Homeಅಂತರಾಷ್ಟ್ರೀಯದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

ದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

- Advertisement -
- Advertisement -

ಇಸ್ರೇಲ್ ಸಶಸ್ತ್ರ ಪಡೆಗಳು ಭಾನುವಾರ (ಮಾ.23) ರಾತ್ರಿ ದಕ್ಷಿಣ ಗಾಝಾದ ಅತಿದೊಡ್ಡ ವೈದ್ಯಕೀಯ ಸೌಲಭ್ಯವಾದ ನಾಸರ್ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆಸಿದೆ.

ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗವನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಹಮಾಸ್‌ನ ಉನ್ನತ ಅಧಿಕಾರಿ ಇಸ್ಮಾಯಿಲ್ ಬರ್ಹೌಮ್ ಸೇರಿದಂತೆ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದಾಳಿಯಿಂದ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳು ಹೇಳಿವೆ.

ಇಸ್ರೇಲ್ ಸೇನೆಯು ಆಸ್ಪತ್ರೆ ಮೇಲೆ ದಾಳಿ ನಡೆಸಿರುವುದನ್ನು ದೃಢಪಡಿಸಿದ್ದು, ಅಲ್ಲಿದ್ದ ಹಮಾಸ್ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ ಎಂದು ತಿಳಿಸಿದೆ. ಜನನಿಬಿಡ ಪ್ರದೇಶಗಳಲ್ಲಿ ಹಮಾಸ್ ಇರುವಿಕೆಯೇ ನಾಗರಿಕರ ಸಾವುನೋವುಗಳಿಗೆ ಕಾರಣ ಎಂದು ಹೇಳಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್‌) “ಗಾಝಾದ ನಾಸರ್ ಆಸ್ಪತ್ರೆಯ ಆವರಣದೊಳಗಿಂದ ಕಾರ್ಯಾಚರಣೆ ನಡೆಸುತ್ತಿದ್ದ ಪ್ರಮುಖ ಹಮಾಸ್ ಭಯೋತ್ಪಾದಕನ ಮೇಲೆ ದಾಳಿ ನಡೆಸಲಾಗಿದೆ. ಹಮಾಸ್ ನಾಗರಿಕ ಮೂಲಸೌಕರ್ಯವನ್ನು ಬಳಸಿಕೊಳ್ಳುತ್ತಿದೆ ಮತ್ತು ಗಾಝಾದ ಜನಸಂಖ್ಯೆಯನ್ನು ದೊಡ್ಡ ಅಪಾಯಕ್ಕೆ ಸಿಲುಕಿಸಿದೆ. ಆಸ್ಪತ್ರೆಯನ್ನು ಆಶ್ರಯ ತಾಣವಾಗಿ ಬಳಸಿಕೊಂಡು ಅಂತಾರಾಷ್ಟ್ರೀಯ ಕಾನೂನಿನ ನೇರ ಉಲ್ಲಂಘನೆ ಮೂಲಕ ಭಯೋತ್ಪಾದಕ ದಾಳಿಗಳನ್ನು ಹಮಾಸ್ ಯೋಜಿಸುತ್ತಿದೆ” ಎಂದು ಆರೋಪಿಸಿದೆ.

ಗಾಝಾದಾ ಇತರ ವೈದ್ಯಕೀಯ ಸೌಲಭ್ಯಗಳಂತೆಯೇ ನಾಸರ್ ಆಸ್ಪತ್ರೆಯೂ ಕೂಡ ಒಂದೂವರೆ ವರ್ಷದ ಇಸ್ರೇಲ್‌ ಸೇನೆಯ ನಿರಂತರ ಆಕ್ರಮಣದಿಂದ ಹಾನಿಗೊಳಗಾಗಿದೆ.

ಇಸ್ರೇಲಿ ಪಡೆಗಳು ಗಾಝಾದ ಅಲ್-ಮವಾಸಿಯಲ್ಲಿರುವ ಟೆಂಟ್ ಮೇಲೆ ಬಾಂಬ್ ದಾಳಿ ನಡೆಸಿ ಹಮಾಸ್‌ನ ರಾಜಕೀಯ ಬ್ಯೂರೋದ ಎರಡನೇ ಸದಸ್ಯ ಸಲಾಹ್ ಅಲ್-ಬರ್ದಾವಿಲ್ ಅವರನ್ನು ಕೊಂದ ಕೆಲವೇ ಗಂಟೆಗಳ ನಂತರ ಇಸ್ಮಾಯಿಲ್ ಬರ್ಹೌಮ್ ಹತ್ಯೆ ನಡೆದಿದೆ.

ಆಕ್ರಮಣದ ನಡುವೆ, ಇಸ್ರೇಲ್ ಸೇನೆ ರಫಾದಲ್ಲಿ ಧ್ವಂಸಗೊಂಡ ಟೆಲ್ ಅಲ್-ಸುಲ್ತಾನ್ ಪ್ರದೇಶದಿಂದ ಹೊರ ಹೋಗುವಂತೆ ಸಾವಿರಾರು ಪ್ಯಾಲೆಸ್ತೀನಿಯರಿಗೆ ಆದೇಶಿಸಿದೆ. ಇಲ್ಲಿಂದ ಸ್ಥಳಾಂತರಗೊಂಡ ಕುಟುಂಬಗಳು ಮುವಾಸಿಗೆ ಓಡಿ ಹೋಗಿದ್ದಾರೆ. ಮುವಾಸಿ ಕಿಕ್ಕಿರಿದ ಟೆಂಟ್ ಶಿಬಿರಗಳಿಂದ ತುಂಬಿದ ತಾತ್ಕಾಲಿಕ ಪ್ರದೇಶವಾಗಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್‌ ಸೇನೆ ನಿರಂತರವಾಗಿ ಗಾಝಾದ ಮೇಲೆ ನಡೆಸುತ್ತಿರುವ ದಾಳಿಯಿಂದ ಇದುವರೆಗೆ 50,021 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 113,274 ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾದ ಸರ್ಕಾರಿ ಮಾಧ್ಯಮಗಳು ಸಾವಿನ ಸಂಖ್ಯೆ 61,700ಕ್ಕೂ ಹೆಚ್ಚು ಎಂದಿವೆ. ಇಸ್ರೇಲ್ ಸೇನೆ ಹೊಡೆದುರುಳಿಸಿದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಬಾಕಿಯಾಗಿರುವ ಸಾವಿರಾರು ಮಂದಿ ಪ್ಯಾಲೆಸ್ತೀನಿಯರು ಸತ್ತಿದ್ದಾರೆಂದು ಭಾವಿಸಿ ಈ ಲೆಕ್ಕ ಹಾಕಲಾಗಿದೆ.

ನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...