Homeಅಂತರಾಷ್ಟ್ರೀಯದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

ದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

- Advertisement -
- Advertisement -

ಇಸ್ರೇಲ್ ಸಶಸ್ತ್ರ ಪಡೆಗಳು ಭಾನುವಾರ (ಮಾ.23) ರಾತ್ರಿ ದಕ್ಷಿಣ ಗಾಝಾದ ಅತಿದೊಡ್ಡ ವೈದ್ಯಕೀಯ ಸೌಲಭ್ಯವಾದ ನಾಸರ್ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆಸಿದೆ.

ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗವನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಹಮಾಸ್‌ನ ಉನ್ನತ ಅಧಿಕಾರಿ ಇಸ್ಮಾಯಿಲ್ ಬರ್ಹೌಮ್ ಸೇರಿದಂತೆ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದಾಳಿಯಿಂದ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳು ಹೇಳಿವೆ.

ಇಸ್ರೇಲ್ ಸೇನೆಯು ಆಸ್ಪತ್ರೆ ಮೇಲೆ ದಾಳಿ ನಡೆಸಿರುವುದನ್ನು ದೃಢಪಡಿಸಿದ್ದು, ಅಲ್ಲಿದ್ದ ಹಮಾಸ್ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ ಎಂದು ತಿಳಿಸಿದೆ. ಜನನಿಬಿಡ ಪ್ರದೇಶಗಳಲ್ಲಿ ಹಮಾಸ್ ಇರುವಿಕೆಯೇ ನಾಗರಿಕರ ಸಾವುನೋವುಗಳಿಗೆ ಕಾರಣ ಎಂದು ಹೇಳಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್‌) “ಗಾಝಾದ ನಾಸರ್ ಆಸ್ಪತ್ರೆಯ ಆವರಣದೊಳಗಿಂದ ಕಾರ್ಯಾಚರಣೆ ನಡೆಸುತ್ತಿದ್ದ ಪ್ರಮುಖ ಹಮಾಸ್ ಭಯೋತ್ಪಾದಕನ ಮೇಲೆ ದಾಳಿ ನಡೆಸಲಾಗಿದೆ. ಹಮಾಸ್ ನಾಗರಿಕ ಮೂಲಸೌಕರ್ಯವನ್ನು ಬಳಸಿಕೊಳ್ಳುತ್ತಿದೆ ಮತ್ತು ಗಾಝಾದ ಜನಸಂಖ್ಯೆಯನ್ನು ದೊಡ್ಡ ಅಪಾಯಕ್ಕೆ ಸಿಲುಕಿಸಿದೆ. ಆಸ್ಪತ್ರೆಯನ್ನು ಆಶ್ರಯ ತಾಣವಾಗಿ ಬಳಸಿಕೊಂಡು ಅಂತಾರಾಷ್ಟ್ರೀಯ ಕಾನೂನಿನ ನೇರ ಉಲ್ಲಂಘನೆ ಮೂಲಕ ಭಯೋತ್ಪಾದಕ ದಾಳಿಗಳನ್ನು ಹಮಾಸ್ ಯೋಜಿಸುತ್ತಿದೆ” ಎಂದು ಆರೋಪಿಸಿದೆ.

ಗಾಝಾದಾ ಇತರ ವೈದ್ಯಕೀಯ ಸೌಲಭ್ಯಗಳಂತೆಯೇ ನಾಸರ್ ಆಸ್ಪತ್ರೆಯೂ ಕೂಡ ಒಂದೂವರೆ ವರ್ಷದ ಇಸ್ರೇಲ್‌ ಸೇನೆಯ ನಿರಂತರ ಆಕ್ರಮಣದಿಂದ ಹಾನಿಗೊಳಗಾಗಿದೆ.

ಇಸ್ರೇಲಿ ಪಡೆಗಳು ಗಾಝಾದ ಅಲ್-ಮವಾಸಿಯಲ್ಲಿರುವ ಟೆಂಟ್ ಮೇಲೆ ಬಾಂಬ್ ದಾಳಿ ನಡೆಸಿ ಹಮಾಸ್‌ನ ರಾಜಕೀಯ ಬ್ಯೂರೋದ ಎರಡನೇ ಸದಸ್ಯ ಸಲಾಹ್ ಅಲ್-ಬರ್ದಾವಿಲ್ ಅವರನ್ನು ಕೊಂದ ಕೆಲವೇ ಗಂಟೆಗಳ ನಂತರ ಇಸ್ಮಾಯಿಲ್ ಬರ್ಹೌಮ್ ಹತ್ಯೆ ನಡೆದಿದೆ.

ಆಕ್ರಮಣದ ನಡುವೆ, ಇಸ್ರೇಲ್ ಸೇನೆ ರಫಾದಲ್ಲಿ ಧ್ವಂಸಗೊಂಡ ಟೆಲ್ ಅಲ್-ಸುಲ್ತಾನ್ ಪ್ರದೇಶದಿಂದ ಹೊರ ಹೋಗುವಂತೆ ಸಾವಿರಾರು ಪ್ಯಾಲೆಸ್ತೀನಿಯರಿಗೆ ಆದೇಶಿಸಿದೆ. ಇಲ್ಲಿಂದ ಸ್ಥಳಾಂತರಗೊಂಡ ಕುಟುಂಬಗಳು ಮುವಾಸಿಗೆ ಓಡಿ ಹೋಗಿದ್ದಾರೆ. ಮುವಾಸಿ ಕಿಕ್ಕಿರಿದ ಟೆಂಟ್ ಶಿಬಿರಗಳಿಂದ ತುಂಬಿದ ತಾತ್ಕಾಲಿಕ ಪ್ರದೇಶವಾಗಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್‌ ಸೇನೆ ನಿರಂತರವಾಗಿ ಗಾಝಾದ ಮೇಲೆ ನಡೆಸುತ್ತಿರುವ ದಾಳಿಯಿಂದ ಇದುವರೆಗೆ 50,021 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 113,274 ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾದ ಸರ್ಕಾರಿ ಮಾಧ್ಯಮಗಳು ಸಾವಿನ ಸಂಖ್ಯೆ 61,700ಕ್ಕೂ ಹೆಚ್ಚು ಎಂದಿವೆ. ಇಸ್ರೇಲ್ ಸೇನೆ ಹೊಡೆದುರುಳಿಸಿದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಬಾಕಿಯಾಗಿರುವ ಸಾವಿರಾರು ಮಂದಿ ಪ್ಯಾಲೆಸ್ತೀನಿಯರು ಸತ್ತಿದ್ದಾರೆಂದು ಭಾವಿಸಿ ಈ ಲೆಕ್ಕ ಹಾಕಲಾಗಿದೆ.

ನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...