Homeಮುಖಪುಟಗಾಝಾದ ಅಲ್-ಮಘಾಝಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: 30ಕ್ಕೂ ಹೆಚ್ಚು ಜನರ ಹತ್ಯೆ

ಗಾಝಾದ ಅಲ್-ಮಘಾಝಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: 30ಕ್ಕೂ ಹೆಚ್ಚು ಜನರ ಹತ್ಯೆ

- Advertisement -
- Advertisement -

ಇಸ್ರೇಲ್ ಸೇನೆಯು ಮಧ್ಯ ಗಾಝಾದಲ್ಲಿರುವ ಅಲ್-ಮಘಾಝಿ ನಿರಾಶ್ರಿತರ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸಿದ್ದು, 30ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಿದೆ ಎಂದು ಪ್ಯಾಲೆಸ್ತೀನ್ ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ನಡೆದ ವೈಮಾನಿಕ ದಾಳಿಯ ಸಂತ್ರಸ್ತರನ್ನು ಡೀರ್ ಎಲ್-ಬಾಲಾಹ್‌ನಲ್ಲಿರುವ ಅಲ್-ಅಕ್ಸಾ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಹಮಾಸ್‌ನ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಪ್ಯಾಲೆಸ್ತೀನಿ ಸುದ್ದಿ ಸಂಸ್ಥೆ ವಾಫಾ ಈ ಹಿಂದೆ ಬಾಂಬ್ ದಾಳಿಯಲ್ಲಿ 51 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ವರದಿ ಮಾಡಿದೆ.

ಜಬಾಲಿಯಾ ಮತ್ತು ಬುರೇಜ್ ನಿರಾಶ್ರಿತರ ಶಿಬಿರಗಳ ಮೇಲಿನ ವಾಯು ದಾಳಿಗಳಲ್ಲಿ 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಪ್ಯಾಲೆಸ್ತೀನ್‌ ಅಧಿಕಾರಿಗಳು ಹೇಳಿದ್ದಾರೆ. ಈ ದಾಳಿಯ ಬಗ್ಗೆ ಅಲ್ ಜಝೀರಾ ಮಾದ್ಯಮ, ಇಸ್ರೇಲ್‌ನ ಮಿಲಿಟರಿಯನ್ನು ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಇಸ್ರೇಲ್‌ ಸೇನಾ ವಕ್ತಾರರು ತಮ್ಮ ಪಡೆಗಳು ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದವೇ ಎಂಬುದರ ಕುರಿತು ತನಿಖೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ತಕ್ಷಣದ ಕದನ ವಿರಾಮಕ್ಕಾಗಿ ಅರಬ್ ದೇಶಗಳ ಕರೆಗಳನ್ನು ಯುನೈಟೆಡ್ ಸ್ಟೇಟ್ಸ್ ಶನಿವಾರ ತಿರಸ್ಕರಿಸಿದ ನಂತರ ಮತ್ತೆ ಗಾಝಾದ ಮೇಲೆ ದಾಳಿಯಾಗಿದೆ. ಯುಎಸ್ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕೆನ್ ಪೂರ್ಣ ಕದನ ವಿರಾಮವು ಹಮಾಸ್‌ನ್ನು ಮರುಸಂಘಟಿತವಾಗಲು ಮತ್ತು ದಾಳಿಗಳನ್ನು ಮಾಡಲು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಹೇಳಿದ್ದರು.

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು 240ಕ್ಕೂ ಹೆಚ್ಚು ಇಸ್ರೇಲ್‌ ಒತ್ತೆಯಾಳುಗಳನ್ನು ಬಿಡುಗಡೆ ಮಾಡದ ಹೊರತು ಕದನ ವಿರಾಮವನ್ನು ತಿರಸ್ಕರಿಸಿದ್ದಾರೆ.

ಉತ್ತರ ಗಾಝಾದ ಜಬಾಲ ನಿರಾಶ್ರಿತರ ಶಿಬಿರದಲ್ಲಿ ಸ್ಥಳಾಂತರಗೊಂಡವರಿಗೆ ಆಶ್ರಯ ನೀಡಿದ್ದ ವಿಶ್ವಸಂಸ್ಥೆ ನಡೆಸುತ್ತಿರುವ ಅಲ್-ಫಕೂರಾ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಟ 15 ಮಂದಿ ಮೃತಪಟ್ಟಿದ್ದು 54 ಮಂದಿ ಗಾಯಗೊಂಡಿರುವುದಾಗಿ ಗಾಝಾದ ಆರೋಗ್ಯ ಇಲಾಖೆ ಹೇಳಿದೆ.

ಗಾಝಾ ಪಟ್ಟಿಯಲ್ಲಿ ಯುದ್ಧದಿಂದ ನಿರಾಶ್ರಿತಗೊಂಡವರು ಆಶ್ರಯ ಪಡೆದಿದ್ದ ತನ್ನ 4 ಶಾಲೆಗಳು ಬಾಂಬ್ ದಾಳಿಯಲ್ಲಿ ಹಾನಿಗೊಳಗಾಗಿವೆ ಎಂದು ವಿಶ್ವಸಂಸ್ಥೆ ಹೇಳಿದೆ. ಇದಲ್ಲದೆ ಉತ್ತರ ಗಾಝಾದಿಂದ ಗಾಯಾಳುಗಳನ್ನು ಸ್ಥಳಾಂತರಿಸಲು ಬಳಸುತ್ತಿದ್ದ ಆಂಬ್ಯುಲೆನ್ಸ್‌ನ್ನು ಗುರಿಯಾಗಿಸಿ ಶುಕ್ರವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ 15 ಜನರು ಮೃತಪಟ್ಟು 60 ಮಂದಿ ಗಾಯಗೊಂಡಿರುವುದಾಗಿ ಗಾಝಾದ ಆರೋಗ್ಯ ಇಲಾಖೆ ಹೇಳಿದೆ.

ಪ್ಯಾಲೆಸ್ತೀನ್ ಅಧಿಕಾರಿಗಳ ಪ್ರಕಾರ, ಹಮಾಸ್‌ ವಿರುದ್ಧ ಇಸ್ರೇಲ್ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗಿನಿಂದ ಗಾಝಾದಲ್ಲಿ ಕನಿಷ್ಠ 9,488 ಪ್ಯಾಲೆಸ್ತೀನಿಯನ್ನರ ಹತ್ಯೆ ನಡೆದಿದೆ.

ಇಸ್ರೇಲ್‌ ಅಧಿಕಾರಿಗಳ ಪ್ರಕಾರ ಅ.7ರಂದು ದಕ್ಷಿಣ ಇಸ್ರೇಲ್‌ನ ಮೇಲೆ ಹಮಾಸ್‌ ಹಠಾತ್ ದಾಳಿ ನಡೆಸಿದಾಗ ಕನಿಷ್ಠ 1,430 ಜನರು ಸಾವನ್ನಪ್ಪಿದ್ದಾರೆ ಮತ್ತು 240ಕ್ಕೂ ಹೆಚ್ಚು ಜನರು ಈಗಲೂ ಒತ್ತೆಯಾಳುಗಳಾಗಿದ್ದಾರೆ.

 

ಇದನ್ನು ಓದಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಸಂಘರ್ಷ ‘ಜಾಗತಿಕ ಬಿಕ್ಕಟ್ಟು’: ಮಾರ್ಟಿನ್ ಗ್ರಿಫಿತ್ಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...