Homeಅಂತರಾಷ್ಟ್ರೀಯದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

ದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

- Advertisement -
- Advertisement -

ಇಸ್ರೇಲ್ ಸಶಸ್ತ್ರ ಪಡೆಗಳು ಭಾನುವಾರ (ಮಾ.23) ರಾತ್ರಿ ದಕ್ಷಿಣ ಗಾಝಾದ ಅತಿದೊಡ್ಡ ವೈದ್ಯಕೀಯ ಸೌಲಭ್ಯವಾದ ನಾಸರ್ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆಸಿದೆ.

ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗವನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಹಮಾಸ್‌ನ ಉನ್ನತ ಅಧಿಕಾರಿ ಇಸ್ಮಾಯಿಲ್ ಬರ್ಹೌಮ್ ಸೇರಿದಂತೆ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದಾಳಿಯಿಂದ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳು ಹೇಳಿವೆ.

ಇಸ್ರೇಲ್ ಸೇನೆಯು ಆಸ್ಪತ್ರೆ ಮೇಲೆ ದಾಳಿ ನಡೆಸಿರುವುದನ್ನು ದೃಢಪಡಿಸಿದ್ದು, ಅಲ್ಲಿದ್ದ ಹಮಾಸ್ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ ಎಂದು ತಿಳಿಸಿದೆ. ಜನನಿಬಿಡ ಪ್ರದೇಶಗಳಲ್ಲಿ ಹಮಾಸ್ ಇರುವಿಕೆಯೇ ನಾಗರಿಕರ ಸಾವುನೋವುಗಳಿಗೆ ಕಾರಣ ಎಂದು ಹೇಳಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್‌) “ಗಾಝಾದ ನಾಸರ್ ಆಸ್ಪತ್ರೆಯ ಆವರಣದೊಳಗಿಂದ ಕಾರ್ಯಾಚರಣೆ ನಡೆಸುತ್ತಿದ್ದ ಪ್ರಮುಖ ಹಮಾಸ್ ಭಯೋತ್ಪಾದಕನ ಮೇಲೆ ದಾಳಿ ನಡೆಸಲಾಗಿದೆ. ಹಮಾಸ್ ನಾಗರಿಕ ಮೂಲಸೌಕರ್ಯವನ್ನು ಬಳಸಿಕೊಳ್ಳುತ್ತಿದೆ ಮತ್ತು ಗಾಝಾದ ಜನಸಂಖ್ಯೆಯನ್ನು ದೊಡ್ಡ ಅಪಾಯಕ್ಕೆ ಸಿಲುಕಿಸಿದೆ. ಆಸ್ಪತ್ರೆಯನ್ನು ಆಶ್ರಯ ತಾಣವಾಗಿ ಬಳಸಿಕೊಂಡು ಅಂತಾರಾಷ್ಟ್ರೀಯ ಕಾನೂನಿನ ನೇರ ಉಲ್ಲಂಘನೆ ಮೂಲಕ ಭಯೋತ್ಪಾದಕ ದಾಳಿಗಳನ್ನು ಹಮಾಸ್ ಯೋಜಿಸುತ್ತಿದೆ” ಎಂದು ಆರೋಪಿಸಿದೆ.

ಗಾಝಾದಾ ಇತರ ವೈದ್ಯಕೀಯ ಸೌಲಭ್ಯಗಳಂತೆಯೇ ನಾಸರ್ ಆಸ್ಪತ್ರೆಯೂ ಕೂಡ ಒಂದೂವರೆ ವರ್ಷದ ಇಸ್ರೇಲ್‌ ಸೇನೆಯ ನಿರಂತರ ಆಕ್ರಮಣದಿಂದ ಹಾನಿಗೊಳಗಾಗಿದೆ.

ಇಸ್ರೇಲಿ ಪಡೆಗಳು ಗಾಝಾದ ಅಲ್-ಮವಾಸಿಯಲ್ಲಿರುವ ಟೆಂಟ್ ಮೇಲೆ ಬಾಂಬ್ ದಾಳಿ ನಡೆಸಿ ಹಮಾಸ್‌ನ ರಾಜಕೀಯ ಬ್ಯೂರೋದ ಎರಡನೇ ಸದಸ್ಯ ಸಲಾಹ್ ಅಲ್-ಬರ್ದಾವಿಲ್ ಅವರನ್ನು ಕೊಂದ ಕೆಲವೇ ಗಂಟೆಗಳ ನಂತರ ಇಸ್ಮಾಯಿಲ್ ಬರ್ಹೌಮ್ ಹತ್ಯೆ ನಡೆದಿದೆ.

ಆಕ್ರಮಣದ ನಡುವೆ, ಇಸ್ರೇಲ್ ಸೇನೆ ರಫಾದಲ್ಲಿ ಧ್ವಂಸಗೊಂಡ ಟೆಲ್ ಅಲ್-ಸುಲ್ತಾನ್ ಪ್ರದೇಶದಿಂದ ಹೊರ ಹೋಗುವಂತೆ ಸಾವಿರಾರು ಪ್ಯಾಲೆಸ್ತೀನಿಯರಿಗೆ ಆದೇಶಿಸಿದೆ. ಇಲ್ಲಿಂದ ಸ್ಥಳಾಂತರಗೊಂಡ ಕುಟುಂಬಗಳು ಮುವಾಸಿಗೆ ಓಡಿ ಹೋಗಿದ್ದಾರೆ. ಮುವಾಸಿ ಕಿಕ್ಕಿರಿದ ಟೆಂಟ್ ಶಿಬಿರಗಳಿಂದ ತುಂಬಿದ ತಾತ್ಕಾಲಿಕ ಪ್ರದೇಶವಾಗಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್‌ ಸೇನೆ ನಿರಂತರವಾಗಿ ಗಾಝಾದ ಮೇಲೆ ನಡೆಸುತ್ತಿರುವ ದಾಳಿಯಿಂದ ಇದುವರೆಗೆ 50,021 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 113,274 ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾದ ಸರ್ಕಾರಿ ಮಾಧ್ಯಮಗಳು ಸಾವಿನ ಸಂಖ್ಯೆ 61,700ಕ್ಕೂ ಹೆಚ್ಚು ಎಂದಿವೆ. ಇಸ್ರೇಲ್ ಸೇನೆ ಹೊಡೆದುರುಳಿಸಿದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಬಾಕಿಯಾಗಿರುವ ಸಾವಿರಾರು ಮಂದಿ ಪ್ಯಾಲೆಸ್ತೀನಿಯರು ಸತ್ತಿದ್ದಾರೆಂದು ಭಾವಿಸಿ ಈ ಲೆಕ್ಕ ಹಾಕಲಾಗಿದೆ.

ನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...