಾದೇಶಿಕ ಸಂಘರ್ಷದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಗಾಝಾ ಮತ್ತು ವೆಸ್ಟ್‌ ಬ್ಯಾಂಕ್‌ ಮೇಲೆ ಇಸ್ರೇಲ್‌ ದಾಳಿಯನ್ನು ನಿಲ್ಲಿಸದಿದ್ದರೆ ಈ ಪ್ರದೇಶದಲ್ಲಿ ಯುದ್ಧದ ವ್ಯಾಪ್ತಿ ಆಳವಾಗಿ ವಿಸ್ತರಿಸುವ ಸಾಧ್ಯತೆಯಿದೆ ಎಂದು ಹೊಸೆನ್ ಅಮೀರ್ ಅಬ್ದುಲ್ಲಾಹಿಯಾನ್ ಹೇಳಿದ್ದಾರೆ.

ಪ್ಯಾಲೆಸ್ತೀನಿಯರನ್ನು ತಮ್ಮ ಭೂಮಿಯನ್ನು ಬಿಟ್ಟು ತೆರಳುವಂತೆ ಇಸ್ರೇಲ್‌ ಬಲವಂತ ಪಡಿಸುತ್ತಿರುವುದನ್ನು ಖಂಡಿಸಿದ ಅಬ್ಡೊಲ್ಲಾಹಿಯಾನ್ ಇಸ್ರೇಲ್ ಮಿಲಿಟರಿ ದಾಳಿಯನ್ನು ತಕ್ಷಣಕ್ಕೆ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಅ.7ರಂದು ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಗಾಝಾದಲ್ಲಿ 15,000ಕ್ಕೂ ಅಧಿಕ ಜನರನ್ನು ಹತ್ಯೆ ಮಾಡಿದೆ. ಇದರಲ್ಲಿ 6,000ಕ್ಕೂ ಹೆಚ್ಚು ಮಕ್ಕಳು ಸೇರಿದ್ದಾರೆ. 30,000ಕ್ಕೂ ಅಧಿಕ ಮಂದಿ ಇಸ್ರೇಲ್‌ ದಾಳಿಯಿಂದ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಝಾದ ಆಸ್ಪತ್ರೆಗಳು ನಿರಾಶ್ರಿತರ ಶಿಬಿರಗಳಲ್ಲಿ ಜನರು ತುಂಬಿ ತುಳುಕುತ್ತಿದ್ದು, ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ.

ಕತಾರ್‌ ಮಧ್ಯಸ್ಥಿಕೆಯಲ್ಲಿ ಇತ್ತೀಚೆಗೆ 4 ದಿನಗಳ ಕದನ ವಿರಾಮ ಒಪ್ಪಂದ ಮಾಡಲಾಗಿತ್ತು. ಈ ವೇಳೆ ಇಸ್ರೇಲ್- ಹಮಾಸ್‌ ಒತ್ತೆಯಾಳುಗಳ ಬಿಡುಗಡೆ, ಪ್ಯಾಲೆಸ್ತೀನ್‌ಗೆ ಮಾನವೀಯ ನೆರವಿಗೆ ಒಪ್ಪಂದ ಮಾಡಲಾಗಿತ್ತು. ಆದರೆ ಕದನ ವಿರಾಮದ ಬೆನ್ನಲ್ಲೇ ಇಸ್ರೇಲ್‌ ಮತ್ತೆ ಯುದ್ಧವನ್ನು ಘೋಷಿಸಿತ್ತು.

 ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...