Homeಅಂತರಾಷ್ಟ್ರೀಯದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

ದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

- Advertisement -
- Advertisement -

ಇಸ್ರೇಲ್ ಸಶಸ್ತ್ರ ಪಡೆಗಳು ಭಾನುವಾರ (ಮಾ.23) ರಾತ್ರಿ ದಕ್ಷಿಣ ಗಾಝಾದ ಅತಿದೊಡ್ಡ ವೈದ್ಯಕೀಯ ಸೌಲಭ್ಯವಾದ ನಾಸರ್ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆಸಿದೆ.

ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗವನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಹಮಾಸ್‌ನ ಉನ್ನತ ಅಧಿಕಾರಿ ಇಸ್ಮಾಯಿಲ್ ಬರ್ಹೌಮ್ ಸೇರಿದಂತೆ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದಾಳಿಯಿಂದ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳು ಹೇಳಿವೆ.

ಇಸ್ರೇಲ್ ಸೇನೆಯು ಆಸ್ಪತ್ರೆ ಮೇಲೆ ದಾಳಿ ನಡೆಸಿರುವುದನ್ನು ದೃಢಪಡಿಸಿದ್ದು, ಅಲ್ಲಿದ್ದ ಹಮಾಸ್ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ ಎಂದು ತಿಳಿಸಿದೆ. ಜನನಿಬಿಡ ಪ್ರದೇಶಗಳಲ್ಲಿ ಹಮಾಸ್ ಇರುವಿಕೆಯೇ ನಾಗರಿಕರ ಸಾವುನೋವುಗಳಿಗೆ ಕಾರಣ ಎಂದು ಹೇಳಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್‌) “ಗಾಝಾದ ನಾಸರ್ ಆಸ್ಪತ್ರೆಯ ಆವರಣದೊಳಗಿಂದ ಕಾರ್ಯಾಚರಣೆ ನಡೆಸುತ್ತಿದ್ದ ಪ್ರಮುಖ ಹಮಾಸ್ ಭಯೋತ್ಪಾದಕನ ಮೇಲೆ ದಾಳಿ ನಡೆಸಲಾಗಿದೆ. ಹಮಾಸ್ ನಾಗರಿಕ ಮೂಲಸೌಕರ್ಯವನ್ನು ಬಳಸಿಕೊಳ್ಳುತ್ತಿದೆ ಮತ್ತು ಗಾಝಾದ ಜನಸಂಖ್ಯೆಯನ್ನು ದೊಡ್ಡ ಅಪಾಯಕ್ಕೆ ಸಿಲುಕಿಸಿದೆ. ಆಸ್ಪತ್ರೆಯನ್ನು ಆಶ್ರಯ ತಾಣವಾಗಿ ಬಳಸಿಕೊಂಡು ಅಂತಾರಾಷ್ಟ್ರೀಯ ಕಾನೂನಿನ ನೇರ ಉಲ್ಲಂಘನೆ ಮೂಲಕ ಭಯೋತ್ಪಾದಕ ದಾಳಿಗಳನ್ನು ಹಮಾಸ್ ಯೋಜಿಸುತ್ತಿದೆ” ಎಂದು ಆರೋಪಿಸಿದೆ.

ಗಾಝಾದಾ ಇತರ ವೈದ್ಯಕೀಯ ಸೌಲಭ್ಯಗಳಂತೆಯೇ ನಾಸರ್ ಆಸ್ಪತ್ರೆಯೂ ಕೂಡ ಒಂದೂವರೆ ವರ್ಷದ ಇಸ್ರೇಲ್‌ ಸೇನೆಯ ನಿರಂತರ ಆಕ್ರಮಣದಿಂದ ಹಾನಿಗೊಳಗಾಗಿದೆ.

ಇಸ್ರೇಲಿ ಪಡೆಗಳು ಗಾಝಾದ ಅಲ್-ಮವಾಸಿಯಲ್ಲಿರುವ ಟೆಂಟ್ ಮೇಲೆ ಬಾಂಬ್ ದಾಳಿ ನಡೆಸಿ ಹಮಾಸ್‌ನ ರಾಜಕೀಯ ಬ್ಯೂರೋದ ಎರಡನೇ ಸದಸ್ಯ ಸಲಾಹ್ ಅಲ್-ಬರ್ದಾವಿಲ್ ಅವರನ್ನು ಕೊಂದ ಕೆಲವೇ ಗಂಟೆಗಳ ನಂತರ ಇಸ್ಮಾಯಿಲ್ ಬರ್ಹೌಮ್ ಹತ್ಯೆ ನಡೆದಿದೆ.

ಆಕ್ರಮಣದ ನಡುವೆ, ಇಸ್ರೇಲ್ ಸೇನೆ ರಫಾದಲ್ಲಿ ಧ್ವಂಸಗೊಂಡ ಟೆಲ್ ಅಲ್-ಸುಲ್ತಾನ್ ಪ್ರದೇಶದಿಂದ ಹೊರ ಹೋಗುವಂತೆ ಸಾವಿರಾರು ಪ್ಯಾಲೆಸ್ತೀನಿಯರಿಗೆ ಆದೇಶಿಸಿದೆ. ಇಲ್ಲಿಂದ ಸ್ಥಳಾಂತರಗೊಂಡ ಕುಟುಂಬಗಳು ಮುವಾಸಿಗೆ ಓಡಿ ಹೋಗಿದ್ದಾರೆ. ಮುವಾಸಿ ಕಿಕ್ಕಿರಿದ ಟೆಂಟ್ ಶಿಬಿರಗಳಿಂದ ತುಂಬಿದ ತಾತ್ಕಾಲಿಕ ಪ್ರದೇಶವಾಗಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್‌ ಸೇನೆ ನಿರಂತರವಾಗಿ ಗಾಝಾದ ಮೇಲೆ ನಡೆಸುತ್ತಿರುವ ದಾಳಿಯಿಂದ ಇದುವರೆಗೆ 50,021 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 113,274 ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾದ ಸರ್ಕಾರಿ ಮಾಧ್ಯಮಗಳು ಸಾವಿನ ಸಂಖ್ಯೆ 61,700ಕ್ಕೂ ಹೆಚ್ಚು ಎಂದಿವೆ. ಇಸ್ರೇಲ್ ಸೇನೆ ಹೊಡೆದುರುಳಿಸಿದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಬಾಕಿಯಾಗಿರುವ ಸಾವಿರಾರು ಮಂದಿ ಪ್ಯಾಲೆಸ್ತೀನಿಯರು ಸತ್ತಿದ್ದಾರೆಂದು ಭಾವಿಸಿ ಈ ಲೆಕ್ಕ ಹಾಕಲಾಗಿದೆ.

ನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...